ಪುತ್ತೂರು | ಅಂಬಿಕಾದಲ್ಲಿ ಗಣಪತಿ ಹವನ- ಶಾರದಾ ಪೂಜೆ |

October 3, 2022
7:51 PM

ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನವರಾತ್ರಿ ಪೂಜಾ ಸಮಯದಲ್ಲಿ ನಡೆಯುವ ಶ್ರೀ ಮಹಾಗಣಪತಿ ಹವನ, ಶಾರದಾ ಪೂಜೆ, ಪುಸ್ತಕ ಪೂಜೆ ನಡೆಯಿತು.

ಈ ಸಂದರ್ಭ ಮಾತನಾಡಿದ ವೇದಮೂರ್ತಿ ಜಗದೀಶ ಭಟ್, ಧರ್ಮವನ್ನು ಯಾರು ರಕ್ಷಿಸುತ್ತಾರೋ ಅವರನ್ನು ಧರ್ಮ ಎಂದೂ ಕೈ ಬಿಡುವುದಿಲ್ಲ. ದೇವರ ಕೃಪೆಗೆ ಖಂಡಿತಾ ಅಂತಹವರು ಪಾತ್ರರಾಗುತ್ತಾರೆ. ವಿದ್ಯಾವಂತರಿಗೆ ವಿನಯವು ಭೂಷಣವಾಗಿರುತ್ತದೆ. ಮುಖ್ಯವಾಗಿ ಬುದ್ಧಿಯ ಜೊತೆಗೆ ಸದ್ಗುಣಗಳನ್ನು ಪ್ರಾಪ್ತಿ ಮಾಡಿಕೊಳ್ಳಬೇಕು. ಅಂಬಿಕಾ ಸಂಸ್ಥೆ ಸ್ಥಾಪನೆಯಾದಂದಿನಿಂದ ಭಗವಂತನಿಗೆ ಸಲ್ಲಬೇಕಾದ ಎಲ್ಲಾ ಪೂಜೆ, ಹವನಗಳು ನೆರವೇರುತ್ತಾ ಬರುತ್ತಿದೆ. ಈ ವಿದ್ಯಾಲಯ ಪುಣ್ಯಸ್ಥಳ, ಈ ಕರ್ಮವೃಕ್ಷದಲ್ಲಿ ಸತ್ಫಲಗಳು ಲಭಿಸುತ್ತಿರುತ್ತದೆ ಎಂದರು.

ನಟ್ಟೋಜ ಫೌಂಡೇಶನ್ ಟ್ರಸ್ಟ್‍ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಅವರ ಧರ್ಮಪತ್ನಿ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಪೂಜಾಕಾರ್ಯದಲ್ಲಿ ಭಾಗಿಗಳಾದರು. ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ, ಆಡಳಿತ ಮಂಡಳಿ ಸದಸ್ಯ ಸುರೇಶ್ ಶೆಟ್ಟಿ, ಉಪನ್ಯಾಸಕ ವೃಂದ, ಉಪನ್ಯಾಸಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror