ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಮುಖವಾಗಿದ್ದರೂ, ನಾಗರಿಕರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ರೀತಿಯಲ್ಲಿ ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್ಎಚ್ಎಐ) ನಿರ್ವಹಿಸುವ ರಸ್ತೆಗಳಲ್ಲಿ ಪ್ರಮುಖ ಕೆಲಸವನ್ನು ಪ್ರಾರಂಭಿಸಿದ ಆರಂಭದಲ್ಲಿ ಮುಂದಾಗುವ ಸಮಸ್ಯೆಗಳ ಬಗ್ಗೆ ಜನರಿಗೆ ಅರಿವಿಗೆ ಬರುವುದಿಲ್ಲ. ಜನರು ತಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿದ ನಂತರವೇ ಅದರ ಬಗ್ಗೆ ತಿಳಿದುಕೊಳ್ಳುತ್ತಾರೆ. ಇದು ಸ್ವೀಕಾರಾರ್ಹವಲ್ಲ ಎಂದು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅಭಿಪ್ರಾಯಪಟ್ಟಿದ್ದಾರೆ. ಯಾವುದೇ ರಸ್ತೆ ಕಾಮಗಾರಿಯನ್ನು ಪ್ರಾರಂಭಿಸುವ ಮೊದಲು ಪಾದಚಾರಿಗಳು ಮತ್ತು ವಾಹನ ಚಾಲಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಬೇಕು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.
ರಸ್ತೆಗಳ ನಿರ್ವಹಣೆಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆಯೊಂದರ ಸಂದರ್ಭಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿದ ರಿಟ್ ಅರ್ಜಿಯ ವಿಚಾರಣೆ ನಡೆಸುತ್ತಿರುವಾಗ ನ್ಯಾಯಾಲಯವು ಈ ಬಗ್ಗೆ ಪ್ರಶ್ನಿಸಿದೆ.
ದೇಶದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಅನಿವಾರ್ಯವಾಗಿದೆ, ಆದರೆ ಇದು ಜನರಿಗೆ ಸಮಸ್ಯೆಯೇ ಆಗಬಾರದು. ಯಾವುದೇ ದೇಶದಲ್ಲಿ, ಒಂದು ಪ್ರಮುಖ ಯೋಜನೆ ಪ್ರಾರಂಭವಾಗುವ ಮೊದಲು, ಪರ್ಯಾಯಗಳನ್ನು ಯೋಚಿಸಲಾಗುತ್ತದೆ ಹಾಗೂ ಅದನ್ನು ಕಾರ್ಯಗತಗೊಳಿಸಲಾಗುತ್ತದೆ. ಹೀಗಾಗಿ ರಸ್ತೆ ಸುರಕ್ಷತೆಗೆ ಮೊದಲ ಆದ್ಯತೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…