ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ | ಸೇವಾ ಕಾರ್ಯಕ್ಕೆ ಬೆಂಬಲ | ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವಾರ್ಪಣೆ |

November 2, 2023
7:38 PM

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ ಮತ್ತು ಹೊಸ ಆಂಬುಲೆನ್ಸ್ ವಾಹನ ಒದಗಿಸುವಲ್ಲಿ ಉತ್ತಮ ಸೇವೆ ನೀಡಿದ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆಯನ್ನು ಗುತ್ತಿಗಾರು  ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವಿಸಲಾಯಿತು.

ನಿರಂತರ 38ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡು 3500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿ ಕರ್ತವ್ಯವನ್ನು ಸೇವಾ ಕಾರ್ಯವೆಂದು ಪರಿಗಣಿಸಿ ಮುಂದುವರೆಯುತ್ತಿರುವ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆ ಯನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್  ಗುತ್ತಿಗಾರು ಇದರ ವತಿಯಿಂದ ಗೌರವಿಸಲಾಯಿತು.

ಹಿಂದೆ ಟ್ರಸ್ಟ್ ಆಂಬುಲೆನ್ಸ್ ವಾಹನ ಅಪಘಾತಗೊಂಡು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು  ಮತ್ತೆ ಟ್ರಸ್ಟ್ ಗೆ ಹೊಸ ಆಂಬುಲೆನ್ಸ್ ವಾಹನ ಬರುವಲ್ಲಿ ನಿಸ್ವಾರ್ಥ ಸೇವೆ ನೀಡಿ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಈ ಮೂಲಕ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ಮಾಂಡವಿ ಮೋಟಾರ್ಸ್ ಸಂಸ್ಥೆಯ ಮಾರ್ಕೆಟಿಂಗ್ ಮೆನೇಜರ್ ಸುರೇಶ್ ಭಟ್, ಸೇವಾ ಮುಖ್ಯಸ್ಥ ಸುದೇಶ್ ಜೈನ್, ದುರ್ಗಾದಾಸ್ ಕಡ್ಲಾರು, ಪುನೀತ್ ಹಾಲೇಮಜಲ್,ವಿಮಾ ವಿಭಾಗ ಪ್ರಮುಖ ಸಂದೀಪ್, ಭರತ್, ಹರೀಶ್,ಹಾಗೂ ಸರ್ವ ಸಿಬ್ಬಂದಿಗಳು,ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ,ಕಾರ್ಯದರ್ಶಿ ಯತೀಂದ್ರ ಕಟ್ಟೆಕೋಡಿ, ಉಪಾಧ್ಯಕ್ಷ ಮೋಹನ್ ದಾಸ್ ಶಿರಾಜೆ, ಪದ್ಮನಭ ಹಲ್ಲಡ್ಕ ಉಪಸ್ಥಿತರಿದ್ದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror