ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಗರದ ಕಂಠೀರವ ಸ್ಟುಡೀಯೋದಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ರೆಬಲ್ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ನಿರ್ಧರಿಸಿದೆ.
ಗುರುವಾರದಂದು ನಡೆದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಮಾಹಿತಿ ನೀಡಿದರು.
ಬೆಂಗಳೂರು ಅಭಿವೃದ್ಧಿ ಕುರಿತು ಸಂಪುಟದಲ್ಲಿ ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ. ಬೆಂಗಳೂರು ಪೂರ್ವ ತಾಲೂಕಿನ 22 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು 93.50 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆದಲ್ಲದೇ ಎಲೆಕ್ಟ್ರಿಕ್ ಬಸ್ಗಳಿಗಾಗಿ ರಾಜ್ಯ ಸರ್ಕಾರ 100 ಕೋಟಿ ರೂ.ಗಳನ್ನು ನಿಗದಿ ಮಾಡಿದ್ದು, ಕೇಂದ್ರ ಸರ್ಕಾರ ಪ್ರತಿ ಬಸ್ಗೆ ಗರಿಷ್ಠ ಬೇಡಿಕೆ , ಪ್ರೋತ್ಸಾಹ ಧನ ನೀಡುತ್ತಿದ್ದು, ಗ್ರಾಸ್ ಕಾಸ್ಟ್ ಕಂಟ್ರಾಕ್ಟ್ ಬಿಡ್ಡಿಂಗ್ ಮೂಲಕ ಬಸ್ಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…