Advertisement
MIRROR FOCUS

ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಸಮ್ಮಿಲನ ಸಭೆ | ಹಿಂದೆ ಆಗಿದ್ದೆಲ್ಲ ಮರೆತುಬಿಡಿ-ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ- ಎಚ್‌ ಡಿ ದೇವೇಗೌಡ

Share

ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ರಾಜಕೀಯ ಪಕ್ಷಗಳು ಬಿರುಸಿನ ಚಟುವಟಿಕೆ ನಡೆಸುತ್ತಿವೆ. ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಮತ್ತು ಜೆಡಿಎಸ್  ಪಕ್ಷದ 90ಕ್ಕೂ ಹೆಚ್ಚು ಘಟಾನುಘಟಿಗಳು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸೇರಿ ಪರಸ್ಪರ ಗೌರವಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಸುದೀರ್ಘ ಚರ್ಚೆ ನಡೆಸಿ ಲೋಕಸಭಾ ಚುನಾವಣೆಯ  ಗೆಲುವಿಗೆ ಅಗತ್ಯ ರಣತಂತ್ರ ರೂಪಿಸಿದ್ದಾರೆ. ಪರಸ್ಪರ ಹೊಗಳಿಕೊಂಡ ನಾಯಕರೆಲ್ಲರ ಬಾಯಲ್ಲಿ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕೆಂಬ ಘೋಷಣೆ ಹೊರಹೊಮ್ಮಿತು. ಇದರ ಜೊತೆ ಜೊತೆಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ‌
ಸಭೆಯಲ್ಲಿ ಮಾತನಾಡಿದ ದೇವೇ ಗೌಡ,  ಜೆಡಿಎಸ್ ಎಲ್ಲಿದೆ ಎಂದು ಸಿದ್ದರಾಮಯ್ಯ ಕೇಳುತ್ತಾರೆ. ಅವರಿಗೆ ಅಧಿಕಾರದ ಮದ ಏರಿದೆ. ಸಿದ್ದರಾಮಯ್ಯ ನವರ ಗರ್ವ ಭಂಗ ಆಗಬೇಕು, ಪರಸ್ಪರ ಸಹಕಾರ, ಒಗ್ಗಟ್ಟಿಗೆ ಯಡಿಯೂರಪ್ಪ ಪಾತ್ರ ಮುಖ್ಯವಾಗಿದೆ. ಹಿಂದೆ ಆಗಿದ್ದೆಲ್ಲ ಮರೆತುಬಿಡಿ, ಕಾಲ ಕ್ಷಣಿಕ. ಹಿಂದೆ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರೆಯೋಣ. ದೇಶದಲ್ಲಿ ಮೋದಿಯವರಂಥ  ನಾಯಕ ಮತ್ತೊಬ್ಬರು ಇಲ್ಲ ಎಂದು ಹೆಚ್‌ಡಿ ದೇವೇಗೌಡರು ಹೇಳಿದರು.

ಸಮನ್ವಯ ಸಭೆಗೆ ಕಾಲ ಇವತ್ತು ಕೂಡಿ ಬಂದಿದೆ. ನಮ್ಮ ಮೈತ್ರಿ ಬಗ್ಗೆ ಕಾಂಗ್ರೆಸ್ ಗೆ ನಡುಕ ಶುರುವಾಗಿದೆ. ನಮ್ಮ ಕಾರ್ಯಬದ್ಧತೆಯಲ್ಲಿ ಕಿಂಚಿತ್ತೂ ಅಡ್ಡಿ ಆಗಬಾರದು. ಸಣ್ಣಪುಟ್ಟ ಸಮಸ್ಯೆ ಇದ್ರೆ ಉಸ್ತುವಾರಿಗಳ ಗಮನಕ್ಕೆ ತನ್ನಿ ಇದು ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಮುಂದುವರೆಯಬೇಕು ಎಂಬ ಉದ್ದೇಶವಿದೆ. ರಾಜ್ಯದ ಅಭಿವೃದ್ಧಿಗೆ ಈ ಮೈತ್ರಿ ಮಾಡಲಾಗಿದೆ. ಮೂರನೇ ಬಾರಿ ಎನ್‌ಡಿಎ ಸರ್ಕಾರ ಬರುವುದು ಸೂರ್ಯ ಚಂದ್ರರಷ್ಟೇ ಸ್ಪಷ್ಟ ಎಂದು ಕುಮಾರಸ್ವಾಮಿ ಹೇಳಿದರು.

Advertisement

ಮೋದಿಯವರು ಮತ್ತೆ ಪ್ರಧಾನಿ ಆಗಲು ದೇವೇಗೌಡರು ನಮಗೆಲ್ಲ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದ ನಮಗೆ ಆನೆ ಬಲ. ಈಗಿನ ಈ ಮೈತ್ರಿಗೆ ರಾಜ್ಯದ ಮತದಾರರ ಸಂಪೂರ್ಣ ಆಶೀರ್ವಾದ ಇದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

1 hour ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

2 hours ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

10 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

11 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

13 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

13 hours ago