ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಚಾಲನೆ ನೀಡಿದರು. ಮೊದಲ ಗುಂಪಿನ 5 ಸಾವಿರದ 880 ಯಾತ್ರಿಗಳು ಪ್ರಯಾಣ ಬೆಳೆಸಲಿದ್ದಾರೆ. ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಯಾತ್ರೆ ಪ್ರಾರಂಭವಾಗಲಿದೆ. ಆಗಸ್ಟ್ 7ರವರೆಗೆ, 38 ದಿನಗಳ ಕಾಲ ಅಮರನಾಥ ಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಕಥುವಾದ ಲಖನ್ಪುರದಿಂದ , ಪವಿತ್ರ ಗುಹೆಯವರೆಗೆ ಸುಮಾರು 1 ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ಯಾತ್ರಿಕರಿಗೆ ವಸತಿ ಮತ್ತು ಆಹಾರದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮತ್ತು ಸಾಕಷ್ಟು ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲಾಗಿದೆ. ಬೇಸ್ ಕ್ಯಾಂಪ್ನಲ್ಲಿ ಯಾತ್ರಿಕರಿಗೆ ಎಲ್ಲಾ ರೀತಿಯ ಮೂಲ ಸೌಕರ್ಯ ಒದಗಿಸಲಾಗಿದೆ.
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…