ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಮುಖವಾಗಿದ್ದರೂ, ನಾಗರಿಕರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ರೀತಿಯಲ್ಲಿ ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್ಎಚ್ಎಐ) ನಿರ್ವಹಿಸುವ ರಸ್ತೆಗಳಲ್ಲಿ ಪ್ರಮುಖ ಕೆಲಸವನ್ನು ಪ್ರಾರಂಭಿಸಿದ ಆರಂಭದಲ್ಲಿ ಮುಂದಾಗುವ ಸಮಸ್ಯೆಗಳ ಬಗ್ಗೆ ಜನರಿಗೆ ಅರಿವಿಗೆ ಬರುವುದಿಲ್ಲ. ಜನರು ತಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿದ ನಂತರವೇ ಅದರ ಬಗ್ಗೆ ತಿಳಿದುಕೊಳ್ಳುತ್ತಾರೆ. ಇದು ಸ್ವೀಕಾರಾರ್ಹವಲ್ಲ ಎಂದು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅಭಿಪ್ರಾಯಪಟ್ಟಿದ್ದಾರೆ. ಯಾವುದೇ ರಸ್ತೆ ಕಾಮಗಾರಿಯನ್ನು ಪ್ರಾರಂಭಿಸುವ ಮೊದಲು ಪಾದಚಾರಿಗಳು ಮತ್ತು ವಾಹನ ಚಾಲಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಬೇಕು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.
ರಸ್ತೆಗಳ ನಿರ್ವಹಣೆಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆಯೊಂದರ ಸಂದರ್ಭಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿದ ರಿಟ್ ಅರ್ಜಿಯ ವಿಚಾರಣೆ ನಡೆಸುತ್ತಿರುವಾಗ ನ್ಯಾಯಾಲಯವು ಈ ಬಗ್ಗೆ ಪ್ರಶ್ನಿಸಿದೆ.
ದೇಶದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಅನಿವಾರ್ಯವಾಗಿದೆ, ಆದರೆ ಇದು ಜನರಿಗೆ ಸಮಸ್ಯೆಯೇ ಆಗಬಾರದು. ಯಾವುದೇ ದೇಶದಲ್ಲಿ, ಒಂದು ಪ್ರಮುಖ ಯೋಜನೆ ಪ್ರಾರಂಭವಾಗುವ ಮೊದಲು, ಪರ್ಯಾಯಗಳನ್ನು ಯೋಚಿಸಲಾಗುತ್ತದೆ ಹಾಗೂ ಅದನ್ನು ಕಾರ್ಯಗತಗೊಳಿಸಲಾಗುತ್ತದೆ. ಹೀಗಾಗಿ ರಸ್ತೆ ಸುರಕ್ಷತೆಗೆ ಮೊದಲ ಆದ್ಯತೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…