ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಮುಖವಾಗಿದ್ದರೂ, ನಾಗರಿಕರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ರೀತಿಯಲ್ಲಿ ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್ಎಚ್ಎಐ) ನಿರ್ವಹಿಸುವ ರಸ್ತೆಗಳಲ್ಲಿ ಪ್ರಮುಖ ಕೆಲಸವನ್ನು ಪ್ರಾರಂಭಿಸಿದ ಆರಂಭದಲ್ಲಿ ಮುಂದಾಗುವ ಸಮಸ್ಯೆಗಳ ಬಗ್ಗೆ ಜನರಿಗೆ ಅರಿವಿಗೆ ಬರುವುದಿಲ್ಲ. ಜನರು ತಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿದ ನಂತರವೇ ಅದರ ಬಗ್ಗೆ ತಿಳಿದುಕೊಳ್ಳುತ್ತಾರೆ. ಇದು ಸ್ವೀಕಾರಾರ್ಹವಲ್ಲ ಎಂದು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅಭಿಪ್ರಾಯಪಟ್ಟಿದ್ದಾರೆ. ಯಾವುದೇ ರಸ್ತೆ ಕಾಮಗಾರಿಯನ್ನು ಪ್ರಾರಂಭಿಸುವ ಮೊದಲು ಪಾದಚಾರಿಗಳು ಮತ್ತು ವಾಹನ ಚಾಲಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಬೇಕು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.
ರಸ್ತೆಗಳ ನಿರ್ವಹಣೆಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆಯೊಂದರ ಸಂದರ್ಭಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿದ ರಿಟ್ ಅರ್ಜಿಯ ವಿಚಾರಣೆ ನಡೆಸುತ್ತಿರುವಾಗ ನ್ಯಾಯಾಲಯವು ಈ ಬಗ್ಗೆ ಪ್ರಶ್ನಿಸಿದೆ.
ದೇಶದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಅನಿವಾರ್ಯವಾಗಿದೆ, ಆದರೆ ಇದು ಜನರಿಗೆ ಸಮಸ್ಯೆಯೇ ಆಗಬಾರದು. ಯಾವುದೇ ದೇಶದಲ್ಲಿ, ಒಂದು ಪ್ರಮುಖ ಯೋಜನೆ ಪ್ರಾರಂಭವಾಗುವ ಮೊದಲು, ಪರ್ಯಾಯಗಳನ್ನು ಯೋಚಿಸಲಾಗುತ್ತದೆ ಹಾಗೂ ಅದನ್ನು ಕಾರ್ಯಗತಗೊಳಿಸಲಾಗುತ್ತದೆ. ಹೀಗಾಗಿ ರಸ್ತೆ ಸುರಕ್ಷತೆಗೆ ಮೊದಲ ಆದ್ಯತೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…