ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯಲ್ಲಿ ಬುಧವಾರದಿಂದ ನಡೆಯಲಿರುವ 25ನೇ ಅಂತಾರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪಾಲ್ಗೊಳ್ಳಲಿರುವ ಲಕ್ಷ ಲಕ್ಷ ಮಂದಿಯ ಆತಿಥ್ಯಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.
50,000 ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳೂ, 10,000 ಶಿಕ್ಷಕರು, 3,000 ಸಿಬ್ಬಂದಿಗಳಿಗೆ ಇಲ್ಲಿರುವ ಹಾಸ್ಟೆಲ್ಗಳಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ನಡೆದಿದ್ದು, ಕೃಷಿ ಮೇಳದ ಪರಿಸರದಲ್ಲಿ ಸುಮಾರು 50,000 ಚದರಡಿಯ ಎರಡು ಪೆಂಡಾಲ್ಗಳಲ್ಲಿ 60 ಕೌಂಟರ್ಗಳಲ್ಲಿ ಹೊತ್ತು ಹೊತ್ತಿಗೆ ಲಕ್ಷ ಮಂದಿಯ ಊಟೋಪಚಾರಕ್ಕೆ ಎಲ್ಲ ವ್ಯವಸ್ಥೆ ಆಗುತ್ತಿವೆ.
ಹಾಸ್ಟೆಲ್ಗಳ ಹೊರತು ಪಡಿಸಿ ಇತರೆಡೆ ಸಾರ್ವಜನಿಕರಿಗಾಗಿ ಅಡುಗೆ ಸಿದ್ಧಪಡಿಸಲು 300 ಮಂದಿ ಬಾಣಸಿಗರು, 1,200 ಮಂದಿ ಸ್ವಯಂ ಸೇವಕರು ಆಗಮಿಸಿದ್ದಾರೆ.
ಭಾರೀ ಹೊರೆ ಕಾಣಿಕೆ ಹರಿದು ಬರುತ್ತಿದ್ದು, ಉಗ್ರಾಣವೇ ಸುಮಾರು 40,000 ಚದರಡಿ ಪ್ರದೇಶದಲ್ಲಿ ಹರಡಿ ಕೊಂಡಿದೆ. ವಿಜಯಾನಂದ ಜೋಗಿ ಕಾನಡ್ಕ ಇವರ ಮೇಲುಸ್ತುವಾರಿಯಲ್ಲಿ, ಆಳ್ವಾಸ್ ಎಫ್ಓ ರಾಜೇಶ್ ನಾಯಕ್, ರಾಜಗೋಪಾಲ ಶೆಟ್ಟಿ, ಭರತೇಶ್, ಮೋಹನ್ ಕುಮಾರ್, ಸುಂದರ ಶೆಟ್ಟಿ ಸಹಿತ 75 ಮಂದಿಯ ತಂಡ, 200 ಕಾರ್ಮಿಕರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…