ಜಗತ್ತಿನಲ್ಲಿ ತಾಯಿ ಮತ್ತು ತಾಯ್ನಾಡಿಗೆ ಸೇವೆ ಸಲ್ಲಿಸುವ ಮಹಾನ್ ವ್ಯಕ್ತಿ ಯೋಧ. ‘ಆತ್ಮ ಹೋದ ಮೇಲೆ ಹುತಾತ್ಮನೆನಿಸಿಕೊಳ್ಳುವವನು ಒಬ್ಬ ಯೋಧ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವನು ಮಾತ್ರ’ ಎಂದು ಹವ್ಯಾಸ್ ಯುವ. ಹೇಳಿದರು.
ಅವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳಲ್ಲಿ ಒಂದಾದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ಅಗ್ನಿಪಥ್ ಹಾಗೂ ಎನ್.ಡಿ.ಎ. ವಿಚಾರವಾಗಿ ವಿದ್ಯಾರ್ಥಿಗಳಿಗೆ ನೀಡಲಾದ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಅಗ್ನಿಪಥ್ ಪಡೆಗೆ ಪ್ರವೇಶ , ಪರೀಕ್ಷಾ ಸಿದ್ಧತೆ, ನಿಯಮಗಳು, ವೇತನ ಹಾಗೂ ಇತರ ಸೌಲಭ್ಯಗಳು, ಮಹತ್ವ, ತರಬೇತು ಎಲ್ಲ ವಿಚಾರವಾಗಿ ಸಂಪೂರ್ಣ ಮಾಹಿತಿ ಇತ್ತರು. ಒಬ್ಬ ವ್ಯಕ್ತಿ ಹೇಗೆ ಯೋಧನಾಗಬಹುದು? ಅರ್ಹತೆಗಳೇನು ಎಂಬೆಲ್ಲ ವಿಚಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು ಹಾಗೂ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಕಾಲೇಜಿನ ಉಪನ್ಯಾಸಕ ವೃಂದ, ಇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಸುಬಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. ಪ್ರಯೋಗಾಲಯ ಸಹಾಯಕ ಮುರಳಿ ಮೋಹನ ಸಹಕರಿಸಿದರು.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…