Advertisement
ಕೃಷಿಮಾತು

ಅಡಿಕೆ ಪರ್ಯಾಯ ಬಳಕೆ ವಿಚಾರಗೋಷ್ಠಿ | ಕೃಷಿಕ ಎ ಪಿ ಸದಾಶಿವ ಹೇಳಿದ್ದು… ಸೆಮಿನಾರ್ ಬಳಿಕ ನಾನು ವೀಳ್ಯದೆಲೆ ಬಳ್ಳಿ ನಾಟಿ ಮಾಡಿದೆ |

Share
ಈಚೆಗೆ ಅಡಿಕೆ ಹೊಸಬಳಕೆಯ ವಿಚಾರಗೋಷ್ಠಿ ಪುತ್ತೂರಿನಲ್ಲಿ  ನಡೆಯಿತು. ಅಡಿಕೆಯ ಪರ್ಯಾಯ ಬಳಕೆಯನ್ನು ಕೇಂದ್ರೀಕರಿಸಿ ಇದ್ದ ವಿಚಾರಗೋಷ್ಠಿಯಲ್ಲಿ ಅಡಿಕೆಯ ಬಳಕೆ, ಅಡಿಕೆಯ ಹಲವು ಉತ್ಪನ್ನಗಳ ಪರಿಚಯ ಮಾಡಲಾಯಿತು. ಡಿಕೆ ಉತ್ಪನ್ನ ತಯಾರು ಮಾಡಿದ ಹಲವು ಮಂದಿ ಇದ್ದರು. ಈ ಗೋಷ್ಠಿಯ ಬಳಿಕ ಕೃಷಿಕ ಎ ಪಿ ಸದಾಶಿವ ಅವರ ಅಭಿಪ್ರಾಯ ಹೀಗಿತ್ತು….

ಅಡಿಕೆ ಪರ್ಯಾಯ ಬಳಕೆಯ ಸೆಮಿನಾರ್‌ ನಲ್ಲಿ ಕುತೂಹಲಿಗನಾಗಿ ಭಾಗವಹಿಸಿದವರಲ್ಲಿ ನಾನೂ ಒಬ್ಬ. ತುಂಬಾ ದೀರ್ಘ ಅಂತ ಅನಿಸಿದರೂ, ಸಂಶೋಧಕರೆಲ್ಲರ ಸಂಶೋಧನೆ ಮತ್ತು ವಿವರಣೆ ತುಂಬಾ ಚೆನ್ನಾಗಿತ್ತು. ಅವರೆಲ್ಲರ ಸಾಧನೆಗೆ ಅಭಿನಂದನೆಗಳು. ಎಲ್ಲಾ ಸಂಶೋಧಕರಿಗೂ ಮೂಲ ಪ್ರೇರಣೆ ಬದನಾಜೆ ಶಂಕರ ಭಟ್ಟರೆ ಎಂಬುದು ಬಹಳ ಕುತೂಹಲದ ಮತ್ತು ಆಶ್ಚರ್ಯದ ಸಂಗತಿ. ಇದು ಶಂಕರ ಭಟ್ಟರ ಅಸಾಧಾರಣ ಸಂಶೋಧನಾ ಸಾಮರ್ಥ್ಯಕ್ಕೆ ನಿದರ್ಶನ.

ಹೆಚ್ಚಿನ ಉತ್ಪನ್ನಗಳು ಅಡಿಕೆಯ ಮಾರುಕಟ್ಟೆಯ ದೃಷ್ಟಿಯಿಂದ ತುಂಬಾ ಪ್ರಯೋಜನವಾಗಬಹುದು ಎಂದು ನನಗೆ ಅನ್ನಿಸಲಿಲ್ಲ. ಎಲ್ಲಾ ಉತ್ಪನ್ನಗಳು ಅಡಿಕೆಯ ಉಪ ಉತ್ಪನ್ನಗಳಿಂದ ತಯಾರು ಮಾಡಿದಂತವುಗಳು. ಅದು ಮಾರುಕಟ್ಟೆಗೆ ಪೂರಕವೇ ಹೊರತು ಅಡಿಕೆ ಮೂಲವಸ್ತುವಾಗಿ ಬಳಕೆಯಲ್ಲಿ ತುಂಬಾ ಪ್ರಯೋಜನಕಾರಿ ಆಗಲಾರದು ಎಂದು ನನ್ನ ಅನಿಸಿಕೆ.

ಶಂಕರ ಭಟ್ಟರು ತಮ್ಮೆಲ್ಲ ಉತ್ಪನ್ನಗಳ ಬಗ್ಗೆ ವಿವರಿಸುತ್ತಾ, 1450 ವರ್ಷಕ್ಕೂ ಹಿಂದೆ ಬರೆದಿಟ್ಟ ಶ್ಲೋಕ ಒಂದನ್ನು ಉದ್ಧರಿಸಿ ಅಡಿಕೆ ಮತ್ತು ವೀಳ್ಯದೆಲೆ ಎಂಬುದು ಸಂಸಾರದಲ್ಲಿ ಪತಿ ಪತ್ನಿ ಇದ್ದಂತೆ. ಎರಡೂ ಇದ್ದಾಗ ಬಲು ಆರೋಗ್ಯದಾಯಕ ಎಂಬ ಮಾತು ಬಲು ಕುತೂಹಲಕರ. ಅದಕ್ಕೆ ಪೂರಕವಾಗಿ ಅಡಿಕೆಯಿಂದ ಮಾಡಿದ ಔಷಧಿಗಳ ಧನಾತ್ಮಕ ಅಂಶಗಳನ್ನು ಡಾಕ್ಟರ್ ಗಳು ಪ್ರಸ್ತುತಪಡಿಸಿದ್ದರು. ಈ ಮೇಲಿನ ಪೂರಕ ಮಾತುಗಳನ್ನು ಪ್ರಚುರಪಡಿಸುತ್ತಾ ತಂಬಾಕು ರಹಿತ ವೀಳ್ಯದ ಬಳಕೆಗೆ ಒತ್ತುಕೊಟ್ಟಲ್ಲಿ ಅಡಿಕೆ ಮಾರುಕಟ್ಟೆಯ ಹಿತದೃಷ್ಟಿಯಿಂದ ಪ್ರಯೋಜನವಾಗಬಹುದು ಎಂದು ಅನಿಸಿತು.

ನಾವು ಗಮನಿಸಬೇಕಾದ ಅಂಶ, ಅಡಿಕೆ ಬಳಕೆಯಿಂದ ಕ್ಯಾನ್ಸರ್ ನಾಶವಾಗುತ್ತದೆ, ಗ್ಯಾಂಗ್ರಿನ್ ಗುಣವಾಗುತ್ತದೆ, ಮಲಬದ್ಧತೆಯ ಸಮಸ್ಯೆ ಪರಿಹಾರವಾಗುತ್ತದೆ ಎಂಬ ವಿಷಯಗಳನ್ನೆಲ್ಲ ಒಪ್ಪಿಕೊಂಡರೂ, ಅದನ್ನು ಸಂಶೋಧಿಸಿದವರಿಂದ ಹಿಡಿದು ನನ್ನವರೆಗೆ ಅಲ್ಲಿ ಯಾರೂ ಅಡಿಕೆ ಬಳಸುವವರು ಇರಲಿಲ್ಲ.

ಇಲ್ಲಿಯವರೆಗೆ ತಾಂಬೂಲವನ್ನು ಬಳಸದ ನಾನು, ಬಳಸುವಲ್ಲಿ ಆರಂಭ ನನ್ನಿಂದಲೇ ಸುರುವಾಗಲಿ ಎಂಬ ದೃಷ್ಟಿಯಿಂದ ವೀಳ್ಯದೆಲೆ ಬಳ್ಳಿಯ ತುಂಡೊಂದನ್ನು ಅಡಿಕೆ ಮರಕ್ಕೆ ನೆಟ್ಟು ಉದ್ಘಾಟನೆ ಮಾಡಿಕೊಂಡೆ.
ಬರಹ :
ಎ ಪಿ ಸದಾಶಿವ , ಮರಿಕೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

5 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

16 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

20 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

1 day ago