Advertisement
Opinion

ನಿಮ್ಮ ತಂದೆತಾಯಿಯರನ್ನು ಯಾವಾಗಲೂ ಗೌರವಿಸಿ | ಅವರ ಕೊನೆಗಾಲದಲ್ಲಿ ಮಗುವಂತೆ ಕಾಣಿರಿ

Share

ಒಬ್ಬ ಮಗ(Son) ತನ್ನ ವಯಸ್ಸಾದ ತಂದೆಯನ್ನು(Old Father) ರಾತ್ರಿ ಊಟಕ್ಕಾಗಿ(Dinner) ಉತ್ತಮ ರೆಸ್ಟೋರೆಂಟ್‌ಗೆ(Restaurant) ಕರೆದೊಯ್ದ. ಅಪ್ಪ ನಡುಗುವ ಕೈಯಿಂದ ಊಟಮಾಡುವಾಗ ತನ್ನ ಬಟ್ಟೆಗಳ ಮೇಲೆ ಹಲವಾರು ಬಾರಿ ಆಹಾರವನ್ನು(Food)ಚೆಲ್ಲಿಕೊಂಡ. ಬಾಯಿ, ಗಲ್ಲ, ಕುತ್ತಿಗೆ ಮೇಲೆಲ್ಲಾ ಆಹಾರದ ತುಣುಕುಗಳು ಕಾಣುತ್ತಿದ್ದವು. ರೆಸ್ಟೋರೆಂಟ್‌ನಲ್ಲಿ ಊಟಮಾಡಲು ಕುಳಿತಿದ್ದ ಇತರ ಜನರು ಆ ವೃದ್ಧನನ್ನು ಅಸಹ್ಯದಿಂದ ನೋಡುತ್ತಿದ್ದರು. ಆದರೆ ಅವರ ಮಗನು ಶಾಂತವಾಗಿ ಕುಳಿತು ಅಪ್ಪನೊಡನೆ ಊಟಮಾಡುತ್ತಿದ್ದ.

ಊಟವಾದ ನಂತರ ಮಗ ಯಾವುದೇ ಮುಜಗರ, ನಾಚಿಕೆಯಿಲ್ಲದೆ ತನ್ನ ತಂದೆಯನ್ನು ವಾಶ್ ರೂಂಗೆ ಕರೆದೊಯ್ದ. ಅವರ ಬಾಯಿ ಮುಖ ಕುತ್ತಿಗೆಗಳಿಂದ ಆಹಾರದ ತುಣುಕುಗಳನ್ನು ಮೆಲ್ಲಗೆ ಒರಸಿ ತೆಗೆದು ಅವರ ಬಟ್ಟೆಗಳನ್ನು ತನ್ನ ಕರವಸ್ತ್ರಕ್ಕೆ ನೀರು ಹಾಕಿಕೊಂಡು ಚನ್ನಾಗಿ ಸ್ವಚ್ಛಗೊಳಿಸಿದ. ಅವರ ತಲೆಗೂದಲನ್ನು ಬಾಚಿ , ಕನ್ನಡಕದ ಗಾಜುಗಳನ್ನು ತೊಳೆದು ಬಟ್ಟೆಯಿಂದ ಒರಸಿ ಮತ್ತೆ ಹಾಕಿದನಂತರ ಅವರನ್ನು ಹೊರಗೆ ಕರೆತಂದ. ರೆಸ್ಟೋರೆಂಟ್‌ನಲ್ಲಿ ಎಲ್ಲರೂ ಮೌನವಾಗಿ ಅವನತ್ತಲೇ ನೋಡುತ್ತಿದ್ದರು. ಅನಂತರ ಅವನು ಬಿಲ್ ಪಾವತಿಸಿ ಅಪ್ಪನೊಂದಿಗೆ ಹೊರಗೆ ಹೊರಟನು. ಅಲ್ಲಿ ಊಟ ಮಾಡುತ್ತಿದ್ದ ಮತ್ತೊಬ್ಬ ವೃದ್ಧರು ಅವನನ್ನು ಕರೆದು ಕೇಳಿದರು – ನೀನು ಇಲ್ಲಿ ಏನನ್ನಾದರೂ ಬಿಟ್ಟು ಹೋಗುತ್ತಿದ್ದೀಯೆಂದು ನಿನಗೆ ಅನ್ನಿಸುತ್ತಿಲ್ಲವೇ? ಎಂದು ಕೇಳಿದರು

Advertisement

ಅದಕ್ಕೆ ಅವನು ಉತ್ತರಿಸಿದ – ಇಲ್ಲ ಸರ್, ನಾನು ಏನನ್ನೂ ಬಿಟ್ಟಿಲ್ಲ ಎಲ್ಲವನ್ನೂ ತೆಗೆದುಕೊಂಡಿದ್ದೇನೆ ಎಂದನು.
ವೃದ್ಧರು ಹೇಳಿದರು – ಮಗೂ , ನೀನು ಇಲ್ಲಿ ಪ್ರತಿಯೊಬ್ಬ ಮಗನಿಗೂ ಒಂದು ಶಿಕ್ಷಣವನ್ನು ಪಾಠವನ್ನು ಮತ್ತು ಪ್ರತಿಯೊಬ್ಬ ತಂದೆಗೂ ಒಂದು ಭರವಸೆಯನ್ನು ಬಿಟ್ಟುಹೋಗುತ್ತಿರುವೆ ಎಂದರು. ಸಾಮಾನ್ಯವಾಗಿ ನಮ್ಮಂತಹಾ ವಯಸ್ಸಾದ ಹೆತ್ತವರನ್ನು ತಮ್ಮೊಂದಿಗೆ ಹೊರಗೆ ಕರೆದೊಯ್ಯಲು ಮಕ್ಕಳು ಇಷ್ಟಪಡುವುದಿಲ್ಲ, ಮತ್ತು ಅವರು ಹೇಳುತ್ತಾರೆ – ನೀವು ಅಲ್ಲಿಗೆ ಬಂದು ಏನು ಮಾಡುತ್ತೀರಿ? ನಿಮಗೆ ಅಷ್ಟು ದೂರ ಬರಲು ಶಕ್ತಿಯಿಲ್ಲ, ಬಂದರೂ ಸರಿಯಾಗಿ ತಿನ್ನುವುದಿಲ್ಲ. ನೀವು ಮನೆಯಲ್ಲೇ ಇರಿ, ಅದು ನಿಮಗೇ ಒಳ್ಳೆಯದು ಎನ್ನುತ್ತಾರೆ.

ಆದರೆ ನೀವು ಚಿಕ್ಕವರಿದ್ದಾಗ ನಿಮ್ಮ ಅಪ್ಪ ನಿಮ್ಮನ್ನು ತಮ್ಮ ಹೆಗಲುಮೇಲೆ ಹೊತ್ತು , ತೋಳುಗಳಲ್ಲಿ ಅವಚಿಕೊಂಡು ಕರೆದುಕೊಂಡು ಹೋಗುತ್ತಿದ್ದರು ಎಂಬುದನ್ನು ಮರೆತುಬಿಡುತ್ತಾರೆ. ಮಗುವಾಗಿದ್ದಾಗ ನಿಮಗೆ ಸರಿಯಾಗಿ ತಿನ್ನಲು ಸಾಧ್ಯವಾಗದಿದ್ದಾಗ, ತಂದೆತಾಯಿ ತಮ್ಮ ಕೈಯಿಂದ ನಿಮಗೆ ಆಹಾರವನ್ನು ತಿನ್ನಿಸುತ್ತಿದ್ದರು ಮತ್ತು ನಿಮ್ಮ ಬಾಯಿಂದ ಆಹಾರವು ಶರೀರ, ಬಟ್ಟೆಗಳ ಮೇಲೆ ಬಿದ್ದಾಗ, ಅವರು ನಿಮ್ಮನ್ನು ಬೈಯದೆ ಪ್ರೀತಿಯಿಂದ ಸ್ವಚ್ಛ ಗೊಳಿಸುತ್ತಿದ್ದರು. ಹಾಗಾದರೆ ಅದೇ ಹೆತ್ತವರು ವೃದ್ಧಾಪ್ಯದಲ್ಲಿ ಮಕ್ಕಳಿಗೆ ಹೊರೆಯಾಗಿರುವುದು ಏಕೆ? ಪೋಷಕರು ದೇವರ ರೂಪ. ಅವರಿಗೆ ಸೇವೆ ಮಾಡಿ, ಮತ್ತು ಪ್ರೀತಿಯನ್ನು ನೀಡಿ ನೆನಪಿಡಿ , ನಿಮಗೂ ವಯಸ್ಸಾಗುತ್ತದೆ. ನೀವೂ ವೃದ್ಧರಾಗುತ್ತೀರಿ.
ನಿಮ್ಮ ತಂದೆತಾಯಿಯರನ್ನು ಯಾವಾಗಲೂ ಗೌರವಿಸಿ

Advertisement
ಬರಹ :
ಕೃಷ್ಣೇಗೌಡ..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 hour ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

15 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

24 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago