ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಸಮ್ಮಿಲನ ಸಭೆ | ಹಿಂದೆ ಆಗಿದ್ದೆಲ್ಲ ಮರೆತುಬಿಡಿ-ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ- ಎಚ್‌ ಡಿ ದೇವೇಗೌಡ

March 29, 2024
8:35 PM

ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ರಾಜಕೀಯ ಪಕ್ಷಗಳು ಬಿರುಸಿನ ಚಟುವಟಿಕೆ ನಡೆಸುತ್ತಿವೆ. ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಮತ್ತು ಜೆಡಿಎಸ್  ಪಕ್ಷದ 90ಕ್ಕೂ ಹೆಚ್ಚು ಘಟಾನುಘಟಿಗಳು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸೇರಿ ಪರಸ್ಪರ ಗೌರವಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಸುದೀರ್ಘ ಚರ್ಚೆ ನಡೆಸಿ ಲೋಕಸಭಾ ಚುನಾವಣೆಯ  ಗೆಲುವಿಗೆ ಅಗತ್ಯ ರಣತಂತ್ರ ರೂಪಿಸಿದ್ದಾರೆ. ಪರಸ್ಪರ ಹೊಗಳಿಕೊಂಡ ನಾಯಕರೆಲ್ಲರ ಬಾಯಲ್ಲಿ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕೆಂಬ ಘೋಷಣೆ ಹೊರಹೊಮ್ಮಿತು. ಇದರ ಜೊತೆ ಜೊತೆಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ‌
ಸಭೆಯಲ್ಲಿ ಮಾತನಾಡಿದ ದೇವೇ ಗೌಡ,  ಜೆಡಿಎಸ್ ಎಲ್ಲಿದೆ ಎಂದು ಸಿದ್ದರಾಮಯ್ಯ ಕೇಳುತ್ತಾರೆ. ಅವರಿಗೆ ಅಧಿಕಾರದ ಮದ ಏರಿದೆ. ಸಿದ್ದರಾಮಯ್ಯ ನವರ ಗರ್ವ ಭಂಗ ಆಗಬೇಕು, ಪರಸ್ಪರ ಸಹಕಾರ, ಒಗ್ಗಟ್ಟಿಗೆ ಯಡಿಯೂರಪ್ಪ ಪಾತ್ರ ಮುಖ್ಯವಾಗಿದೆ. ಹಿಂದೆ ಆಗಿದ್ದೆಲ್ಲ ಮರೆತುಬಿಡಿ, ಕಾಲ ಕ್ಷಣಿಕ. ಹಿಂದೆ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರೆಯೋಣ. ದೇಶದಲ್ಲಿ ಮೋದಿಯವರಂಥ  ನಾಯಕ ಮತ್ತೊಬ್ಬರು ಇಲ್ಲ ಎಂದು ಹೆಚ್‌ಡಿ ದೇವೇಗೌಡರು ಹೇಳಿದರು.

ಸಮನ್ವಯ ಸಭೆಗೆ ಕಾಲ ಇವತ್ತು ಕೂಡಿ ಬಂದಿದೆ. ನಮ್ಮ ಮೈತ್ರಿ ಬಗ್ಗೆ ಕಾಂಗ್ರೆಸ್ ಗೆ ನಡುಕ ಶುರುವಾಗಿದೆ. ನಮ್ಮ ಕಾರ್ಯಬದ್ಧತೆಯಲ್ಲಿ ಕಿಂಚಿತ್ತೂ ಅಡ್ಡಿ ಆಗಬಾರದು. ಸಣ್ಣಪುಟ್ಟ ಸಮಸ್ಯೆ ಇದ್ರೆ ಉಸ್ತುವಾರಿಗಳ ಗಮನಕ್ಕೆ ತನ್ನಿ ಇದು ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಮುಂದುವರೆಯಬೇಕು ಎಂಬ ಉದ್ದೇಶವಿದೆ. ರಾಜ್ಯದ ಅಭಿವೃದ್ಧಿಗೆ ಈ ಮೈತ್ರಿ ಮಾಡಲಾಗಿದೆ. ಮೂರನೇ ಬಾರಿ ಎನ್‌ಡಿಎ ಸರ್ಕಾರ ಬರುವುದು ಸೂರ್ಯ ಚಂದ್ರರಷ್ಟೇ ಸ್ಪಷ್ಟ ಎಂದು ಕುಮಾರಸ್ವಾಮಿ ಹೇಳಿದರು.

ಮೋದಿಯವರು ಮತ್ತೆ ಪ್ರಧಾನಿ ಆಗಲು ದೇವೇಗೌಡರು ನಮಗೆಲ್ಲ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದ ನಮಗೆ ಆನೆ ಬಲ. ಈಗಿನ ಈ ಮೈತ್ರಿಗೆ ರಾಜ್ಯದ ಮತದಾರರ ಸಂಪೂರ್ಣ ಆಶೀರ್ವಾದ ಇದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

  •  ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror