ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ನಡುವೆ ಯೋಗ ಶಿಕ್ಷಣದ ಬಗ್ಗೆ ಒಪ್ಪಂದ

February 22, 2024
9:08 PM
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಡುವಣ ಯೋಗ ಶಿಕ್ಷಣದ ಕುರಿತಾದ ಒಪ್ಪಂದ ಮಾಡಿಕೊಳ್ಳಲಾಯಿತು.

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಡುವಣ ಯೋಗ ಶಿಕ್ಷಣದ ಕುರಿತಾದ ಒಪ್ಪಂದ ಮಾಡಿಕೊಳ್ಳಲಾಯಿತು. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ರವಿಶಂಕರ ಗುರೂಜಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.

ಕಳೆದ ಹದಿನಾಲ್ಕು ವರ್ಷಗಳಿಂದ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮೂಲಕ ಯೋಗಶಿಕ್ಷಣವನ್ನು ಒದಗಿಸಿಕೊಡಲಾಗುತ್ತಿದೆ. ಪ್ರತಿ ವರ್ಷವೂ ಶೈಕ್ಷಣಿಕ ಚಟುವಟಿಕೆಗಳ ಆರಂಭದ ದಿನಗಳಲ್ಲಿ ಮೂಲಭೂತ ಯೋಗ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಒದಗಿಸಿಕೊಡುವ ಕಾರ್ಯವನ್ನು ಅಂಬಿಕಾ ಸಂಸ್ಥೆಗಳು ಮಾಡಿಕೊಂಡು ಬರುತ್ತಿವೆ. ಇದಲ್ಲದೆ ಪ್ರತಿನಿತ್ಯ ತರಗತಿ ಆರಂಭಕ್ಕೂ ಮುನ್ನ ನಿಗದಿತ ಸಮಯದ ಯೋಗಾಭ್ಯಾಸವನ್ನು ನಡೆಸಲಾಗುತ್ತಿದೆ. ಪಠ್ಯಕ್ರಮದಲ್ಲಿ ಯೋಗವನ್ನು ಅಳವಡಿಸಿಕೊಂಡ ರಾಜ್ಯದ ಮೊದಲ ಸಂಸ್ಥೆಯಾಗಿ ಪುತ್ತೂರಿನ ಅಂಬಿಕಾ ಶಿಕ್ಷಣ ಸಂಸ್ಥೆಗಳು ದಾಖಲೆ ಬರೆದಿವೆ. ಇದೀಗ ಆರ್ಟ್ ಆಫ್ ಲಿವಿಂಗ್ ಹಾಗೂ ಅಂಬಿಕಾ ಸಂಸ್ಥೆಗಳ ನಡುವೆ ಅಧಿಕೃತ ಒಪ್ಪಂದ ನಡೆದಿದ್ದು, ಮುಂದಿನ ದಿನಗಳಲ್ಲಿ ಅಂಬಿಕಾ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಯೋಗಾಭ್ಯಾಸ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ
ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು
August 30, 2026
5:57 AM
by: ದ ರೂರಲ್ ಮಿರರ್.ಕಾಂ
ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!
August 30, 2026
5:41 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌
August 29, 2026
6:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror