MIRROR FOCUS

ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಸಮ್ಮಿಲನ ಸಭೆ | ಹಿಂದೆ ಆಗಿದ್ದೆಲ್ಲ ಮರೆತುಬಿಡಿ-ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ- ಎಚ್‌ ಡಿ ದೇವೇಗೌಡ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ರಾಜಕೀಯ ಪಕ್ಷಗಳು ಬಿರುಸಿನ ಚಟುವಟಿಕೆ ನಡೆಸುತ್ತಿವೆ. ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಮತ್ತು ಜೆಡಿಎಸ್  ಪಕ್ಷದ 90ಕ್ಕೂ ಹೆಚ್ಚು ಘಟಾನುಘಟಿಗಳು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸೇರಿ ಪರಸ್ಪರ ಗೌರವಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

Advertisement
ಸುದೀರ್ಘ ಚರ್ಚೆ ನಡೆಸಿ ಲೋಕಸಭಾ ಚುನಾವಣೆಯ  ಗೆಲುವಿಗೆ ಅಗತ್ಯ ರಣತಂತ್ರ ರೂಪಿಸಿದ್ದಾರೆ. ಪರಸ್ಪರ ಹೊಗಳಿಕೊಂಡ ನಾಯಕರೆಲ್ಲರ ಬಾಯಲ್ಲಿ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕೆಂಬ ಘೋಷಣೆ ಹೊರಹೊಮ್ಮಿತು. ಇದರ ಜೊತೆ ಜೊತೆಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ‌
ಸಭೆಯಲ್ಲಿ ಮಾತನಾಡಿದ ದೇವೇ ಗೌಡ,  ಜೆಡಿಎಸ್ ಎಲ್ಲಿದೆ ಎಂದು ಸಿದ್ದರಾಮಯ್ಯ ಕೇಳುತ್ತಾರೆ. ಅವರಿಗೆ ಅಧಿಕಾರದ ಮದ ಏರಿದೆ. ಸಿದ್ದರಾಮಯ್ಯ ನವರ ಗರ್ವ ಭಂಗ ಆಗಬೇಕು, ಪರಸ್ಪರ ಸಹಕಾರ, ಒಗ್ಗಟ್ಟಿಗೆ ಯಡಿಯೂರಪ್ಪ ಪಾತ್ರ ಮುಖ್ಯವಾಗಿದೆ. ಹಿಂದೆ ಆಗಿದ್ದೆಲ್ಲ ಮರೆತುಬಿಡಿ, ಕಾಲ ಕ್ಷಣಿಕ. ಹಿಂದೆ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರೆಯೋಣ. ದೇಶದಲ್ಲಿ ಮೋದಿಯವರಂಥ  ನಾಯಕ ಮತ್ತೊಬ್ಬರು ಇಲ್ಲ ಎಂದು ಹೆಚ್‌ಡಿ ದೇವೇಗೌಡರು ಹೇಳಿದರು.

ಸಮನ್ವಯ ಸಭೆಗೆ ಕಾಲ ಇವತ್ತು ಕೂಡಿ ಬಂದಿದೆ. ನಮ್ಮ ಮೈತ್ರಿ ಬಗ್ಗೆ ಕಾಂಗ್ರೆಸ್ ಗೆ ನಡುಕ ಶುರುವಾಗಿದೆ. ನಮ್ಮ ಕಾರ್ಯಬದ್ಧತೆಯಲ್ಲಿ ಕಿಂಚಿತ್ತೂ ಅಡ್ಡಿ ಆಗಬಾರದು. ಸಣ್ಣಪುಟ್ಟ ಸಮಸ್ಯೆ ಇದ್ರೆ ಉಸ್ತುವಾರಿಗಳ ಗಮನಕ್ಕೆ ತನ್ನಿ ಇದು ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಮುಂದುವರೆಯಬೇಕು ಎಂಬ ಉದ್ದೇಶವಿದೆ. ರಾಜ್ಯದ ಅಭಿವೃದ್ಧಿಗೆ ಈ ಮೈತ್ರಿ ಮಾಡಲಾಗಿದೆ. ಮೂರನೇ ಬಾರಿ ಎನ್‌ಡಿಎ ಸರ್ಕಾರ ಬರುವುದು ಸೂರ್ಯ ಚಂದ್ರರಷ್ಟೇ ಸ್ಪಷ್ಟ ಎಂದು ಕುಮಾರಸ್ವಾಮಿ ಹೇಳಿದರು.

ಮೋದಿಯವರು ಮತ್ತೆ ಪ್ರಧಾನಿ ಆಗಲು ದೇವೇಗೌಡರು ನಮಗೆಲ್ಲ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದ ನಮಗೆ ಆನೆ ಬಲ. ಈಗಿನ ಈ ಮೈತ್ರಿಗೆ ರಾಜ್ಯದ ಮತದಾರರ ಸಂಪೂರ್ಣ ಆಶೀರ್ವಾದ ಇದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ

ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…

7 minutes ago

ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್

ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…

24 minutes ago

ಬಾಹ್ಯಾಕಾಶದಲ್ಲಿ ಹೆಸರುಕಾಳು, ಮೆಂತ್ಯ ಮೊಳಕೆಯೊಡೆಯುವ ಪ್ರಯೋಗ ಪ್ರಗತಿಯಲ್ಲಿ – ನಾಸಾ ಸ್ಪಷ್ಟನೆ

ಬಾಹ್ಯಕಾಶದಲ್ಲಿ   ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…

27 minutes ago

ನೀವೀಗ ಕಾಳುಮೆಣಸು ಕೃಷಿ ಆಸಕ್ತರೇ….?, ಹಾಗಿದ್ದರೆ ಗಮನಿಸಿ….| ಕಾಳುಮೆಣಸು ಕೃಷಿಯ ಕಾರ್ಯ ಚಟುವಟಿಕೆಗಳು

ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…

7 hours ago

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |

ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…

7 hours ago

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |

ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…

10 hours ago