Advertisement
ಸುದ್ದಿಗಳು

ಪುತ್ತೂರು | ಅಂಬಿಕಾದಲ್ಲಿ ಗಣಪತಿ ಹವನ- ಶಾರದಾ ಪೂಜೆ |

Share

ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನವರಾತ್ರಿ ಪೂಜಾ ಸಮಯದಲ್ಲಿ ನಡೆಯುವ ಶ್ರೀ ಮಹಾಗಣಪತಿ ಹವನ, ಶಾರದಾ ಪೂಜೆ, ಪುಸ್ತಕ ಪೂಜೆ ನಡೆಯಿತು.

ಈ ಸಂದರ್ಭ ಮಾತನಾಡಿದ ವೇದಮೂರ್ತಿ ಜಗದೀಶ ಭಟ್, ಧರ್ಮವನ್ನು ಯಾರು ರಕ್ಷಿಸುತ್ತಾರೋ ಅವರನ್ನು ಧರ್ಮ ಎಂದೂ ಕೈ ಬಿಡುವುದಿಲ್ಲ. ದೇವರ ಕೃಪೆಗೆ ಖಂಡಿತಾ ಅಂತಹವರು ಪಾತ್ರರಾಗುತ್ತಾರೆ. ವಿದ್ಯಾವಂತರಿಗೆ ವಿನಯವು ಭೂಷಣವಾಗಿರುತ್ತದೆ. ಮುಖ್ಯವಾಗಿ ಬುದ್ಧಿಯ ಜೊತೆಗೆ ಸದ್ಗುಣಗಳನ್ನು ಪ್ರಾಪ್ತಿ ಮಾಡಿಕೊಳ್ಳಬೇಕು. ಅಂಬಿಕಾ ಸಂಸ್ಥೆ ಸ್ಥಾಪನೆಯಾದಂದಿನಿಂದ ಭಗವಂತನಿಗೆ ಸಲ್ಲಬೇಕಾದ ಎಲ್ಲಾ ಪೂಜೆ, ಹವನಗಳು ನೆರವೇರುತ್ತಾ ಬರುತ್ತಿದೆ. ಈ ವಿದ್ಯಾಲಯ ಪುಣ್ಯಸ್ಥಳ, ಈ ಕರ್ಮವೃಕ್ಷದಲ್ಲಿ ಸತ್ಫಲಗಳು ಲಭಿಸುತ್ತಿರುತ್ತದೆ ಎಂದರು.

ನಟ್ಟೋಜ ಫೌಂಡೇಶನ್ ಟ್ರಸ್ಟ್‍ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಅವರ ಧರ್ಮಪತ್ನಿ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಪೂಜಾಕಾರ್ಯದಲ್ಲಿ ಭಾಗಿಗಳಾದರು. ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ, ಆಡಳಿತ ಮಂಡಳಿ ಸದಸ್ಯ ಸುರೇಶ್ ಶೆಟ್ಟಿ, ಉಪನ್ಯಾಸಕ ವೃಂದ, ಉಪನ್ಯಾಸಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

8 minutes ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

23 minutes ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

9 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

10 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

15 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

17 hours ago