ಅಂಬಿಕಾದಲ್ಲಿ ಅಗ್ನಿಪಥ್ ಹಾಗೂ ಎನ್.ಡಿ.ಎ. ಮಾಹಿತಿ ಕಾರ್ಯಕ್ರಮ

September 23, 2022
10:06 PM

ಜಗತ್ತಿನಲ್ಲಿ ತಾಯಿ ಮತ್ತು ತಾಯ್ನಾಡಿಗೆ ಸೇವೆ ಸಲ್ಲಿಸುವ ಮಹಾನ್ ವ್ಯಕ್ತಿ ಯೋಧ. ‘ಆತ್ಮ ಹೋದ ಮೇಲೆ ಹುತಾತ್ಮನೆನಿಸಿಕೊಳ್ಳುವವನು ಒಬ್ಬ ಯೋಧ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವನು ಮಾತ್ರ’ ಎಂದು  ಹವ್ಯಾಸ್ ಯುವ. ಹೇಳಿದರು.

ಅವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳಲ್ಲಿ ಒಂದಾದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ಅಗ್ನಿಪಥ್ ಹಾಗೂ ಎನ್.ಡಿ.ಎ. ವಿಚಾರವಾಗಿ ವಿದ್ಯಾರ್ಥಿಗಳಿಗೆ ನೀಡಲಾದ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಅಗ್ನಿಪಥ್ ಪಡೆಗೆ ಪ್ರವೇಶ , ಪರೀಕ್ಷಾ ಸಿದ್ಧತೆ, ನಿಯಮಗಳು, ವೇತನ ಹಾಗೂ ಇತರ ಸೌಲಭ್ಯಗಳು, ಮಹತ್ವ, ತರಬೇತು ಎಲ್ಲ ವಿಚಾರವಾಗಿ ಸಂಪೂರ್ಣ ಮಾಹಿತಿ ಇತ್ತರು. ಒಬ್ಬ ವ್ಯಕ್ತಿ ಹೇಗೆ ಯೋಧನಾಗಬಹುದು? ಅರ್ಹತೆಗಳೇನು ಎಂಬೆಲ್ಲ ವಿಚಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು ಹಾಗೂ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಕಾಲೇಜಿನ ಉಪನ್ಯಾಸಕ ವೃಂದ, ಇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಸುಬಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. ಪ್ರಯೋಗಾಲಯ ಸಹಾಯಕ ಮುರಳಿ ಮೋಹನ ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror