ಜಗತ್ತಿನಲ್ಲಿ ತಾಯಿ ಮತ್ತು ತಾಯ್ನಾಡಿಗೆ ಸೇವೆ ಸಲ್ಲಿಸುವ ಮಹಾನ್ ವ್ಯಕ್ತಿ ಯೋಧ. ‘ಆತ್ಮ ಹೋದ ಮೇಲೆ ಹುತಾತ್ಮನೆನಿಸಿಕೊಳ್ಳುವವನು ಒಬ್ಬ ಯೋಧ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವನು ಮಾತ್ರ’ ಎಂದು ಹವ್ಯಾಸ್ ಯುವ. ಹೇಳಿದರು.
ಅವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳಲ್ಲಿ ಒಂದಾದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ಅಗ್ನಿಪಥ್ ಹಾಗೂ ಎನ್.ಡಿ.ಎ. ವಿಚಾರವಾಗಿ ವಿದ್ಯಾರ್ಥಿಗಳಿಗೆ ನೀಡಲಾದ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಅಗ್ನಿಪಥ್ ಪಡೆಗೆ ಪ್ರವೇಶ , ಪರೀಕ್ಷಾ ಸಿದ್ಧತೆ, ನಿಯಮಗಳು, ವೇತನ ಹಾಗೂ ಇತರ ಸೌಲಭ್ಯಗಳು, ಮಹತ್ವ, ತರಬೇತು ಎಲ್ಲ ವಿಚಾರವಾಗಿ ಸಂಪೂರ್ಣ ಮಾಹಿತಿ ಇತ್ತರು. ಒಬ್ಬ ವ್ಯಕ್ತಿ ಹೇಗೆ ಯೋಧನಾಗಬಹುದು? ಅರ್ಹತೆಗಳೇನು ಎಂಬೆಲ್ಲ ವಿಚಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು ಹಾಗೂ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಕಾಲೇಜಿನ ಉಪನ್ಯಾಸಕ ವೃಂದ, ಇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಸುಬಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. ಪ್ರಯೋಗಾಲಯ ಸಹಾಯಕ ಮುರಳಿ ಮೋಹನ ಸಹಕರಿಸಿದರು.
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…