Advertisement
MIRROR FOCUS

ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಸಮ್ಮಿಲನ ಸಭೆ | ಹಿಂದೆ ಆಗಿದ್ದೆಲ್ಲ ಮರೆತುಬಿಡಿ-ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ- ಎಚ್‌ ಡಿ ದೇವೇಗೌಡ

Share

ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ರಾಜಕೀಯ ಪಕ್ಷಗಳು ಬಿರುಸಿನ ಚಟುವಟಿಕೆ ನಡೆಸುತ್ತಿವೆ. ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಮತ್ತು ಜೆಡಿಎಸ್  ಪಕ್ಷದ 90ಕ್ಕೂ ಹೆಚ್ಚು ಘಟಾನುಘಟಿಗಳು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸೇರಿ ಪರಸ್ಪರ ಗೌರವಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಸುದೀರ್ಘ ಚರ್ಚೆ ನಡೆಸಿ ಲೋಕಸಭಾ ಚುನಾವಣೆಯ  ಗೆಲುವಿಗೆ ಅಗತ್ಯ ರಣತಂತ್ರ ರೂಪಿಸಿದ್ದಾರೆ. ಪರಸ್ಪರ ಹೊಗಳಿಕೊಂಡ ನಾಯಕರೆಲ್ಲರ ಬಾಯಲ್ಲಿ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕೆಂಬ ಘೋಷಣೆ ಹೊರಹೊಮ್ಮಿತು. ಇದರ ಜೊತೆ ಜೊತೆಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ‌
ಸಭೆಯಲ್ಲಿ ಮಾತನಾಡಿದ ದೇವೇ ಗೌಡ,  ಜೆಡಿಎಸ್ ಎಲ್ಲಿದೆ ಎಂದು ಸಿದ್ದರಾಮಯ್ಯ ಕೇಳುತ್ತಾರೆ. ಅವರಿಗೆ ಅಧಿಕಾರದ ಮದ ಏರಿದೆ. ಸಿದ್ದರಾಮಯ್ಯ ನವರ ಗರ್ವ ಭಂಗ ಆಗಬೇಕು, ಪರಸ್ಪರ ಸಹಕಾರ, ಒಗ್ಗಟ್ಟಿಗೆ ಯಡಿಯೂರಪ್ಪ ಪಾತ್ರ ಮುಖ್ಯವಾಗಿದೆ. ಹಿಂದೆ ಆಗಿದ್ದೆಲ್ಲ ಮರೆತುಬಿಡಿ, ಕಾಲ ಕ್ಷಣಿಕ. ಹಿಂದೆ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರೆಯೋಣ. ದೇಶದಲ್ಲಿ ಮೋದಿಯವರಂಥ  ನಾಯಕ ಮತ್ತೊಬ್ಬರು ಇಲ್ಲ ಎಂದು ಹೆಚ್‌ಡಿ ದೇವೇಗೌಡರು ಹೇಳಿದರು.

ಸಮನ್ವಯ ಸಭೆಗೆ ಕಾಲ ಇವತ್ತು ಕೂಡಿ ಬಂದಿದೆ. ನಮ್ಮ ಮೈತ್ರಿ ಬಗ್ಗೆ ಕಾಂಗ್ರೆಸ್ ಗೆ ನಡುಕ ಶುರುವಾಗಿದೆ. ನಮ್ಮ ಕಾರ್ಯಬದ್ಧತೆಯಲ್ಲಿ ಕಿಂಚಿತ್ತೂ ಅಡ್ಡಿ ಆಗಬಾರದು. ಸಣ್ಣಪುಟ್ಟ ಸಮಸ್ಯೆ ಇದ್ರೆ ಉಸ್ತುವಾರಿಗಳ ಗಮನಕ್ಕೆ ತನ್ನಿ ಇದು ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಮುಂದುವರೆಯಬೇಕು ಎಂಬ ಉದ್ದೇಶವಿದೆ. ರಾಜ್ಯದ ಅಭಿವೃದ್ಧಿಗೆ ಈ ಮೈತ್ರಿ ಮಾಡಲಾಗಿದೆ. ಮೂರನೇ ಬಾರಿ ಎನ್‌ಡಿಎ ಸರ್ಕಾರ ಬರುವುದು ಸೂರ್ಯ ಚಂದ್ರರಷ್ಟೇ ಸ್ಪಷ್ಟ ಎಂದು ಕುಮಾರಸ್ವಾಮಿ ಹೇಳಿದರು.

ಮೋದಿಯವರು ಮತ್ತೆ ಪ್ರಧಾನಿ ಆಗಲು ದೇವೇಗೌಡರು ನಮಗೆಲ್ಲ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದ ನಮಗೆ ಆನೆ ಬಲ. ಈಗಿನ ಈ ಮೈತ್ರಿಗೆ ರಾಜ್ಯದ ಮತದಾರರ ಸಂಪೂರ್ಣ ಆಶೀರ್ವಾದ ಇದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

1 hour ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago