ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಗರದ ಕಂಠೀರವ ಸ್ಟುಡೀಯೋದಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ರೆಬಲ್ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ನಿರ್ಧರಿಸಿದೆ.
ಗುರುವಾರದಂದು ನಡೆದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಮಾಹಿತಿ ನೀಡಿದರು.
ಬೆಂಗಳೂರು ಅಭಿವೃದ್ಧಿ ಕುರಿತು ಸಂಪುಟದಲ್ಲಿ ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ. ಬೆಂಗಳೂರು ಪೂರ್ವ ತಾಲೂಕಿನ 22 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು 93.50 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆದಲ್ಲದೇ ಎಲೆಕ್ಟ್ರಿಕ್ ಬಸ್ಗಳಿಗಾಗಿ ರಾಜ್ಯ ಸರ್ಕಾರ 100 ಕೋಟಿ ರೂ.ಗಳನ್ನು ನಿಗದಿ ಮಾಡಿದ್ದು, ಕೇಂದ್ರ ಸರ್ಕಾರ ಪ್ರತಿ ಬಸ್ಗೆ ಗರಿಷ್ಠ ಬೇಡಿಕೆ , ಪ್ರೋತ್ಸಾಹ ಧನ ನೀಡುತ್ತಿದ್ದು, ಗ್ರಾಸ್ ಕಾಸ್ಟ್ ಕಂಟ್ರಾಕ್ಟ್ ಬಿಡ್ಡಿಂಗ್ ಮೂಲಕ ಬಸ್ಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…