ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಚಾಲನೆ ನೀಡಿದರು. ಮೊದಲ ಗುಂಪಿನ 5 ಸಾವಿರದ 880 ಯಾತ್ರಿಗಳು ಪ್ರಯಾಣ ಬೆಳೆಸಲಿದ್ದಾರೆ. ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಯಾತ್ರೆ ಪ್ರಾರಂಭವಾಗಲಿದೆ. ಆಗಸ್ಟ್ 7ರವರೆಗೆ, 38 ದಿನಗಳ ಕಾಲ ಅಮರನಾಥ ಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಕಥುವಾದ ಲಖನ್ಪುರದಿಂದ , ಪವಿತ್ರ ಗುಹೆಯವರೆಗೆ ಸುಮಾರು 1 ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ಯಾತ್ರಿಕರಿಗೆ ವಸತಿ ಮತ್ತು ಆಹಾರದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮತ್ತು ಸಾಕಷ್ಟು ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲಾಗಿದೆ. ಬೇಸ್ ಕ್ಯಾಂಪ್ನಲ್ಲಿ ಯಾತ್ರಿಕರಿಗೆ ಎಲ್ಲಾ ರೀತಿಯ ಮೂಲ ಸೌಕರ್ಯ ಒದಗಿಸಲಾಗಿದೆ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…