Advertisement
MIRROR FOCUS

ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಸಮ್ಮಿಲನ ಸಭೆ | ಹಿಂದೆ ಆಗಿದ್ದೆಲ್ಲ ಮರೆತುಬಿಡಿ-ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ- ಎಚ್‌ ಡಿ ದೇವೇಗೌಡ

Share

ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ರಾಜಕೀಯ ಪಕ್ಷಗಳು ಬಿರುಸಿನ ಚಟುವಟಿಕೆ ನಡೆಸುತ್ತಿವೆ. ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಮತ್ತು ಜೆಡಿಎಸ್  ಪಕ್ಷದ 90ಕ್ಕೂ ಹೆಚ್ಚು ಘಟಾನುಘಟಿಗಳು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸೇರಿ ಪರಸ್ಪರ ಗೌರವಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಸುದೀರ್ಘ ಚರ್ಚೆ ನಡೆಸಿ ಲೋಕಸಭಾ ಚುನಾವಣೆಯ  ಗೆಲುವಿಗೆ ಅಗತ್ಯ ರಣತಂತ್ರ ರೂಪಿಸಿದ್ದಾರೆ. ಪರಸ್ಪರ ಹೊಗಳಿಕೊಂಡ ನಾಯಕರೆಲ್ಲರ ಬಾಯಲ್ಲಿ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕೆಂಬ ಘೋಷಣೆ ಹೊರಹೊಮ್ಮಿತು. ಇದರ ಜೊತೆ ಜೊತೆಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ‌
ಸಭೆಯಲ್ಲಿ ಮಾತನಾಡಿದ ದೇವೇ ಗೌಡ,  ಜೆಡಿಎಸ್ ಎಲ್ಲಿದೆ ಎಂದು ಸಿದ್ದರಾಮಯ್ಯ ಕೇಳುತ್ತಾರೆ. ಅವರಿಗೆ ಅಧಿಕಾರದ ಮದ ಏರಿದೆ. ಸಿದ್ದರಾಮಯ್ಯ ನವರ ಗರ್ವ ಭಂಗ ಆಗಬೇಕು, ಪರಸ್ಪರ ಸಹಕಾರ, ಒಗ್ಗಟ್ಟಿಗೆ ಯಡಿಯೂರಪ್ಪ ಪಾತ್ರ ಮುಖ್ಯವಾಗಿದೆ. ಹಿಂದೆ ಆಗಿದ್ದೆಲ್ಲ ಮರೆತುಬಿಡಿ, ಕಾಲ ಕ್ಷಣಿಕ. ಹಿಂದೆ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರೆಯೋಣ. ದೇಶದಲ್ಲಿ ಮೋದಿಯವರಂಥ  ನಾಯಕ ಮತ್ತೊಬ್ಬರು ಇಲ್ಲ ಎಂದು ಹೆಚ್‌ಡಿ ದೇವೇಗೌಡರು ಹೇಳಿದರು.

ಸಮನ್ವಯ ಸಭೆಗೆ ಕಾಲ ಇವತ್ತು ಕೂಡಿ ಬಂದಿದೆ. ನಮ್ಮ ಮೈತ್ರಿ ಬಗ್ಗೆ ಕಾಂಗ್ರೆಸ್ ಗೆ ನಡುಕ ಶುರುವಾಗಿದೆ. ನಮ್ಮ ಕಾರ್ಯಬದ್ಧತೆಯಲ್ಲಿ ಕಿಂಚಿತ್ತೂ ಅಡ್ಡಿ ಆಗಬಾರದು. ಸಣ್ಣಪುಟ್ಟ ಸಮಸ್ಯೆ ಇದ್ರೆ ಉಸ್ತುವಾರಿಗಳ ಗಮನಕ್ಕೆ ತನ್ನಿ ಇದು ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಮುಂದುವರೆಯಬೇಕು ಎಂಬ ಉದ್ದೇಶವಿದೆ. ರಾಜ್ಯದ ಅಭಿವೃದ್ಧಿಗೆ ಈ ಮೈತ್ರಿ ಮಾಡಲಾಗಿದೆ. ಮೂರನೇ ಬಾರಿ ಎನ್‌ಡಿಎ ಸರ್ಕಾರ ಬರುವುದು ಸೂರ್ಯ ಚಂದ್ರರಷ್ಟೇ ಸ್ಪಷ್ಟ ಎಂದು ಕುಮಾರಸ್ವಾಮಿ ಹೇಳಿದರು.

ಮೋದಿಯವರು ಮತ್ತೆ ಪ್ರಧಾನಿ ಆಗಲು ದೇವೇಗೌಡರು ನಮಗೆಲ್ಲ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದ ನಮಗೆ ಆನೆ ಬಲ. ಈಗಿನ ಈ ಮೈತ್ರಿಗೆ ರಾಜ್ಯದ ಮತದಾರರ ಸಂಪೂರ್ಣ ಆಶೀರ್ವಾದ ಇದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

13 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

22 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

22 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago