Opinion

ಯಾವಾಗಲೂ ಶುದ್ಧ ದೇಸಿ ಹಸುವಿನ ಶುದ್ಧ ತುಪ್ಪವನ್ನು ಬಳಸಿ…..| ದೇಸಿ ತುಪ್ಪದ ಆರೋಗ್ಯಕರ ಪ್ರಯೋಜನಗಳು…

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅನೇಕ ಜನರು ತೂಕ(Weight) ಇಳಿಸಿಕೊಳ್ಳಲು ಆಹಾರಕ್ರಮವನ್ನು ಪ್ರಾರಂಭಿಸಿದ ನಂತರ ತುಪ್ಪವನ್ನು(Ghee)ತಿನ್ನುವುದನ್ನು ನಿಲ್ಲಿಸುತ್ತಾರೆ. ಇದರ ಹಿಂದಿನ ಕಾರಣ ತುಪ್ಪ ತಿನ್ನುವುದರಿಂದ ತೂಕ ಹೆಚ್ಚಾಗುವುದು. ಆದರೆ, ಅದು ಹಾಗಲ್ಲ. ದೇಸಿ ತುಪ್ಪ ನಮ್ಮ ಮೆದುಳು ಮತ್ತು ದೇಹವನ್ನು(Brain-Body)ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಕೆಲವು ಕಾಯಿಲೆಗಳಲ್ಲಿ, ವೈದ್ಯರು(Doctor) ತುಪ್ಪವನ್ನು ತಿನ್ನಲು ಸಲಹೆ ನೀಡುತ್ತಾರೆ. ಆದರೆ ಈ ಸಲಹೆಯನ್ನು ಎಲ್ಲಾ ರೋಗಿಗಳಿಗೆ ನೀಡಲಾಗುವುದಿಲ್ಲ. ಇಂದು ನಾನು ನಿಮಗೆ ದೇಸಿ ತುಪ್ಪ ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ಹೇಳುತ್ತೇನೆ.

Advertisement

ದೇಸಿ ತುಪ್ಪದ ಆರೋಗ್ಯಕರ ಪ್ರಯೋಜನಗಳು… 

  • ದೇಸಿ ತುಪ್ಪದಲ್ಲಿ ಶಾರ್ಟ್ ಚೈನ್ ಫ್ಯಾಟಿ ಆಸಿಡ್ ಇರುವುದರಿಂದ ಜೀರ್ಣವಾಗುವುದು ತುಂಬಾ ಸುಲಭ.
  • ಇದು ವಿಟಮಿನ್ ಎ, ಡಿ ಮತ್ತು ಕ್ಯಾಲ್ಸಿಯಂ, ರಂಜಕ, ಖನಿಜಗಳು, ಪೊಟ್ಯಾಸಿಯಮ್‌ನಂತಹ ಅನೇಕ ಪೋಷಕಾಂಶಗಳನ್ನು ಸಹ ಒಳಗೊಂಡಿದೆ.
  • ದೇಸಿ ತುಪ್ಪ ತಿನ್ನುವುದರಿಂದ ಕೀಲು ನೋವು ಕಡಿಮೆಯಾಗುತ್ತದೆ.
  • ದೇಸಿ ತುಪ್ಪದಿಂದ ತಲೆಗೆ ಮಸಾಜ್ ಮಾಡುವುದರಿಂದ ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯುತ್ತದೆ ಮತ್ತು ತ್ವಚೆ ಹೊಳೆಯುವಂತೆ ಮಾಡುತ್ತದೆ.
  • ಪ್ರತಿದಿನ ಶುದ್ಧ ತುಪ್ಪವನ್ನು ತಿನ್ನುವುದು ವಾತ ಮತ್ತು ಪಿತ್ತವನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ.
  • ಶುದ್ಧ ತುಪ್ಪವನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ.
  • ಮಕ್ಕಳ ಜನನದ ನಂತರ ದೇಹದಲ್ಲಿ ವಾತ ಹೆಚ್ಚಾಗುತ್ತದೆ. ಅದಕ್ಕಾಗಿ ಶುದ್ಧ ತುಪ್ಪವನ್ನು ತಿನ್ನಬೇಕು.
  • ಹೃದಯ ನಾಳಗಳಲ್ಲಿ ಅಡಚಣೆಯಾದರೆ ತುಪ್ಪ ಲೂಬ್ರಿಕಂಟ್ ಆಗಿ ಕಾರ್ಯನಿರ್ವಹಿಸುತ್ತದೆ.
  • ಅನಿಲದ ಸಮಸ್ಯೆಯನ್ನು ಕಡಿಮೆ ಮಾಡಲು ತುಪ್ಪ ತುಂಬಾ ಪ್ರಯೋಜನಕಾರಿ.
  • ಬೇಸಿಗೆಯ ದಿನಗಳಲ್ಲಿ ದೇಹದಲ್ಲಿ ಪಿತ್ತ ಹೆಚ್ಚಾಗುವುದನ್ನು ಕಡಿಮೆ ಮಾಡಲು ತುಪ್ಪವನ್ನು ಸೇವಿಸಬೇಕು.
  • ಬೇಳೆಕಾಳುಗಳನ್ನು ಬೇಯಿಸುವಾಗ ತುಪ್ಪವನ್ನು ಸೇರಿಸುವುದರಿಂದ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.
  • ತುಪ್ಪ ಕಣ್ಣಿನ ಆಯಾಸವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಚರ್ಮ ಮತ್ತು ಕೂದಲಿಗೆ ಒಳ್ಳೆಯದು…
  • ಶುದ್ಧ ತುಪ್ಪದಿಂದ ಚರ್ಮ ಮೃದುವಾಗುತ್ತದೆ ಮತ್ತು ಚರ್ಮವು ತೇವವಾಗಿರುತ್ತದೆ.
  • ತ್ವಚೆಯ ಪೋಷಣೆಯ ಜೊತೆಗೆ ತ್ವಚೆಯ ಶುಷ್ಕತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಶುದ್ಧ ತುಪ್ಪದಿಂದ ಮುಖಕ್ಕೆ ಮಸಾಜ್ ಮಾಡುವುದು ಉತ್ತಮ.
  • ಕೂದಲು ಹೊಳೆಯುವ ಮತ್ತು ಮೃದುವಾಗಲು ಶುದ್ಧ ತುಪ್ಪದಿಂದ ತಲೆಗೆ ಮಸಾಜ್ ಮಾಡಿ. ಇದು ಕೂದಲನ್ನು ಕಪ್ಪು, ದಪ್ಪ ಮತ್ತು ಬಲವಾಗಿಸಲು ಸಹಾಯ ಮಾಡುತ್ತದೆ.
  • ದೇಹದ ಮೇಲಿನ ಸುಟ್ಟಗಾಯಗಳು ಅಥವಾ ಗಾಯಗಳ ಗುರುತುಗಳನ್ನು ಕಡಿಮೆ ಮಾಡುತ್ತದೆ.

ಹೃದಯಕ್ಕಾಗಿ…

  • ಶುದ್ಧ ತುಪ್ಪದ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.
  • ಶುದ್ಧ ತುಪ್ಪದಲ್ಲಿ ವಿಟಮಿನ್ ಕೆ2 ಇದೆ. ಈ ಕಾರಣದಿಂದಾಗಿ, ರಕ್ತ ಕಣಗಳ ನಡುವೆ ಇದು ಸಂಗ್ರಹವಾದ ಕ್ಯಾಲ್ಸಿಯಂ ಅನ್ನು ನಾಶಮಾಡಲು ಕೆಲಸ ಮಾಡುತ್ತದೆ. ಇದು ರಕ್ತ ಪರಿಚಲನೆಯನ್ನು ಉತ್ತಮವಾಗಿಡುತ್ತದೆ.
  • ಶುದ್ಧ ತುಪ್ಪದ ಸೇವನೆಯು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಸೋಂಕಿನಿಂದ ಉಂಟಾಗುವ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ನೀಡುತ್ತದೆ.
  • ಶುದ್ಧ ತುಪ್ಪದಲ್ಲಿ ಆಂಟಿಮೈಕ್ರೊಬಿಯಲ್, ಕ್ಯಾನ್ಸರ್ ವಿರೋಧಿ ಮತ್ತು ಆಂಟಿವೈರಲ್ ಏಜೆಂಟ್‌ಗಳಿವೆ. ಇದು ಅನೇಕ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
  • ಉತ್ತಮ ಜೀರ್ಣಾಂಗ ವ್ಯವಸ್ಥೆಗೆ ಸಹಾಯ ಮಾಡುತ್ತದೆ.
  • ಶುದ್ಧ ತುಪ್ಪದ ಸೇವನೆಯಿಂದ ದೇಹದಲ್ಲಿ ಸಂಗ್ರಹವಾದ ಕೊಬ್ಬು ಕರಗಿ ವಿಟಮಿನ್ ಗಳಾಗಿ ಪರಿವರ್ತನೆಯಾಗುತ್ತದೆ.
  • ದೇಸಿ ತುಪ್ಪ ತಿನ್ನುವುದರಿಂದ ಆಹಾರವು ತ್ವರಿತವಾಗಿ ಜೀರ್ಣವಾಗುತ್ತದೆ ಮತ್ತು ಚಯಾಪಚಯವು ಉತ್ತಮವಾಗಲು ಸಹಾಯ ಮಾಡುತ್ತದೆ.
  • ಅಲ್ಸರ್, ಗ್ಯಾಸ್ ಮತ್ತು ಅಜೀರ್ಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ತೂಕ ಕಡಿಮೆ ಮಾಡಲು: ಶುದ್ಧ ತುಪ್ಪದಲ್ಲಿ CLA ಲಭ್ಯವಿದೆ. ಇದು ಚಯಾಪಚಯವನ್ನು ಉತ್ತಮಗೊಳಿಸುತ್ತದೆ ಮತ್ತು ತೂಕ ನಿಯಂತ್ರಣದಲ್ಲಿ ಸಹಾಯ ಮಾಡುತ್ತದೆ.
  • CLA ಇನ್ಸುಲಿನ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ತೂಕ ಹೆಚ್ಚಾಗುವ ಮತ್ತು ಸಕ್ಕರೆಯ ಹೆಚ್ಚಳದ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಶುದ್ಧ ತುಪ್ಪದ ಸೇವನೆಯಿಂದ ದೇಹದಲ್ಲಿ ಹೆಚ್ಚುವರಿ ಕೊಬ್ಬು ರಚನೆಯ ಸಮಸ್ಯೆ ಇಲ್ಲ.
  • ಮೂಳೆಗಳಿಗೆ ಲೂಬ್ರಿಕಂಟ್ ಆಗಿ ಕಾರ್ಯನಿರ್ವಹಿಸುತ್ತದೆ, ಮೊಣಕಾಲು ನೋವಿಗೆ ಉಪಯುಕ್ತವಾಗಿದೆ.
  • ದಿನಕ್ಕೆ ಎರಡು ಚಮಚ ತುಪ್ಪ ತಿನ್ನಬೇಕು. ಅನ್ನ, ಪಲ್ಯ, ಸಾರು, ಇವುಗಳೊಂದಿಗೆ ಸೇವಿಸಿದರೂ ಕೆಲಸ ಮಾಡುತ್ತದೆ.

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

6 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

6 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

6 hours ago

ಶುಕ್ರ ಮತ್ತು ರಾಹು ಮೀನ ರಾಶಿಯಲ್ಲಿ ಸಂಯೋಗ | 5 ರಾಶಿಚಕ್ರಗಳಲ್ಲಿ ವಿಶೇಷ ಪ್ರಭಾವ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…

16 hours ago

ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |

ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.

16 hours ago