Advertisement
ಸಂಪಾದಕೀಯ ಆಯ್ಕೆ

ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳು ಜನರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಬಾರದು | ಕೇರಳ ಹೈಕೋರ್ಟ್‌ ಅಭಿಪ್ರಾಯ |

Share

ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಮುಖವಾಗಿದ್ದರೂ, ನಾಗರಿಕರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ರೀತಿಯಲ್ಲಿ ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಎಚ್‌ಎಐ) ನಿರ್ವಹಿಸುವ ರಸ್ತೆಗಳಲ್ಲಿ ಪ್ರಮುಖ ಕೆಲಸವನ್ನು ಪ್ರಾರಂಭಿಸಿದ ಆರಂಭದಲ್ಲಿ ಮುಂದಾಗುವ ಸಮಸ್ಯೆಗಳ ಬಗ್ಗೆ ಜನರಿಗೆ ಅರಿವಿಗೆ ಬರುವುದಿಲ್ಲ. ಜನರು ತಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿದ ನಂತರವೇ ಅದರ ಬಗ್ಗೆ ತಿಳಿದುಕೊಳ್ಳುತ್ತಾರೆ. ಇದು ಸ್ವೀಕಾರಾರ್ಹವಲ್ಲ ಎಂದು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅಭಿಪ್ರಾಯಪಟ್ಟಿದ್ದಾರೆ. ಯಾವುದೇ ರಸ್ತೆ ಕಾಮಗಾರಿಯನ್ನು ಪ್ರಾರಂಭಿಸುವ ಮೊದಲು ಪಾದಚಾರಿಗಳು ಮತ್ತು ವಾಹನ ಚಾಲಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಬೇಕು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.

ರಸ್ತೆಗಳ ನಿರ್ವಹಣೆಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆಯೊಂದರ ಸಂದರ್ಭಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿದ ರಿಟ್ ಅರ್ಜಿಯ ವಿಚಾರಣೆ ನಡೆಸುತ್ತಿರುವಾಗ ನ್ಯಾಯಾಲಯವು ಈ ಬಗ್ಗೆ ಪ್ರಶ್ನಿಸಿದೆ.

ದೇಶದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಅನಿವಾರ್ಯವಾಗಿದೆ, ಆದರೆ ಇದು ಜನರಿಗೆ ಸಮಸ್ಯೆಯೇ ಆಗಬಾರದು. ಯಾವುದೇ ದೇಶದಲ್ಲಿ, ಒಂದು ಪ್ರಮುಖ ಯೋಜನೆ ಪ್ರಾರಂಭವಾಗುವ ಮೊದಲು, ಪರ್ಯಾಯಗಳನ್ನು ಯೋಚಿಸಲಾಗುತ್ತದೆ ಹಾಗೂ ಅದನ್ನು ಕಾರ್ಯಗತಗೊಳಿಸಲಾಗುತ್ತದೆ. ಹೀಗಾಗಿ ರಸ್ತೆ ಸುರಕ್ಷತೆಗೆ ಮೊದಲ ಆದ್ಯತೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago