Opinion

ನಿಮ್ಮ ತಂದೆತಾಯಿಯರನ್ನು ಯಾವಾಗಲೂ ಗೌರವಿಸಿ | ಅವರ ಕೊನೆಗಾಲದಲ್ಲಿ ಮಗುವಂತೆ ಕಾಣಿರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಬ್ಬ ಮಗ(Son) ತನ್ನ ವಯಸ್ಸಾದ ತಂದೆಯನ್ನು(Old Father) ರಾತ್ರಿ ಊಟಕ್ಕಾಗಿ(Dinner) ಉತ್ತಮ ರೆಸ್ಟೋರೆಂಟ್‌ಗೆ(Restaurant) ಕರೆದೊಯ್ದ. ಅಪ್ಪ ನಡುಗುವ ಕೈಯಿಂದ ಊಟಮಾಡುವಾಗ ತನ್ನ ಬಟ್ಟೆಗಳ ಮೇಲೆ ಹಲವಾರು ಬಾರಿ ಆಹಾರವನ್ನು(Food)ಚೆಲ್ಲಿಕೊಂಡ. ಬಾಯಿ, ಗಲ್ಲ, ಕುತ್ತಿಗೆ ಮೇಲೆಲ್ಲಾ ಆಹಾರದ ತುಣುಕುಗಳು ಕಾಣುತ್ತಿದ್ದವು. ರೆಸ್ಟೋರೆಂಟ್‌ನಲ್ಲಿ ಊಟಮಾಡಲು ಕುಳಿತಿದ್ದ ಇತರ ಜನರು ಆ ವೃದ್ಧನನ್ನು ಅಸಹ್ಯದಿಂದ ನೋಡುತ್ತಿದ್ದರು. ಆದರೆ ಅವರ ಮಗನು ಶಾಂತವಾಗಿ ಕುಳಿತು ಅಪ್ಪನೊಡನೆ ಊಟಮಾಡುತ್ತಿದ್ದ.

Advertisement
Advertisement

ಊಟವಾದ ನಂತರ ಮಗ ಯಾವುದೇ ಮುಜಗರ, ನಾಚಿಕೆಯಿಲ್ಲದೆ ತನ್ನ ತಂದೆಯನ್ನು ವಾಶ್ ರೂಂಗೆ ಕರೆದೊಯ್ದ. ಅವರ ಬಾಯಿ ಮುಖ ಕುತ್ತಿಗೆಗಳಿಂದ ಆಹಾರದ ತುಣುಕುಗಳನ್ನು ಮೆಲ್ಲಗೆ ಒರಸಿ ತೆಗೆದು ಅವರ ಬಟ್ಟೆಗಳನ್ನು ತನ್ನ ಕರವಸ್ತ್ರಕ್ಕೆ ನೀರು ಹಾಕಿಕೊಂಡು ಚನ್ನಾಗಿ ಸ್ವಚ್ಛಗೊಳಿಸಿದ. ಅವರ ತಲೆಗೂದಲನ್ನು ಬಾಚಿ , ಕನ್ನಡಕದ ಗಾಜುಗಳನ್ನು ತೊಳೆದು ಬಟ್ಟೆಯಿಂದ ಒರಸಿ ಮತ್ತೆ ಹಾಕಿದನಂತರ ಅವರನ್ನು ಹೊರಗೆ ಕರೆತಂದ. ರೆಸ್ಟೋರೆಂಟ್‌ನಲ್ಲಿ ಎಲ್ಲರೂ ಮೌನವಾಗಿ ಅವನತ್ತಲೇ ನೋಡುತ್ತಿದ್ದರು. ಅನಂತರ ಅವನು ಬಿಲ್ ಪಾವತಿಸಿ ಅಪ್ಪನೊಂದಿಗೆ ಹೊರಗೆ ಹೊರಟನು. ಅಲ್ಲಿ ಊಟ ಮಾಡುತ್ತಿದ್ದ ಮತ್ತೊಬ್ಬ ವೃದ್ಧರು ಅವನನ್ನು ಕರೆದು ಕೇಳಿದರು – ನೀನು ಇಲ್ಲಿ ಏನನ್ನಾದರೂ ಬಿಟ್ಟು ಹೋಗುತ್ತಿದ್ದೀಯೆಂದು ನಿನಗೆ ಅನ್ನಿಸುತ್ತಿಲ್ಲವೇ? ಎಂದು ಕೇಳಿದರು

ಅದಕ್ಕೆ ಅವನು ಉತ್ತರಿಸಿದ – ಇಲ್ಲ ಸರ್, ನಾನು ಏನನ್ನೂ ಬಿಟ್ಟಿಲ್ಲ ಎಲ್ಲವನ್ನೂ ತೆಗೆದುಕೊಂಡಿದ್ದೇನೆ ಎಂದನು.
ವೃದ್ಧರು ಹೇಳಿದರು – ಮಗೂ , ನೀನು ಇಲ್ಲಿ ಪ್ರತಿಯೊಬ್ಬ ಮಗನಿಗೂ ಒಂದು ಶಿಕ್ಷಣವನ್ನು ಪಾಠವನ್ನು ಮತ್ತು ಪ್ರತಿಯೊಬ್ಬ ತಂದೆಗೂ ಒಂದು ಭರವಸೆಯನ್ನು ಬಿಟ್ಟುಹೋಗುತ್ತಿರುವೆ ಎಂದರು. ಸಾಮಾನ್ಯವಾಗಿ ನಮ್ಮಂತಹಾ ವಯಸ್ಸಾದ ಹೆತ್ತವರನ್ನು ತಮ್ಮೊಂದಿಗೆ ಹೊರಗೆ ಕರೆದೊಯ್ಯಲು ಮಕ್ಕಳು ಇಷ್ಟಪಡುವುದಿಲ್ಲ, ಮತ್ತು ಅವರು ಹೇಳುತ್ತಾರೆ – ನೀವು ಅಲ್ಲಿಗೆ ಬಂದು ಏನು ಮಾಡುತ್ತೀರಿ? ನಿಮಗೆ ಅಷ್ಟು ದೂರ ಬರಲು ಶಕ್ತಿಯಿಲ್ಲ, ಬಂದರೂ ಸರಿಯಾಗಿ ತಿನ್ನುವುದಿಲ್ಲ. ನೀವು ಮನೆಯಲ್ಲೇ ಇರಿ, ಅದು ನಿಮಗೇ ಒಳ್ಳೆಯದು ಎನ್ನುತ್ತಾರೆ.

ಆದರೆ ನೀವು ಚಿಕ್ಕವರಿದ್ದಾಗ ನಿಮ್ಮ ಅಪ್ಪ ನಿಮ್ಮನ್ನು ತಮ್ಮ ಹೆಗಲುಮೇಲೆ ಹೊತ್ತು , ತೋಳುಗಳಲ್ಲಿ ಅವಚಿಕೊಂಡು ಕರೆದುಕೊಂಡು ಹೋಗುತ್ತಿದ್ದರು ಎಂಬುದನ್ನು ಮರೆತುಬಿಡುತ್ತಾರೆ. ಮಗುವಾಗಿದ್ದಾಗ ನಿಮಗೆ ಸರಿಯಾಗಿ ತಿನ್ನಲು ಸಾಧ್ಯವಾಗದಿದ್ದಾಗ, ತಂದೆತಾಯಿ ತಮ್ಮ ಕೈಯಿಂದ ನಿಮಗೆ ಆಹಾರವನ್ನು ತಿನ್ನಿಸುತ್ತಿದ್ದರು ಮತ್ತು ನಿಮ್ಮ ಬಾಯಿಂದ ಆಹಾರವು ಶರೀರ, ಬಟ್ಟೆಗಳ ಮೇಲೆ ಬಿದ್ದಾಗ, ಅವರು ನಿಮ್ಮನ್ನು ಬೈಯದೆ ಪ್ರೀತಿಯಿಂದ ಸ್ವಚ್ಛ ಗೊಳಿಸುತ್ತಿದ್ದರು. ಹಾಗಾದರೆ ಅದೇ ಹೆತ್ತವರು ವೃದ್ಧಾಪ್ಯದಲ್ಲಿ ಮಕ್ಕಳಿಗೆ ಹೊರೆಯಾಗಿರುವುದು ಏಕೆ? ಪೋಷಕರು ದೇವರ ರೂಪ. ಅವರಿಗೆ ಸೇವೆ ಮಾಡಿ, ಮತ್ತು ಪ್ರೀತಿಯನ್ನು ನೀಡಿ ನೆನಪಿಡಿ , ನಿಮಗೂ ವಯಸ್ಸಾಗುತ್ತದೆ. ನೀವೂ ವೃದ್ಧರಾಗುತ್ತೀರಿ.
ನಿಮ್ಮ ತಂದೆತಾಯಿಯರನ್ನು ಯಾವಾಗಲೂ ಗೌರವಿಸಿ

ಬರಹ :
ಕೃಷ್ಣೇಗೌಡ..
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

2 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

2 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

2 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

2 hours ago

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…

2 hours ago

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

8 hours ago