ಸುದ್ದಿಗಳು

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ | ಸೇವಾ ಕಾರ್ಯಕ್ಕೆ ಬೆಂಬಲ | ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವಾರ್ಪಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ ಮತ್ತು ಹೊಸ ಆಂಬುಲೆನ್ಸ್ ವಾಹನ ಒದಗಿಸುವಲ್ಲಿ ಉತ್ತಮ ಸೇವೆ ನೀಡಿದ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆಯನ್ನು ಗುತ್ತಿಗಾರು  ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವಿಸಲಾಯಿತು.

Advertisement
Advertisement

ನಿರಂತರ 38ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡು 3500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿ ಕರ್ತವ್ಯವನ್ನು ಸೇವಾ ಕಾರ್ಯವೆಂದು ಪರಿಗಣಿಸಿ ಮುಂದುವರೆಯುತ್ತಿರುವ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆ ಯನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್  ಗುತ್ತಿಗಾರು ಇದರ ವತಿಯಿಂದ ಗೌರವಿಸಲಾಯಿತು.

ಹಿಂದೆ ಟ್ರಸ್ಟ್ ಆಂಬುಲೆನ್ಸ್ ವಾಹನ ಅಪಘಾತಗೊಂಡು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು  ಮತ್ತೆ ಟ್ರಸ್ಟ್ ಗೆ ಹೊಸ ಆಂಬುಲೆನ್ಸ್ ವಾಹನ ಬರುವಲ್ಲಿ ನಿಸ್ವಾರ್ಥ ಸೇವೆ ನೀಡಿ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಈ ಮೂಲಕ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ಮಾಂಡವಿ ಮೋಟಾರ್ಸ್ ಸಂಸ್ಥೆಯ ಮಾರ್ಕೆಟಿಂಗ್ ಮೆನೇಜರ್ ಸುರೇಶ್ ಭಟ್, ಸೇವಾ ಮುಖ್ಯಸ್ಥ ಸುದೇಶ್ ಜೈನ್, ದುರ್ಗಾದಾಸ್ ಕಡ್ಲಾರು, ಪುನೀತ್ ಹಾಲೇಮಜಲ್,ವಿಮಾ ವಿಭಾಗ ಪ್ರಮುಖ ಸಂದೀಪ್, ಭರತ್, ಹರೀಶ್,ಹಾಗೂ ಸರ್ವ ಸಿಬ್ಬಂದಿಗಳು,ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ,ಕಾರ್ಯದರ್ಶಿ ಯತೀಂದ್ರ ಕಟ್ಟೆಕೋಡಿ, ಉಪಾಧ್ಯಕ್ಷ ಮೋಹನ್ ದಾಸ್ ಶಿರಾಜೆ, ಪದ್ಮನಭ ಹಲ್ಲಡ್ಕ ಉಪಸ್ಥಿತರಿದ್ದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

34 minutes ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

53 minutes ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

1 hour ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

2 hours ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

2 hours ago

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago