ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಚಾಲನೆ ನೀಡಿದರು. ಮೊದಲ ಗುಂಪಿನ 5 ಸಾವಿರದ 880 ಯಾತ್ರಿಗಳು ಪ್ರಯಾಣ ಬೆಳೆಸಲಿದ್ದಾರೆ. ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಯಾತ್ರೆ ಪ್ರಾರಂಭವಾಗಲಿದೆ. ಆಗಸ್ಟ್ 7ರವರೆಗೆ, 38 ದಿನಗಳ ಕಾಲ ಅಮರನಾಥ ಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಕಥುವಾದ ಲಖನ್ಪುರದಿಂದ , ಪವಿತ್ರ ಗುಹೆಯವರೆಗೆ ಸುಮಾರು 1 ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ಯಾತ್ರಿಕರಿಗೆ ವಸತಿ ಮತ್ತು ಆಹಾರದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮತ್ತು ಸಾಕಷ್ಟು ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲಾಗಿದೆ. ಬೇಸ್ ಕ್ಯಾಂಪ್ನಲ್ಲಿ ಯಾತ್ರಿಕರಿಗೆ ಎಲ್ಲಾ ರೀತಿಯ ಮೂಲ ಸೌಕರ್ಯ ಒದಗಿಸಲಾಗಿದೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…