Advertisement
Opinion

ಯಾವಾಗಲೂ ಶುದ್ಧ ದೇಸಿ ಹಸುವಿನ ಶುದ್ಧ ತುಪ್ಪವನ್ನು ಬಳಸಿ…..| ದೇಸಿ ತುಪ್ಪದ ಆರೋಗ್ಯಕರ ಪ್ರಯೋಜನಗಳು…

Share

ಅನೇಕ ಜನರು ತೂಕ(Weight) ಇಳಿಸಿಕೊಳ್ಳಲು ಆಹಾರಕ್ರಮವನ್ನು ಪ್ರಾರಂಭಿಸಿದ ನಂತರ ತುಪ್ಪವನ್ನು(Ghee)ತಿನ್ನುವುದನ್ನು ನಿಲ್ಲಿಸುತ್ತಾರೆ. ಇದರ ಹಿಂದಿನ ಕಾರಣ ತುಪ್ಪ ತಿನ್ನುವುದರಿಂದ ತೂಕ ಹೆಚ್ಚಾಗುವುದು. ಆದರೆ, ಅದು ಹಾಗಲ್ಲ. ದೇಸಿ ತುಪ್ಪ ನಮ್ಮ ಮೆದುಳು ಮತ್ತು ದೇಹವನ್ನು(Brain-Body)ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಕೆಲವು ಕಾಯಿಲೆಗಳಲ್ಲಿ, ವೈದ್ಯರು(Doctor) ತುಪ್ಪವನ್ನು ತಿನ್ನಲು ಸಲಹೆ ನೀಡುತ್ತಾರೆ. ಆದರೆ ಈ ಸಲಹೆಯನ್ನು ಎಲ್ಲಾ ರೋಗಿಗಳಿಗೆ ನೀಡಲಾಗುವುದಿಲ್ಲ. ಇಂದು ನಾನು ನಿಮಗೆ ದೇಸಿ ತುಪ್ಪ ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ಹೇಳುತ್ತೇನೆ.

Advertisement
Advertisement

ದೇಸಿ ತುಪ್ಪದ ಆರೋಗ್ಯಕರ ಪ್ರಯೋಜನಗಳು… 

  • ದೇಸಿ ತುಪ್ಪದಲ್ಲಿ ಶಾರ್ಟ್ ಚೈನ್ ಫ್ಯಾಟಿ ಆಸಿಡ್ ಇರುವುದರಿಂದ ಜೀರ್ಣವಾಗುವುದು ತುಂಬಾ ಸುಲಭ.
  • ಇದು ವಿಟಮಿನ್ ಎ, ಡಿ ಮತ್ತು ಕ್ಯಾಲ್ಸಿಯಂ, ರಂಜಕ, ಖನಿಜಗಳು, ಪೊಟ್ಯಾಸಿಯಮ್‌ನಂತಹ ಅನೇಕ ಪೋಷಕಾಂಶಗಳನ್ನು ಸಹ ಒಳಗೊಂಡಿದೆ.
  • ದೇಸಿ ತುಪ್ಪ ತಿನ್ನುವುದರಿಂದ ಕೀಲು ನೋವು ಕಡಿಮೆಯಾಗುತ್ತದೆ.
  • ದೇಸಿ ತುಪ್ಪದಿಂದ ತಲೆಗೆ ಮಸಾಜ್ ಮಾಡುವುದರಿಂದ ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯುತ್ತದೆ ಮತ್ತು ತ್ವಚೆ ಹೊಳೆಯುವಂತೆ ಮಾಡುತ್ತದೆ.
  • ಪ್ರತಿದಿನ ಶುದ್ಧ ತುಪ್ಪವನ್ನು ತಿನ್ನುವುದು ವಾತ ಮತ್ತು ಪಿತ್ತವನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ.
  • ಶುದ್ಧ ತುಪ್ಪವನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ.
  • ಮಕ್ಕಳ ಜನನದ ನಂತರ ದೇಹದಲ್ಲಿ ವಾತ ಹೆಚ್ಚಾಗುತ್ತದೆ. ಅದಕ್ಕಾಗಿ ಶುದ್ಧ ತುಪ್ಪವನ್ನು ತಿನ್ನಬೇಕು.
  • ಹೃದಯ ನಾಳಗಳಲ್ಲಿ ಅಡಚಣೆಯಾದರೆ ತುಪ್ಪ ಲೂಬ್ರಿಕಂಟ್ ಆಗಿ ಕಾರ್ಯನಿರ್ವಹಿಸುತ್ತದೆ.
  • ಅನಿಲದ ಸಮಸ್ಯೆಯನ್ನು ಕಡಿಮೆ ಮಾಡಲು ತುಪ್ಪ ತುಂಬಾ ಪ್ರಯೋಜನಕಾರಿ.
  • ಬೇಸಿಗೆಯ ದಿನಗಳಲ್ಲಿ ದೇಹದಲ್ಲಿ ಪಿತ್ತ ಹೆಚ್ಚಾಗುವುದನ್ನು ಕಡಿಮೆ ಮಾಡಲು ತುಪ್ಪವನ್ನು ಸೇವಿಸಬೇಕು.
  • ಬೇಳೆಕಾಳುಗಳನ್ನು ಬೇಯಿಸುವಾಗ ತುಪ್ಪವನ್ನು ಸೇರಿಸುವುದರಿಂದ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.
  • ತುಪ್ಪ ಕಣ್ಣಿನ ಆಯಾಸವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಚರ್ಮ ಮತ್ತು ಕೂದಲಿಗೆ ಒಳ್ಳೆಯದು…
  • ಶುದ್ಧ ತುಪ್ಪದಿಂದ ಚರ್ಮ ಮೃದುವಾಗುತ್ತದೆ ಮತ್ತು ಚರ್ಮವು ತೇವವಾಗಿರುತ್ತದೆ.
  • ತ್ವಚೆಯ ಪೋಷಣೆಯ ಜೊತೆಗೆ ತ್ವಚೆಯ ಶುಷ್ಕತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಶುದ್ಧ ತುಪ್ಪದಿಂದ ಮುಖಕ್ಕೆ ಮಸಾಜ್ ಮಾಡುವುದು ಉತ್ತಮ.
  • ಕೂದಲು ಹೊಳೆಯುವ ಮತ್ತು ಮೃದುವಾಗಲು ಶುದ್ಧ ತುಪ್ಪದಿಂದ ತಲೆಗೆ ಮಸಾಜ್ ಮಾಡಿ. ಇದು ಕೂದಲನ್ನು ಕಪ್ಪು, ದಪ್ಪ ಮತ್ತು ಬಲವಾಗಿಸಲು ಸಹಾಯ ಮಾಡುತ್ತದೆ.
  • ದೇಹದ ಮೇಲಿನ ಸುಟ್ಟಗಾಯಗಳು ಅಥವಾ ಗಾಯಗಳ ಗುರುತುಗಳನ್ನು ಕಡಿಮೆ ಮಾಡುತ್ತದೆ.

ಹೃದಯಕ್ಕಾಗಿ…

  • ಶುದ್ಧ ತುಪ್ಪದ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.
  • ಶುದ್ಧ ತುಪ್ಪದಲ್ಲಿ ವಿಟಮಿನ್ ಕೆ2 ಇದೆ. ಈ ಕಾರಣದಿಂದಾಗಿ, ರಕ್ತ ಕಣಗಳ ನಡುವೆ ಇದು ಸಂಗ್ರಹವಾದ ಕ್ಯಾಲ್ಸಿಯಂ ಅನ್ನು ನಾಶಮಾಡಲು ಕೆಲಸ ಮಾಡುತ್ತದೆ. ಇದು ರಕ್ತ ಪರಿಚಲನೆಯನ್ನು ಉತ್ತಮವಾಗಿಡುತ್ತದೆ.
  • ಶುದ್ಧ ತುಪ್ಪದ ಸೇವನೆಯು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಸೋಂಕಿನಿಂದ ಉಂಟಾಗುವ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ನೀಡುತ್ತದೆ.
  • ಶುದ್ಧ ತುಪ್ಪದಲ್ಲಿ ಆಂಟಿಮೈಕ್ರೊಬಿಯಲ್, ಕ್ಯಾನ್ಸರ್ ವಿರೋಧಿ ಮತ್ತು ಆಂಟಿವೈರಲ್ ಏಜೆಂಟ್‌ಗಳಿವೆ. ಇದು ಅನೇಕ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
  • ಉತ್ತಮ ಜೀರ್ಣಾಂಗ ವ್ಯವಸ್ಥೆಗೆ ಸಹಾಯ ಮಾಡುತ್ತದೆ.
  • ಶುದ್ಧ ತುಪ್ಪದ ಸೇವನೆಯಿಂದ ದೇಹದಲ್ಲಿ ಸಂಗ್ರಹವಾದ ಕೊಬ್ಬು ಕರಗಿ ವಿಟಮಿನ್ ಗಳಾಗಿ ಪರಿವರ್ತನೆಯಾಗುತ್ತದೆ.
  • ದೇಸಿ ತುಪ್ಪ ತಿನ್ನುವುದರಿಂದ ಆಹಾರವು ತ್ವರಿತವಾಗಿ ಜೀರ್ಣವಾಗುತ್ತದೆ ಮತ್ತು ಚಯಾಪಚಯವು ಉತ್ತಮವಾಗಲು ಸಹಾಯ ಮಾಡುತ್ತದೆ.
  • ಅಲ್ಸರ್, ಗ್ಯಾಸ್ ಮತ್ತು ಅಜೀರ್ಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ತೂಕ ಕಡಿಮೆ ಮಾಡಲು: ಶುದ್ಧ ತುಪ್ಪದಲ್ಲಿ CLA ಲಭ್ಯವಿದೆ. ಇದು ಚಯಾಪಚಯವನ್ನು ಉತ್ತಮಗೊಳಿಸುತ್ತದೆ ಮತ್ತು ತೂಕ ನಿಯಂತ್ರಣದಲ್ಲಿ ಸಹಾಯ ಮಾಡುತ್ತದೆ.
  • CLA ಇನ್ಸುಲಿನ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ತೂಕ ಹೆಚ್ಚಾಗುವ ಮತ್ತು ಸಕ್ಕರೆಯ ಹೆಚ್ಚಳದ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಶುದ್ಧ ತುಪ್ಪದ ಸೇವನೆಯಿಂದ ದೇಹದಲ್ಲಿ ಹೆಚ್ಚುವರಿ ಕೊಬ್ಬು ರಚನೆಯ ಸಮಸ್ಯೆ ಇಲ್ಲ.
  • ಮೂಳೆಗಳಿಗೆ ಲೂಬ್ರಿಕಂಟ್ ಆಗಿ ಕಾರ್ಯನಿರ್ವಹಿಸುತ್ತದೆ, ಮೊಣಕಾಲು ನೋವಿಗೆ ಉಪಯುಕ್ತವಾಗಿದೆ.
  • ದಿನಕ್ಕೆ ಎರಡು ಚಮಚ ತುಪ್ಪ ತಿನ್ನಬೇಕು. ಅನ್ನ, ಪಲ್ಯ, ಸಾರು, ಇವುಗಳೊಂದಿಗೆ ಸೇವಿಸಿದರೂ ಕೆಲಸ ಮಾಡುತ್ತದೆ.

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

42 minutes ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

47 minutes ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

55 minutes ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

1 hour ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

1 hour ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

11 hours ago