Opinion

ನಿಮ್ಮ ತಂದೆತಾಯಿಯರನ್ನು ಯಾವಾಗಲೂ ಗೌರವಿಸಿ | ಅವರ ಕೊನೆಗಾಲದಲ್ಲಿ ಮಗುವಂತೆ ಕಾಣಿರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಬ್ಬ ಮಗ(Son) ತನ್ನ ವಯಸ್ಸಾದ ತಂದೆಯನ್ನು(Old Father) ರಾತ್ರಿ ಊಟಕ್ಕಾಗಿ(Dinner) ಉತ್ತಮ ರೆಸ್ಟೋರೆಂಟ್‌ಗೆ(Restaurant) ಕರೆದೊಯ್ದ. ಅಪ್ಪ ನಡುಗುವ ಕೈಯಿಂದ ಊಟಮಾಡುವಾಗ ತನ್ನ ಬಟ್ಟೆಗಳ ಮೇಲೆ ಹಲವಾರು ಬಾರಿ ಆಹಾರವನ್ನು(Food)ಚೆಲ್ಲಿಕೊಂಡ. ಬಾಯಿ, ಗಲ್ಲ, ಕುತ್ತಿಗೆ ಮೇಲೆಲ್ಲಾ ಆಹಾರದ ತುಣುಕುಗಳು ಕಾಣುತ್ತಿದ್ದವು. ರೆಸ್ಟೋರೆಂಟ್‌ನಲ್ಲಿ ಊಟಮಾಡಲು ಕುಳಿತಿದ್ದ ಇತರ ಜನರು ಆ ವೃದ್ಧನನ್ನು ಅಸಹ್ಯದಿಂದ ನೋಡುತ್ತಿದ್ದರು. ಆದರೆ ಅವರ ಮಗನು ಶಾಂತವಾಗಿ ಕುಳಿತು ಅಪ್ಪನೊಡನೆ ಊಟಮಾಡುತ್ತಿದ್ದ.

Advertisement
Advertisement

ಊಟವಾದ ನಂತರ ಮಗ ಯಾವುದೇ ಮುಜಗರ, ನಾಚಿಕೆಯಿಲ್ಲದೆ ತನ್ನ ತಂದೆಯನ್ನು ವಾಶ್ ರೂಂಗೆ ಕರೆದೊಯ್ದ. ಅವರ ಬಾಯಿ ಮುಖ ಕುತ್ತಿಗೆಗಳಿಂದ ಆಹಾರದ ತುಣುಕುಗಳನ್ನು ಮೆಲ್ಲಗೆ ಒರಸಿ ತೆಗೆದು ಅವರ ಬಟ್ಟೆಗಳನ್ನು ತನ್ನ ಕರವಸ್ತ್ರಕ್ಕೆ ನೀರು ಹಾಕಿಕೊಂಡು ಚನ್ನಾಗಿ ಸ್ವಚ್ಛಗೊಳಿಸಿದ. ಅವರ ತಲೆಗೂದಲನ್ನು ಬಾಚಿ , ಕನ್ನಡಕದ ಗಾಜುಗಳನ್ನು ತೊಳೆದು ಬಟ್ಟೆಯಿಂದ ಒರಸಿ ಮತ್ತೆ ಹಾಕಿದನಂತರ ಅವರನ್ನು ಹೊರಗೆ ಕರೆತಂದ. ರೆಸ್ಟೋರೆಂಟ್‌ನಲ್ಲಿ ಎಲ್ಲರೂ ಮೌನವಾಗಿ ಅವನತ್ತಲೇ ನೋಡುತ್ತಿದ್ದರು. ಅನಂತರ ಅವನು ಬಿಲ್ ಪಾವತಿಸಿ ಅಪ್ಪನೊಂದಿಗೆ ಹೊರಗೆ ಹೊರಟನು. ಅಲ್ಲಿ ಊಟ ಮಾಡುತ್ತಿದ್ದ ಮತ್ತೊಬ್ಬ ವೃದ್ಧರು ಅವನನ್ನು ಕರೆದು ಕೇಳಿದರು – ನೀನು ಇಲ್ಲಿ ಏನನ್ನಾದರೂ ಬಿಟ್ಟು ಹೋಗುತ್ತಿದ್ದೀಯೆಂದು ನಿನಗೆ ಅನ್ನಿಸುತ್ತಿಲ್ಲವೇ? ಎಂದು ಕೇಳಿದರು

