MIRROR FOCUS

ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಸಮ್ಮಿಲನ ಸಭೆ | ಹಿಂದೆ ಆಗಿದ್ದೆಲ್ಲ ಮರೆತುಬಿಡಿ-ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ- ಎಚ್‌ ಡಿ ದೇವೇಗೌಡ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ರಾಜಕೀಯ ಪಕ್ಷಗಳು ಬಿರುಸಿನ ಚಟುವಟಿಕೆ ನಡೆಸುತ್ತಿವೆ. ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಮತ್ತು ಜೆಡಿಎಸ್  ಪಕ್ಷದ 90ಕ್ಕೂ ಹೆಚ್ಚು ಘಟಾನುಘಟಿಗಳು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸೇರಿ ಪರಸ್ಪರ ಗೌರವಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

Advertisement
Advertisement
ಸುದೀರ್ಘ ಚರ್ಚೆ ನಡೆಸಿ ಲೋಕಸಭಾ ಚುನಾವಣೆಯ  ಗೆಲುವಿಗೆ ಅಗತ್ಯ ರಣತಂತ್ರ ರೂಪಿಸಿದ್ದಾರೆ. ಪರಸ್ಪರ ಹೊಗಳಿಕೊಂಡ ನಾಯಕರೆಲ್ಲರ ಬಾಯಲ್ಲಿ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕೆಂಬ ಘೋಷಣೆ ಹೊರಹೊಮ್ಮಿತು. ಇದರ ಜೊತೆ ಜೊತೆಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ‌
ಸಭೆಯಲ್ಲಿ ಮಾತನಾಡಿದ ದೇವೇ ಗೌಡ,  ಜೆಡಿಎಸ್ ಎಲ್ಲಿದೆ ಎಂದು ಸಿದ್ದರಾಮಯ್ಯ ಕೇಳುತ್ತಾರೆ. ಅವರಿಗೆ ಅಧಿಕಾರದ ಮದ ಏರಿದೆ. ಸಿದ್ದರಾಮಯ್ಯ ನವರ ಗರ್ವ ಭಂಗ ಆಗಬೇಕು, ಪರಸ್ಪರ ಸಹಕಾರ, ಒಗ್ಗಟ್ಟಿಗೆ ಯಡಿಯೂರಪ್ಪ ಪಾತ್ರ ಮುಖ್ಯವಾಗಿದೆ. ಹಿಂದೆ ಆಗಿದ್ದೆಲ್ಲ ಮರೆತುಬಿಡಿ, ಕಾಲ ಕ್ಷಣಿಕ. ಹಿಂದೆ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರೆಯೋಣ. ದೇಶದಲ್ಲಿ ಮೋದಿಯವರಂಥ  ನಾಯಕ ಮತ್ತೊಬ್ಬರು ಇಲ್ಲ ಎಂದು ಹೆಚ್‌ಡಿ ದೇವೇಗೌಡರು ಹೇಳಿದರು.

ಸಮನ್ವಯ ಸಭೆಗೆ ಕಾಲ ಇವತ್ತು ಕೂಡಿ ಬಂದಿದೆ. ನಮ್ಮ ಮೈತ್ರಿ ಬಗ್ಗೆ ಕಾಂಗ್ರೆಸ್ ಗೆ ನಡುಕ ಶುರುವಾಗಿದೆ. ನಮ್ಮ ಕಾರ್ಯಬದ್ಧತೆಯಲ್ಲಿ ಕಿಂಚಿತ್ತೂ ಅಡ್ಡಿ ಆಗಬಾರದು. ಸಣ್ಣಪುಟ್ಟ ಸಮಸ್ಯೆ ಇದ್ರೆ ಉಸ್ತುವಾರಿಗಳ ಗಮನಕ್ಕೆ ತನ್ನಿ ಇದು ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಮುಂದುವರೆಯಬೇಕು ಎಂಬ ಉದ್ದೇಶವಿದೆ. ರಾಜ್ಯದ ಅಭಿವೃದ್ಧಿಗೆ ಈ ಮೈತ್ರಿ ಮಾಡಲಾಗಿದೆ. ಮೂರನೇ ಬಾರಿ ಎನ್‌ಡಿಎ ಸರ್ಕಾರ ಬರುವುದು ಸೂರ್ಯ ಚಂದ್ರರಷ್ಟೇ ಸ್ಪಷ್ಟ ಎಂದು ಕುಮಾರಸ್ವಾಮಿ ಹೇಳಿದರು.

ಮೋದಿಯವರು ಮತ್ತೆ ಪ್ರಧಾನಿ ಆಗಲು ದೇವೇಗೌಡರು ನಮಗೆಲ್ಲ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದ ನಮಗೆ ಆನೆ ಬಲ. ಈಗಿನ ಈ ಮೈತ್ರಿಗೆ ರಾಜ್ಯದ ಮತದಾರರ ಸಂಪೂರ್ಣ ಆಶೀರ್ವಾದ ಇದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

5 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

6 hours ago

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…

7 hours ago

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

7 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

9 hours ago

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ

ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago