ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ ಮತ್ತು ಹೊಸ ಆಂಬುಲೆನ್ಸ್ ವಾಹನ ಒದಗಿಸುವಲ್ಲಿ ಉತ್ತಮ ಸೇವೆ ನೀಡಿದ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆಯನ್ನು ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವಿಸಲಾಯಿತು.
ನಿರಂತರ 38ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡು 3500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿ ಕರ್ತವ್ಯವನ್ನು ಸೇವಾ ಕಾರ್ಯವೆಂದು ಪರಿಗಣಿಸಿ ಮುಂದುವರೆಯುತ್ತಿರುವ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆ ಯನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಇದರ ವತಿಯಿಂದ ಗೌರವಿಸಲಾಯಿತು.
ಹಿಂದೆ ಟ್ರಸ್ಟ್ ಆಂಬುಲೆನ್ಸ್ ವಾಹನ ಅಪಘಾತಗೊಂಡು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮತ್ತೆ ಟ್ರಸ್ಟ್ ಗೆ ಹೊಸ ಆಂಬುಲೆನ್ಸ್ ವಾಹನ ಬರುವಲ್ಲಿ ನಿಸ್ವಾರ್ಥ ಸೇವೆ ನೀಡಿ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಈ ಮೂಲಕ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಮಾಂಡವಿ ಮೋಟಾರ್ಸ್ ಸಂಸ್ಥೆಯ ಮಾರ್ಕೆಟಿಂಗ್ ಮೆನೇಜರ್ ಸುರೇಶ್ ಭಟ್, ಸೇವಾ ಮುಖ್ಯಸ್ಥ ಸುದೇಶ್ ಜೈನ್, ದುರ್ಗಾದಾಸ್ ಕಡ್ಲಾರು, ಪುನೀತ್ ಹಾಲೇಮಜಲ್,ವಿಮಾ ವಿಭಾಗ ಪ್ರಮುಖ ಸಂದೀಪ್, ಭರತ್, ಹರೀಶ್,ಹಾಗೂ ಸರ್ವ ಸಿಬ್ಬಂದಿಗಳು,ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ,ಕಾರ್ಯದರ್ಶಿ ಯತೀಂದ್ರ ಕಟ್ಟೆಕೋಡಿ, ಉಪಾಧ್ಯಕ್ಷ ಮೋಹನ್ ದಾಸ್ ಶಿರಾಜೆ, ಪದ್ಮನಭ ಹಲ್ಲಡ್ಕ ಉಪಸ್ಥಿತರಿದ್ದರು
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…