ಅದಕ್ಕೆ ಅವನು ಉತ್ತರಿಸಿದ – ಇಲ್ಲ ಸರ್, ನಾನು ಏನನ್ನೂ ಬಿಟ್ಟಿಲ್ಲ ಎಲ್ಲವನ್ನೂ ತೆಗೆದುಕೊಂಡಿದ್ದೇನೆ ಎಂದನು.
ವೃದ್ಧರು ಹೇಳಿದರು – ಮಗೂ , ನೀನು ಇಲ್ಲಿ ಪ್ರತಿಯೊಬ್ಬ ಮಗನಿಗೂ ಒಂದು ಶಿಕ್ಷಣವನ್ನು ಪಾಠವನ್ನು ಮತ್ತು ಪ್ರತಿಯೊಬ್ಬ ತಂದೆಗೂ ಒಂದು ಭರವಸೆಯನ್ನು ಬಿಟ್ಟುಹೋಗುತ್ತಿರುವೆ ಎಂದರು. ಸಾಮಾನ್ಯವಾಗಿ ನಮ್ಮಂತಹಾ ವಯಸ್ಸಾದ ಹೆತ್ತವರನ್ನು ತಮ್ಮೊಂದಿಗೆ ಹೊರಗೆ ಕರೆದೊಯ್ಯಲು ಮಕ್ಕಳು ಇಷ್ಟಪಡುವುದಿಲ್ಲ, ಮತ್ತು ಅವರು ಹೇಳುತ್ತಾರೆ – ನೀವು ಅಲ್ಲಿಗೆ ಬಂದು ಏನು ಮಾಡುತ್ತೀರಿ? ನಿಮಗೆ ಅಷ್ಟು ದೂರ ಬರಲು ಶಕ್ತಿಯಿಲ್ಲ, ಬಂದರೂ ಸರಿಯಾಗಿ ತಿನ್ನುವುದಿಲ್ಲ. ನೀವು ಮನೆಯಲ್ಲೇ ಇರಿ, ಅದು ನಿಮಗೇ ಒಳ್ಳೆಯದು ಎನ್ನುತ್ತಾರೆ.

ಆದರೆ ನೀವು ಚಿಕ್ಕವರಿದ್ದಾಗ ನಿಮ್ಮ ಅಪ್ಪ ನಿಮ್ಮನ್ನು ತಮ್ಮ ಹೆಗಲುಮೇಲೆ ಹೊತ್ತು , ತೋಳುಗಳಲ್ಲಿ ಅವಚಿಕೊಂಡು ಕರೆದುಕೊಂಡು ಹೋಗುತ್ತಿದ್ದರು ಎಂಬುದನ್ನು ಮರೆತುಬಿಡುತ್ತಾರೆ. ಮಗುವಾಗಿದ್ದಾಗ ನಿಮಗೆ ಸರಿಯಾಗಿ ತಿನ್ನಲು ಸಾಧ್ಯವಾಗದಿದ್ದಾಗ, ತಂದೆತಾಯಿ ತಮ್ಮ ಕೈಯಿಂದ ನಿಮಗೆ ಆಹಾರವನ್ನು ತಿನ್ನಿಸುತ್ತಿದ್ದರು ಮತ್ತು ನಿಮ್ಮ ಬಾಯಿಂದ ಆಹಾರವು ಶರೀರ, ಬಟ್ಟೆಗಳ ಮೇಲೆ ಬಿದ್ದಾಗ, ಅವರು ನಿಮ್ಮನ್ನು ಬೈಯದೆ ಪ್ರೀತಿಯಿಂದ ಸ್ವಚ್ಛ ಗೊಳಿಸುತ್ತಿದ್ದರು. ಹಾಗಾದರೆ ಅದೇ ಹೆತ್ತವರು ವೃದ್ಧಾಪ್ಯದಲ್ಲಿ ಮಕ್ಕಳಿಗೆ ಹೊರೆಯಾಗಿರುವುದು ಏಕೆ? ಪೋಷಕರು ದೇವರ ರೂಪ. ಅವರಿಗೆ ಸೇವೆ ಮಾಡಿ, ಮತ್ತು ಪ್ರೀತಿಯನ್ನು ನೀಡಿ ನೆನಪಿಡಿ , ನಿಮಗೂ ವಯಸ್ಸಾಗುತ್ತದೆ. ನೀವೂ ವೃದ್ಧರಾಗುತ್ತೀರಿ.
ನಿಮ್ಮ ತಂದೆತಾಯಿಯರನ್ನು ಯಾವಾಗಲೂ ಗೌರವಿಸಿ

ಬರಹ :
ಕೃಷ್ಣೇಗೌಡ..
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

5 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

5 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

7 hours ago

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…

7 hours ago

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…

7 hours ago

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

12 hours ago