ಜಗತ್ತಿನಲ್ಲಿ ತಾಯಿ ಮತ್ತು ತಾಯ್ನಾಡಿಗೆ ಸೇವೆ ಸಲ್ಲಿಸುವ ಮಹಾನ್ ವ್ಯಕ್ತಿ ಯೋಧ. ‘ಆತ್ಮ ಹೋದ ಮೇಲೆ ಹುತಾತ್ಮನೆನಿಸಿಕೊಳ್ಳುವವನು ಒಬ್ಬ ಯೋಧ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವನು ಮಾತ್ರ’ ಎಂದು ಹವ್ಯಾಸ್ ಯುವ. ಹೇಳಿದರು.
ಅವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳಲ್ಲಿ ಒಂದಾದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ಅಗ್ನಿಪಥ್ ಹಾಗೂ ಎನ್.ಡಿ.ಎ. ವಿಚಾರವಾಗಿ ವಿದ್ಯಾರ್ಥಿಗಳಿಗೆ ನೀಡಲಾದ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಅಗ್ನಿಪಥ್ ಪಡೆಗೆ ಪ್ರವೇಶ , ಪರೀಕ್ಷಾ ಸಿದ್ಧತೆ, ನಿಯಮಗಳು, ವೇತನ ಹಾಗೂ ಇತರ ಸೌಲಭ್ಯಗಳು, ಮಹತ್ವ, ತರಬೇತು ಎಲ್ಲ ವಿಚಾರವಾಗಿ ಸಂಪೂರ್ಣ ಮಾಹಿತಿ ಇತ್ತರು. ಒಬ್ಬ ವ್ಯಕ್ತಿ ಹೇಗೆ ಯೋಧನಾಗಬಹುದು? ಅರ್ಹತೆಗಳೇನು ಎಂಬೆಲ್ಲ ವಿಚಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು ಹಾಗೂ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಕಾಲೇಜಿನ ಉಪನ್ಯಾಸಕ ವೃಂದ, ಇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಸುಬಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. ಪ್ರಯೋಗಾಲಯ ಸಹಾಯಕ ಮುರಳಿ ಮೋಹನ ಸಹಕರಿಸಿದರು.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…