ಜಗತ್ತಿನಲ್ಲಿ ತಾಯಿ ಮತ್ತು ತಾಯ್ನಾಡಿಗೆ ಸೇವೆ ಸಲ್ಲಿಸುವ ಮಹಾನ್ ವ್ಯಕ್ತಿ ಯೋಧ. ‘ಆತ್ಮ ಹೋದ ಮೇಲೆ ಹುತಾತ್ಮನೆನಿಸಿಕೊಳ್ಳುವವನು ಒಬ್ಬ ಯೋಧ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವನು ಮಾತ್ರ’ ಎಂದು ಹವ್ಯಾಸ್ ಯುವ. ಹೇಳಿದರು.
ಅವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳಲ್ಲಿ ಒಂದಾದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ಅಗ್ನಿಪಥ್ ಹಾಗೂ ಎನ್.ಡಿ.ಎ. ವಿಚಾರವಾಗಿ ವಿದ್ಯಾರ್ಥಿಗಳಿಗೆ ನೀಡಲಾದ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಅಗ್ನಿಪಥ್ ಪಡೆಗೆ ಪ್ರವೇಶ , ಪರೀಕ್ಷಾ ಸಿದ್ಧತೆ, ನಿಯಮಗಳು, ವೇತನ ಹಾಗೂ ಇತರ ಸೌಲಭ್ಯಗಳು, ಮಹತ್ವ, ತರಬೇತು ಎಲ್ಲ ವಿಚಾರವಾಗಿ ಸಂಪೂರ್ಣ ಮಾಹಿತಿ ಇತ್ತರು. ಒಬ್ಬ ವ್ಯಕ್ತಿ ಹೇಗೆ ಯೋಧನಾಗಬಹುದು? ಅರ್ಹತೆಗಳೇನು ಎಂಬೆಲ್ಲ ವಿಚಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು ಹಾಗೂ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಕಾಲೇಜಿನ ಉಪನ್ಯಾಸಕ ವೃಂದ, ಇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಸುಬಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. ಪ್ರಯೋಗಾಲಯ ಸಹಾಯಕ ಮುರಳಿ ಮೋಹನ ಸಹಕರಿಸಿದರು.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…