Advertisement
Opinion

ನಿಮ್ಮ ತಂದೆತಾಯಿಯರನ್ನು ಯಾವಾಗಲೂ ಗೌರವಿಸಿ | ಅವರ ಕೊನೆಗಾಲದಲ್ಲಿ ಮಗುವಂತೆ ಕಾಣಿರಿ

Share

ಒಬ್ಬ ಮಗ(Son) ತನ್ನ ವಯಸ್ಸಾದ ತಂದೆಯನ್ನು(Old Father) ರಾತ್ರಿ ಊಟಕ್ಕಾಗಿ(Dinner) ಉತ್ತಮ ರೆಸ್ಟೋರೆಂಟ್‌ಗೆ(Restaurant) ಕರೆದೊಯ್ದ. ಅಪ್ಪ ನಡುಗುವ ಕೈಯಿಂದ ಊಟಮಾಡುವಾಗ ತನ್ನ ಬಟ್ಟೆಗಳ ಮೇಲೆ ಹಲವಾರು ಬಾರಿ ಆಹಾರವನ್ನು(Food)ಚೆಲ್ಲಿಕೊಂಡ. ಬಾಯಿ, ಗಲ್ಲ, ಕುತ್ತಿಗೆ ಮೇಲೆಲ್ಲಾ ಆಹಾರದ ತುಣುಕುಗಳು ಕಾಣುತ್ತಿದ್ದವು. ರೆಸ್ಟೋರೆಂಟ್‌ನಲ್ಲಿ ಊಟಮಾಡಲು ಕುಳಿತಿದ್ದ ಇತರ ಜನರು ಆ ವೃದ್ಧನನ್ನು ಅಸಹ್ಯದಿಂದ ನೋಡುತ್ತಿದ್ದರು. ಆದರೆ ಅವರ ಮಗನು ಶಾಂತವಾಗಿ ಕುಳಿತು ಅಪ್ಪನೊಡನೆ ಊಟಮಾಡುತ್ತಿದ್ದ.

ಊಟವಾದ ನಂತರ ಮಗ ಯಾವುದೇ ಮುಜಗರ, ನಾಚಿಕೆಯಿಲ್ಲದೆ ತನ್ನ ತಂದೆಯನ್ನು ವಾಶ್ ರೂಂಗೆ ಕರೆದೊಯ್ದ. ಅವರ ಬಾಯಿ ಮುಖ ಕುತ್ತಿಗೆಗಳಿಂದ ಆಹಾರದ ತುಣುಕುಗಳನ್ನು ಮೆಲ್ಲಗೆ ಒರಸಿ ತೆಗೆದು ಅವರ ಬಟ್ಟೆಗಳನ್ನು ತನ್ನ ಕರವಸ್ತ್ರಕ್ಕೆ ನೀರು ಹಾಕಿಕೊಂಡು ಚನ್ನಾಗಿ ಸ್ವಚ್ಛಗೊಳಿಸಿದ. ಅವರ ತಲೆಗೂದಲನ್ನು ಬಾಚಿ , ಕನ್ನಡಕದ ಗಾಜುಗಳನ್ನು ತೊಳೆದು ಬಟ್ಟೆಯಿಂದ ಒರಸಿ ಮತ್ತೆ ಹಾಕಿದನಂತರ ಅವರನ್ನು ಹೊರಗೆ ಕರೆತಂದ. ರೆಸ್ಟೋರೆಂಟ್‌ನಲ್ಲಿ ಎಲ್ಲರೂ ಮೌನವಾಗಿ ಅವನತ್ತಲೇ ನೋಡುತ್ತಿದ್ದರು. ಅನಂತರ ಅವನು ಬಿಲ್ ಪಾವತಿಸಿ ಅಪ್ಪನೊಂದಿಗೆ ಹೊರಗೆ ಹೊರಟನು. ಅಲ್ಲಿ ಊಟ ಮಾಡುತ್ತಿದ್ದ ಮತ್ತೊಬ್ಬ ವೃದ್ಧರು ಅವನನ್ನು ಕರೆದು ಕೇಳಿದರು – ನೀನು ಇಲ್ಲಿ ಏನನ್ನಾದರೂ ಬಿಟ್ಟು ಹೋಗುತ್ತಿದ್ದೀಯೆಂದು ನಿನಗೆ ಅನ್ನಿಸುತ್ತಿಲ್ಲವೇ? ಎಂದು ಕೇಳಿದರು

ಅದಕ್ಕೆ ಅವನು ಉತ್ತರಿಸಿದ – ಇಲ್ಲ ಸರ್, ನಾನು ಏನನ್ನೂ ಬಿಟ್ಟಿಲ್ಲ ಎಲ್ಲವನ್ನೂ ತೆಗೆದುಕೊಂಡಿದ್ದೇನೆ ಎಂದನು.
ವೃದ್ಧರು ಹೇಳಿದರು – ಮಗೂ , ನೀನು ಇಲ್ಲಿ ಪ್ರತಿಯೊಬ್ಬ ಮಗನಿಗೂ ಒಂದು ಶಿಕ್ಷಣವನ್ನು ಪಾಠವನ್ನು ಮತ್ತು ಪ್ರತಿಯೊಬ್ಬ ತಂದೆಗೂ ಒಂದು ಭರವಸೆಯನ್ನು ಬಿಟ್ಟುಹೋಗುತ್ತಿರುವೆ ಎಂದರು. ಸಾಮಾನ್ಯವಾಗಿ ನಮ್ಮಂತಹಾ ವಯಸ್ಸಾದ ಹೆತ್ತವರನ್ನು ತಮ್ಮೊಂದಿಗೆ ಹೊರಗೆ ಕರೆದೊಯ್ಯಲು ಮಕ್ಕಳು ಇಷ್ಟಪಡುವುದಿಲ್ಲ, ಮತ್ತು ಅವರು ಹೇಳುತ್ತಾರೆ – ನೀವು ಅಲ್ಲಿಗೆ ಬಂದು ಏನು ಮಾಡುತ್ತೀರಿ? ನಿಮಗೆ ಅಷ್ಟು ದೂರ ಬರಲು ಶಕ್ತಿಯಿಲ್ಲ, ಬಂದರೂ ಸರಿಯಾಗಿ ತಿನ್ನುವುದಿಲ್ಲ. ನೀವು ಮನೆಯಲ್ಲೇ ಇರಿ, ಅದು ನಿಮಗೇ ಒಳ್ಳೆಯದು ಎನ್ನುತ್ತಾರೆ.

ಆದರೆ ನೀವು ಚಿಕ್ಕವರಿದ್ದಾಗ ನಿಮ್ಮ ಅಪ್ಪ ನಿಮ್ಮನ್ನು ತಮ್ಮ ಹೆಗಲುಮೇಲೆ ಹೊತ್ತು , ತೋಳುಗಳಲ್ಲಿ ಅವಚಿಕೊಂಡು ಕರೆದುಕೊಂಡು ಹೋಗುತ್ತಿದ್ದರು ಎಂಬುದನ್ನು ಮರೆತುಬಿಡುತ್ತಾರೆ. ಮಗುವಾಗಿದ್ದಾಗ ನಿಮಗೆ ಸರಿಯಾಗಿ ತಿನ್ನಲು ಸಾಧ್ಯವಾಗದಿದ್ದಾಗ, ತಂದೆತಾಯಿ ತಮ್ಮ ಕೈಯಿಂದ ನಿಮಗೆ ಆಹಾರವನ್ನು ತಿನ್ನಿಸುತ್ತಿದ್ದರು ಮತ್ತು ನಿಮ್ಮ ಬಾಯಿಂದ ಆಹಾರವು ಶರೀರ, ಬಟ್ಟೆಗಳ ಮೇಲೆ ಬಿದ್ದಾಗ, ಅವರು ನಿಮ್ಮನ್ನು ಬೈಯದೆ ಪ್ರೀತಿಯಿಂದ ಸ್ವಚ್ಛ ಗೊಳಿಸುತ್ತಿದ್ದರು. ಹಾಗಾದರೆ ಅದೇ ಹೆತ್ತವರು ವೃದ್ಧಾಪ್ಯದಲ್ಲಿ ಮಕ್ಕಳಿಗೆ ಹೊರೆಯಾಗಿರುವುದು ಏಕೆ? ಪೋಷಕರು ದೇವರ ರೂಪ. ಅವರಿಗೆ ಸೇವೆ ಮಾಡಿ, ಮತ್ತು ಪ್ರೀತಿಯನ್ನು ನೀಡಿ ನೆನಪಿಡಿ , ನಿಮಗೂ ವಯಸ್ಸಾಗುತ್ತದೆ. ನೀವೂ ವೃದ್ಧರಾಗುತ್ತೀರಿ.
ನಿಮ್ಮ ತಂದೆತಾಯಿಯರನ್ನು ಯಾವಾಗಲೂ ಗೌರವಿಸಿ

ಬರಹ :
ಕೃಷ್ಣೇಗೌಡ..
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

43 seconds ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

52 minutes ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

2 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

15 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

1 day ago