ನಮ್ಮ ಆಚರಣೆಗಳ ಹಿಂದೆ ಉದಾತ್ತವಾದ ಮೌಲ್ಯಗಳಿವೆ. ಹಬ್ಬ ಹರಿದಿನಗಳನ್ನು ಕೇವಲ ರಜಾದಿನಗಳನ್ನಾಗಿ ಮಾತ್ರ ಕಂಡರೆ ಆಧ್ಯಾತ್ಮಿಕವಾಗಿ ದೊರಕಬಹುದಾದ ಸಂತಸದಿಂದ ದೂರವಾಗುತ್ತೇವೆ. ನೈಜ ಆಚರಣೆಯಲ್ಲಿ ತೊಡಗಿದಾಗ ನಮ್ಮ ಬದುಕು ಉತ್ಕøಷ್ಟಗೊಳ್ಳುತ್ತಾ ಸಾಗುತ್ತದೆ. ವಿದ್ಯಾರ್ಥಿ ಜೀವನದಿಂದಲೇ ನಮ್ಮನ್ನು ನಾವು ಹಬ್ಬ ಹರಿದಿನಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಆಚರಿಸಲಾದ ಗಣೇಶ ಚತುರ್ಥಿ ಹಬ್ಬದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಧಾರ್ಮಿಕ ವ್ಯವಸ್ಥೆಯ ಅರಿವು ಮೂಡಬೇಕು. ಹಾಗಾಗಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿನ ಗಣೇಶ ಚೌತಿಯಲ್ಲಿ ವಿದ್ಯಾರ್ಥಿ ನಾಯಕರಿಂದಲೇ ಗಣಹೋಮ ನಡೆಸಲಾಗಿದೆ. ದೇವರಿಗೆ ಆರತಿ ಬೆಳಗಿಸಲಾಗಿದೆ. ವಿದ್ಯಾರ್ಥಿಗಳೇ ಮುಂದೆ ನಿಂತು ಆಚರಣೆಯನ್ನು ನೆರವೇರಿಸಿದಾಗ ಅದರ ಮಹತ್ವದ ಅರಿವು ಮೂಡುವುದಕ್ಕೆ ಸಾಧ್ಯ ಎಂದರಲ್ಲದೆ ಹಬ್ಬಗಳು ನಮ್ಮನ್ನು ಮತ್ತಷ್ಟು ಸಂಸ್ಕಾರವಂತರನ್ನಾಗಿಸಬೇಕು. ನಾಳಿನ ಭಾರತ ಬೆಳಗುವಲ್ಲಿ ಸಂಸ್ಕಾರಸಹಿತರಾದ ಯುವಜನತೆಯ ಅವಶ್ಯಕತೆ ಇದೆ. ಇಪ್ಪತ್ತೊಂದನೆಯ ಶತಮಾನದಿಂದ ಮೊದಲ್ಗೊಂಡು ಮುಂದಿನ ಎಲ್ಲಾ ಶತಮಾನಗಳು ಭಾರತದ್ದಾಗಿರಬೇಕು ಎಂದು ನುಡಿದರು.
ಧಾರ್ಮಿಕ ಉಪನ್ಯಾಸ ನೀಡಿದ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ ಧರ್ಮ ಜಾಗೃತಿಯ ಮುಖಾಂತರ ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸುವ ನೆಲೆಯಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರು ಗಣಪತಿ ಹಬ್ಬವನ್ನು ಸಾವ್ರತ್ರೀಕರಣಗೊಳಿಸಿದರು. ಹಾಗಾಗಿ ಭಾರತಕ್ಕೆ ಸ್ವಾತಂತ್ರ್ಯ ದೊರಕುವಲ್ಲಿ ಗಣೇಶ ಚೌತಿಯ ಕೊಡುಗೆಯೂ ಇದೆ. ಸನಾತನ ಧರ್ಮವು ತನ್ನ ಅನುಯಾಯಿಗಳಿಗೆ ನಿರಂತರ ಸತ್ಪ್ರೇರಣೆ ಒದಗಿಸುತ್ತದೆ ಎಂಬುದು ಗಮನಾರ್ಹ ಎಂದು ನುಡಿದರು.
ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ, ಪುರೋಹಿತ ವೇ.ಮೂ.ಶ್ರೀಕೃಷ್ಣ ಉಪಾಧ್ಯಾಯ ಉಪಸ್ಥಿತರಿದ್ದರು. ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು. ಗಣೇಶ ಚೌತಿಯ ಪ್ರಯುಕ್ತ ವಿದ್ಯಾರ್ಥಿಗಳಿಂದ ಭಜನೆ, ಯಕ್ಷಗಾನ, ಚೆಂಡೆವಾದನ, ಚಿತ್ರಕಲೆ, ಭರತನಾಟ್ಯವೇ ಮೊದಲಾದ ಹಲವಾರು ಸಾಂಸ್ಕøತಿಕ ಕಾರ್ಯಕ್ರಮಗಳು ಆಯೋಜನೆಗೊಂಡವು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…