ಸುದ್ದಿಗಳು

ಆಳ್ವಾಸ್ ಜಾಂಬೂರಿಗೆ ಸಕಲ ಸಿದ್ಧತೆ | ಹರಿದು ಬರುತ್ತಿರುವ ಹೊರೆ ಕಾಣಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯಲ್ಲಿ ಬುಧವಾರದಿಂದ ನಡೆಯಲಿರುವ 25ನೇ ಅಂತಾರಾಷ್ಟ್ರೀಯ ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪಾಲ್ಗೊಳ್ಳಲಿರುವ ಲಕ್ಷ ಲಕ್ಷ ಮಂದಿಯ ಆತಿಥ್ಯಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.

Advertisement

50,000 ಸ್ಕೌಟ್ಸ್‌ ಗೈಡ್ಸ್‌ ವಿದ್ಯಾರ್ಥಿಗಳೂ, 10,000 ಶಿಕ್ಷಕರು, 3,000 ಸಿಬ್ಬಂದಿಗಳಿಗೆ ಇಲ್ಲಿರುವ ಹಾಸ್ಟೆಲ್‌ಗ‌ಳಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ನಡೆದಿದ್ದು, ಕೃಷಿ ಮೇಳದ ಪರಿಸರದಲ್ಲಿ ಸುಮಾರು 50,000 ಚದರಡಿಯ ಎರಡು ಪೆಂಡಾಲ್‌ಗ‌ಳಲ್ಲಿ 60 ಕೌಂಟರ್‌ಗಳಲ್ಲಿ ಹೊತ್ತು ಹೊತ್ತಿಗೆ ಲಕ್ಷ ಮಂದಿಯ ಊಟೋಪಚಾರಕ್ಕೆ ಎಲ್ಲ ವ್ಯವಸ್ಥೆ ಆಗುತ್ತಿವೆ.

ಹಾಸ್ಟೆಲ್‌ಗ‌ಳ ಹೊರತು ಪಡಿಸಿ ಇತರೆಡೆ ಸಾರ್ವಜನಿಕರಿಗಾಗಿ ಅಡುಗೆ ಸಿದ್ಧಪಡಿಸಲು 300 ಮಂದಿ ಬಾಣಸಿಗರು, 1,200 ಮಂದಿ ಸ್ವಯಂ ಸೇವಕರು ಆಗಮಿಸಿದ್ದಾರೆ.

ಭಾರೀ ಹೊರೆ ಕಾಣಿಕೆ ಹರಿದು ಬರುತ್ತಿದ್ದು, ಉಗ್ರಾಣವೇ ಸುಮಾರು 40,000 ಚದರಡಿ ಪ್ರದೇಶದಲ್ಲಿ ಹರಡಿ ಕೊಂಡಿದೆ. ವಿಜಯಾನಂದ ಜೋಗಿ ಕಾನಡ್ಕ ಇವರ ಮೇಲುಸ್ತುವಾರಿಯಲ್ಲಿ, ಆಳ್ವಾಸ್‌ ಎಫ್‌ಓ ರಾಜೇಶ್‌ ನಾಯಕ್‌, ರಾಜಗೋಪಾಲ ಶೆಟ್ಟಿ, ಭರತೇಶ್‌, ಮೋಹನ್‌ ಕುಮಾರ್‌, ಸುಂದರ ಶೆಟ್ಟಿ ಸಹಿತ 75 ಮಂದಿಯ ತಂಡ, 200 ಕಾರ್ಮಿಕರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

18 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

18 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

18 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

18 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

19 hours ago