ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯಲ್ಲಿ ಬುಧವಾರದಿಂದ ನಡೆಯಲಿರುವ 25ನೇ ಅಂತಾರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪಾಲ್ಗೊಳ್ಳಲಿರುವ ಲಕ್ಷ ಲಕ್ಷ ಮಂದಿಯ ಆತಿಥ್ಯಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.
50,000 ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳೂ, 10,000 ಶಿಕ್ಷಕರು, 3,000 ಸಿಬ್ಬಂದಿಗಳಿಗೆ ಇಲ್ಲಿರುವ ಹಾಸ್ಟೆಲ್ಗಳಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ನಡೆದಿದ್ದು, ಕೃಷಿ ಮೇಳದ ಪರಿಸರದಲ್ಲಿ ಸುಮಾರು 50,000 ಚದರಡಿಯ ಎರಡು ಪೆಂಡಾಲ್ಗಳಲ್ಲಿ 60 ಕೌಂಟರ್ಗಳಲ್ಲಿ ಹೊತ್ತು ಹೊತ್ತಿಗೆ ಲಕ್ಷ ಮಂದಿಯ ಊಟೋಪಚಾರಕ್ಕೆ ಎಲ್ಲ ವ್ಯವಸ್ಥೆ ಆಗುತ್ತಿವೆ.
ಹಾಸ್ಟೆಲ್ಗಳ ಹೊರತು ಪಡಿಸಿ ಇತರೆಡೆ ಸಾರ್ವಜನಿಕರಿಗಾಗಿ ಅಡುಗೆ ಸಿದ್ಧಪಡಿಸಲು 300 ಮಂದಿ ಬಾಣಸಿಗರು, 1,200 ಮಂದಿ ಸ್ವಯಂ ಸೇವಕರು ಆಗಮಿಸಿದ್ದಾರೆ.
ಭಾರೀ ಹೊರೆ ಕಾಣಿಕೆ ಹರಿದು ಬರುತ್ತಿದ್ದು, ಉಗ್ರಾಣವೇ ಸುಮಾರು 40,000 ಚದರಡಿ ಪ್ರದೇಶದಲ್ಲಿ ಹರಡಿ ಕೊಂಡಿದೆ. ವಿಜಯಾನಂದ ಜೋಗಿ ಕಾನಡ್ಕ ಇವರ ಮೇಲುಸ್ತುವಾರಿಯಲ್ಲಿ, ಆಳ್ವಾಸ್ ಎಫ್ಓ ರಾಜೇಶ್ ನಾಯಕ್, ರಾಜಗೋಪಾಲ ಶೆಟ್ಟಿ, ಭರತೇಶ್, ಮೋಹನ್ ಕುಮಾರ್, ಸುಂದರ ಶೆಟ್ಟಿ ಸಹಿತ 75 ಮಂದಿಯ ತಂಡ, 200 ಕಾರ್ಮಿಕರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…