ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯಲ್ಲಿ ಬುಧವಾರದಿಂದ ನಡೆಯಲಿರುವ 25ನೇ ಅಂತಾರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪಾಲ್ಗೊಳ್ಳಲಿರುವ ಲಕ್ಷ ಲಕ್ಷ ಮಂದಿಯ ಆತಿಥ್ಯಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.
50,000 ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳೂ, 10,000 ಶಿಕ್ಷಕರು, 3,000 ಸಿಬ್ಬಂದಿಗಳಿಗೆ ಇಲ್ಲಿರುವ ಹಾಸ್ಟೆಲ್ಗಳಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ನಡೆದಿದ್ದು, ಕೃಷಿ ಮೇಳದ ಪರಿಸರದಲ್ಲಿ ಸುಮಾರು 50,000 ಚದರಡಿಯ ಎರಡು ಪೆಂಡಾಲ್ಗಳಲ್ಲಿ 60 ಕೌಂಟರ್ಗಳಲ್ಲಿ ಹೊತ್ತು ಹೊತ್ತಿಗೆ ಲಕ್ಷ ಮಂದಿಯ ಊಟೋಪಚಾರಕ್ಕೆ ಎಲ್ಲ ವ್ಯವಸ್ಥೆ ಆಗುತ್ತಿವೆ.
ಹಾಸ್ಟೆಲ್ಗಳ ಹೊರತು ಪಡಿಸಿ ಇತರೆಡೆ ಸಾರ್ವಜನಿಕರಿಗಾಗಿ ಅಡುಗೆ ಸಿದ್ಧಪಡಿಸಲು 300 ಮಂದಿ ಬಾಣಸಿಗರು, 1,200 ಮಂದಿ ಸ್ವಯಂ ಸೇವಕರು ಆಗಮಿಸಿದ್ದಾರೆ.
ಭಾರೀ ಹೊರೆ ಕಾಣಿಕೆ ಹರಿದು ಬರುತ್ತಿದ್ದು, ಉಗ್ರಾಣವೇ ಸುಮಾರು 40,000 ಚದರಡಿ ಪ್ರದೇಶದಲ್ಲಿ ಹರಡಿ ಕೊಂಡಿದೆ. ವಿಜಯಾನಂದ ಜೋಗಿ ಕಾನಡ್ಕ ಇವರ ಮೇಲುಸ್ತುವಾರಿಯಲ್ಲಿ, ಆಳ್ವಾಸ್ ಎಫ್ಓ ರಾಜೇಶ್ ನಾಯಕ್, ರಾಜಗೋಪಾಲ ಶೆಟ್ಟಿ, ಭರತೇಶ್, ಮೋಹನ್ ಕುಮಾರ್, ಸುಂದರ ಶೆಟ್ಟಿ ಸಹಿತ 75 ಮಂದಿಯ ತಂಡ, 200 ಕಾರ್ಮಿಕರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…