ಅಂಬಿಕಾ ವಿದ್ಯಾಲಯದಲ್ಲಿ ಪ್ರೇರಣಾ – 2022 | ಬೇಸಿಗೆ ಶಿಬಿರಕ್ಕೆ ಚಾಲನೆ | ದೇಸೀ ಜ್ಞಾನ, ಸಂಸ್ಕೃತಿ ಮಕ್ಕಳಲ್ಲಿ ಒಡಮೂಡಬೇಕು : ಡಾ.ಶ್ರೀಧರ ಎಚ್.ಜಿ |

March 29, 2022
9:55 AM

ಅಮೇರಿಕಾದಲ್ಲಿ ಅತಿಯಾದ ರಾಸಾಯನಿಕ ಗೊಬ್ಬರದಿಂದಾಗಿ ಮಣ್ಣು ಫಲವತ್ತತೆ ಕಳೆದುಕೊಂಡಿದೆ. ಹಾಗಾಗಿ ಭಾರತದ ಮಣ್ಣಿನ ಸತ್ವ ಹಾಗೂ ಇಲ್ಲಿ ತಯಾರಿಸುವ ದೇಸೀ ಸಾವಯವ ಗೊಬ್ಬರದ ಬಗೆಗೆ ಅಮೇರಿಕಾದ ತಂಡದಿಂದ ಅಧ್ಯಯನ ನಡೆಯುತ್ತಿದೆ. ಇಂತಹ ಶ್ರೇಷ್ಟ ಮಣ್ಣಿನ ಬಗೆಗಿನ ಅರಿವು ಮಕ್ಕಳಲ್ಲಿ ಒಡಮೂಡಬೇಕಾದದ್ದು ಅತ್ಯಂತ ಅಗತ್ಯ. ಆದ್ದರಿಂದ ರಜೆಯಲ್ಲಿ ಆಯೋಜಿಸುವ ಶಿಬಿರಗಳು ಇಂತಹ ಜ್ಞಾನವನ್ನು ನೀಡುವ ತಾಣಗಳಾಗಬೇಕು ಎಂದು ಪುತ್ತೂರಿನ ಹಿರಿಯ ಕನ್ನಡ ಪ್ರಾಧ್ಯಾಪಕ, ಸಾಹಿತಿ ಡಾ.ಶ್ರೀಧರ ಎಚ್.ಜಿ.ಹೇಳಿದರು.

ಅವರು ಪುತ್ತೂರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ಸೋಮವಾರದಿಂದ ಪ್ರಾರಂಭಗೊಂಡ ಮೂರು ದಿನಗಳ ಬೇಸಿಗೆ ಶಿಬಿರ – ‘ಪ್ರೇರಣಾ 2022’ ಅನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಕಾಲದಲ್ಲಿ ಅಜ್ಜನ ಮನೆಯೇ ಬೇಸಗೆ ಶಿಬಿರವಾಗಿತ್ತು. ರಜೆ ಸಿಕ್ಕಾಕ್ಷಣ ಅಲ್ಲಿಗೆ ತೆರಳಿ ತೋಟ ಗದ್ದೆಗಳಲ್ಲಿ ಓಡಾಡುವುದು, ಹಣ್ಣುಗಳನ್ನು ಕೊಯ್ದು ತಿನ್ನುವುದು, ಗಿಡಗಳಿಗೆ ನೀರುಣಿಸುವುದೇ ಮೊದಲಾದ ಚಟುವಟಿಕೆಗಳಿಂದ ನಿಸರ್ಗದ ಬಗೆಗೆ ಪರಿಕಲ್ಪನೆ ಬೆಳೆಯುತ್ತಿತ್ತು. ಅನೇಕಾನೇಕ ಪಾರಂಪರಿಕ ಜ್ಞಾನಗಳು ಅಂತಹ ಸಂದರ್ಭದಲ್ಲಿ ಒಡಮೂಡುತ್ತಿದ್ದವು. ಆದ್ದರಿಂದ ಇಂದಿನ ಮಕ್ಕಳೂ ಅಜ್ಜನಮನೆಗೆ ಹೋಗುವುದನ್ನು, ಅಲ್ಲಿ ಕಾಲ ಕಳೆಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರಲ್ಲದೆ ಪ್ರಕೃತಿಯನ್ನು ಉಳಿಸುವುದಕ್ಕೆ ಸಂಸ್ಕೃತಿ ಅಗತ್ಯ. ಆಧುನಿಕ ಯುವದಲ್ಲಿ ಪ್ರಕೃತಿಗೆ ಮಾರಕರಾಗಿ ವ್ಯವಹರಿಸುತ್ತಿದ್ದೇವೆ. ಆದ್ದರಿಂದ ನಾವೆಲ್ಲರೂ ನೆಲ ಜಲದ ಅರಿವನ್ನು ಹೊಂದಿ ಮುಂದುವರಿಯಬೇಕು ಎಂದು ತಿಳಿಸಿದರು.

ಪ್ರಸ್ತಾವನೆಗೈದ ಅಂಬಿಕಾ ವಿದ್ಯಾಲಯದ ಪ್ರಾಚಾರ್ಯೆ ಮಾಲತಿ ಡಿ, ಕಲಿಕೆ ಅನ್ನುವುದು ತುಂಬಾ ವಿಶಾಲ ಅರ್ಥವನ್ನು ಹೊಂದಿದೆ. ಎಷ್ಟು ಹೊತ್ತು ಮಲಗಬೇಕು, ಯಾವಾಗ ಏಳಬೇಕು ಎಂಬುದೂ ಕಲಿಕೆಯ ಒಂದು ಭಾಗವೇ ಆಗಿದೆ. ಮಕ್ಕಳಿಗೆ ದೇಶದ ಹಿರಿಮೆ ಗರಿಮೆಗಳನ್ನು ತಿಳಿಸುವ, ಸಂಸ್ಕೃತಿಯನ್ನು ಪರಿಚಯಿಸುವ ನೆಲೆಯಲ್ಲಿ ‘ಪ್ರೇರಣಾ 2022’ ಆಯೋಜನೆಗೊಂಡಿದೆ. ಅನೇಕ ಮಂದಿ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಲ್ಲಿ ವಿನೂತನ ಪರಿಕಲ್ಪನೆಯನ್ನು ಮೂಡಿಸಲಿದ್ದಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ಮಕ್ಕಳು ಎಳವೆಯಿಂದಲೇ ಹೊಸ ಹೊಸ ವಿಚಾರಗಳನ್ನು ಅರಿತುಕೊಂಡು ಬೆಳೆಯಬೇಕು. ಸಂಪನ್ಮೂಲ ವ್ಯಕ್ತಿಗಳು ಹೇಳಿದ್ದನ್ನು ಕೇವಲ ಕೇಳಿಸಿಕೊಳ್ಳುವುದಷ್ಟೇ ಅಲ್ಲದೆ ಬರೆದಿಟ್ಟು ಬದುಕಿನಲ್ಲಿ ಅಳವಡಿಸುವ ನೆಲೆಯಲ್ಲಿ ಕಾರ್ಯತತ್ಪರರಾಗಬೇಕು. ತನ್ಮೂಲಕ ಶಿಬಿರದ ಸದ್ಬಳಕೆ ಆಗಬೇಕು ಎಂದು ನುಡಿದರು. ವೇದಿಕೆಯಲ್ಲಿ ಶಿಬಿರದ ಸಂಯೋಜಕ ಸತೀಶ್ ಇರ್ದೆ ಉಪಸ್ಥಿತರಿದ್ದರು.

ಎಂಟನೆಯ ತರಗತಿ ವಿದ್ಯಾರ್ಥಿ ಆತ್ರೇಯ ಪ್ರಾರ್ಥಿಸಿ, ಏಳನೆಯ ತರಗತಿ ವಿದ್ಯಾರ್ಥಿ ಆಕಾಶ್ ಸ್ವಾಗತಿಸಿದರು. ಆರನೆಯ ತರಗತಿ ವಿವಿಕ್ತ ವಂದಿಸಿ, ಪ್ರಿಯಾಂಶು ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror