ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನವರಾತ್ರಿ ಪೂಜಾ ಸಮಯದಲ್ಲಿ ನಡೆಯುವ ಶ್ರೀ ಮಹಾಗಣಪತಿ ಹವನ, ಶಾರದಾ ಪೂಜೆ, ಪುಸ್ತಕ ಪೂಜೆ ನಡೆಯಿತು.
ಈ ಸಂದರ್ಭ ಮಾತನಾಡಿದ ವೇದಮೂರ್ತಿ ಜಗದೀಶ ಭಟ್, ಧರ್ಮವನ್ನು ಯಾರು ರಕ್ಷಿಸುತ್ತಾರೋ ಅವರನ್ನು ಧರ್ಮ ಎಂದೂ ಕೈ ಬಿಡುವುದಿಲ್ಲ. ದೇವರ ಕೃಪೆಗೆ ಖಂಡಿತಾ ಅಂತಹವರು ಪಾತ್ರರಾಗುತ್ತಾರೆ. ವಿದ್ಯಾವಂತರಿಗೆ ವಿನಯವು ಭೂಷಣವಾಗಿರುತ್ತದೆ. ಮುಖ್ಯವಾಗಿ ಬುದ್ಧಿಯ ಜೊತೆಗೆ ಸದ್ಗುಣಗಳನ್ನು ಪ್ರಾಪ್ತಿ ಮಾಡಿಕೊಳ್ಳಬೇಕು. ಅಂಬಿಕಾ ಸಂಸ್ಥೆ ಸ್ಥಾಪನೆಯಾದಂದಿನಿಂದ ಭಗವಂತನಿಗೆ ಸಲ್ಲಬೇಕಾದ ಎಲ್ಲಾ ಪೂಜೆ, ಹವನಗಳು ನೆರವೇರುತ್ತಾ ಬರುತ್ತಿದೆ. ಈ ವಿದ್ಯಾಲಯ ಪುಣ್ಯಸ್ಥಳ, ಈ ಕರ್ಮವೃಕ್ಷದಲ್ಲಿ ಸತ್ಫಲಗಳು ಲಭಿಸುತ್ತಿರುತ್ತದೆ ಎಂದರು.
ನಟ್ಟೋಜ ಫೌಂಡೇಶನ್ ಟ್ರಸ್ಟ್ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಅವರ ಧರ್ಮಪತ್ನಿ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಪೂಜಾಕಾರ್ಯದಲ್ಲಿ ಭಾಗಿಗಳಾದರು. ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ, ಆಡಳಿತ ಮಂಡಳಿ ಸದಸ್ಯ ಸುರೇಶ್ ಶೆಟ್ಟಿ, ಉಪನ್ಯಾಸಕ ವೃಂದ, ಉಪನ್ಯಾಸಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…