Advertisement
ಕೃಷಿಮಾತು

ಅಡಿಕೆ ಪರ್ಯಾಯ ಬಳಕೆ ವಿಚಾರಗೋಷ್ಠಿ | ಕೃಷಿಕ ಎ ಪಿ ಸದಾಶಿವ ಹೇಳಿದ್ದು… ಸೆಮಿನಾರ್ ಬಳಿಕ ನಾನು ವೀಳ್ಯದೆಲೆ ಬಳ್ಳಿ ನಾಟಿ ಮಾಡಿದೆ |

Share
ಈಚೆಗೆ ಅಡಿಕೆ ಹೊಸಬಳಕೆಯ ವಿಚಾರಗೋಷ್ಠಿ ಪುತ್ತೂರಿನಲ್ಲಿ  ನಡೆಯಿತು. ಅಡಿಕೆಯ ಪರ್ಯಾಯ ಬಳಕೆಯನ್ನು ಕೇಂದ್ರೀಕರಿಸಿ ಇದ್ದ ವಿಚಾರಗೋಷ್ಠಿಯಲ್ಲಿ ಅಡಿಕೆಯ ಬಳಕೆ, ಅಡಿಕೆಯ ಹಲವು ಉತ್ಪನ್ನಗಳ ಪರಿಚಯ ಮಾಡಲಾಯಿತು. ಡಿಕೆ ಉತ್ಪನ್ನ ತಯಾರು ಮಾಡಿದ ಹಲವು ಮಂದಿ ಇದ್ದರು. ಈ ಗೋಷ್ಠಿಯ ಬಳಿಕ ಕೃಷಿಕ ಎ ಪಿ ಸದಾಶಿವ ಅವರ ಅಭಿಪ್ರಾಯ ಹೀಗಿತ್ತು….

ಅಡಿಕೆ ಪರ್ಯಾಯ ಬಳಕೆಯ ಸೆಮಿನಾರ್‌ ನಲ್ಲಿ ಕುತೂಹಲಿಗನಾಗಿ ಭಾಗವಹಿಸಿದವರಲ್ಲಿ ನಾನೂ ಒಬ್ಬ. ತುಂಬಾ ದೀರ್ಘ ಅಂತ ಅನಿಸಿದರೂ, ಸಂಶೋಧಕರೆಲ್ಲರ ಸಂಶೋಧನೆ ಮತ್ತು ವಿವರಣೆ ತುಂಬಾ ಚೆನ್ನಾಗಿತ್ತು. ಅವರೆಲ್ಲರ ಸಾಧನೆಗೆ ಅಭಿನಂದನೆಗಳು. ಎಲ್ಲಾ ಸಂಶೋಧಕರಿಗೂ ಮೂಲ ಪ್ರೇರಣೆ ಬದನಾಜೆ ಶಂಕರ ಭಟ್ಟರೆ ಎಂಬುದು ಬಹಳ ಕುತೂಹಲದ ಮತ್ತು ಆಶ್ಚರ್ಯದ ಸಂಗತಿ. ಇದು ಶಂಕರ ಭಟ್ಟರ ಅಸಾಧಾರಣ ಸಂಶೋಧನಾ ಸಾಮರ್ಥ್ಯಕ್ಕೆ ನಿದರ್ಶನ.

ಹೆಚ್ಚಿನ ಉತ್ಪನ್ನಗಳು ಅಡಿಕೆಯ ಮಾರುಕಟ್ಟೆಯ ದೃಷ್ಟಿಯಿಂದ ತುಂಬಾ ಪ್ರಯೋಜನವಾಗಬಹುದು ಎಂದು ನನಗೆ ಅನ್ನಿಸಲಿಲ್ಲ. ಎಲ್ಲಾ ಉತ್ಪನ್ನಗಳು ಅಡಿಕೆಯ ಉಪ ಉತ್ಪನ್ನಗಳಿಂದ ತಯಾರು ಮಾಡಿದಂತವುಗಳು. ಅದು ಮಾರುಕಟ್ಟೆಗೆ ಪೂರಕವೇ ಹೊರತು ಅಡಿಕೆ ಮೂಲವಸ್ತುವಾಗಿ ಬಳಕೆಯಲ್ಲಿ ತುಂಬಾ ಪ್ರಯೋಜನಕಾರಿ ಆಗಲಾರದು ಎಂದು ನನ್ನ ಅನಿಸಿಕೆ.

ಶಂಕರ ಭಟ್ಟರು ತಮ್ಮೆಲ್ಲ ಉತ್ಪನ್ನಗಳ ಬಗ್ಗೆ ವಿವರಿಸುತ್ತಾ, 1450 ವರ್ಷಕ್ಕೂ ಹಿಂದೆ ಬರೆದಿಟ್ಟ ಶ್ಲೋಕ ಒಂದನ್ನು ಉದ್ಧರಿಸಿ ಅಡಿಕೆ ಮತ್ತು ವೀಳ್ಯದೆಲೆ ಎಂಬುದು ಸಂಸಾರದಲ್ಲಿ ಪತಿ ಪತ್ನಿ ಇದ್ದಂತೆ. ಎರಡೂ ಇದ್ದಾಗ ಬಲು ಆರೋಗ್ಯದಾಯಕ ಎಂಬ ಮಾತು ಬಲು ಕುತೂಹಲಕರ. ಅದಕ್ಕೆ ಪೂರಕವಾಗಿ ಅಡಿಕೆಯಿಂದ ಮಾಡಿದ ಔಷಧಿಗಳ ಧನಾತ್ಮಕ ಅಂಶಗಳನ್ನು ಡಾಕ್ಟರ್ ಗಳು ಪ್ರಸ್ತುತಪಡಿಸಿದ್ದರು. ಈ ಮೇಲಿನ ಪೂರಕ ಮಾತುಗಳನ್ನು ಪ್ರಚುರಪಡಿಸುತ್ತಾ ತಂಬಾಕು ರಹಿತ ವೀಳ್ಯದ ಬಳಕೆಗೆ ಒತ್ತುಕೊಟ್ಟಲ್ಲಿ ಅಡಿಕೆ ಮಾರುಕಟ್ಟೆಯ ಹಿತದೃಷ್ಟಿಯಿಂದ ಪ್ರಯೋಜನವಾಗಬಹುದು ಎಂದು ಅನಿಸಿತು.

ನಾವು ಗಮನಿಸಬೇಕಾದ ಅಂಶ, ಅಡಿಕೆ ಬಳಕೆಯಿಂದ ಕ್ಯಾನ್ಸರ್ ನಾಶವಾಗುತ್ತದೆ, ಗ್ಯಾಂಗ್ರಿನ್ ಗುಣವಾಗುತ್ತದೆ, ಮಲಬದ್ಧತೆಯ ಸಮಸ್ಯೆ ಪರಿಹಾರವಾಗುತ್ತದೆ ಎಂಬ ವಿಷಯಗಳನ್ನೆಲ್ಲ ಒಪ್ಪಿಕೊಂಡರೂ, ಅದನ್ನು ಸಂಶೋಧಿಸಿದವರಿಂದ ಹಿಡಿದು ನನ್ನವರೆಗೆ ಅಲ್ಲಿ ಯಾರೂ ಅಡಿಕೆ ಬಳಸುವವರು ಇರಲಿಲ್ಲ.

ಇಲ್ಲಿಯವರೆಗೆ ತಾಂಬೂಲವನ್ನು ಬಳಸದ ನಾನು, ಬಳಸುವಲ್ಲಿ ಆರಂಭ ನನ್ನಿಂದಲೇ ಸುರುವಾಗಲಿ ಎಂಬ ದೃಷ್ಟಿಯಿಂದ ವೀಳ್ಯದೆಲೆ ಬಳ್ಳಿಯ ತುಂಡೊಂದನ್ನು ಅಡಿಕೆ ಮರಕ್ಕೆ ನೆಟ್ಟು ಉದ್ಘಾಟನೆ ಮಾಡಿಕೊಂಡೆ.
ಬರಹ :
ಎ ಪಿ ಸದಾಶಿವ , ಮರಿಕೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

3 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

3 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

21 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago