ಆಧುನಿಕ ದಿನಗಳಲ್ಲಿ ಶಿಕ್ಷಕರೂ ಭ್ರಷ್ಟ ವ್ಯವಸ್ಥೆಯ ಭಾಗವಾಗುತ್ತಿರುವುದು ಆತಂಕಕಾರಿ. ಅದರಲ್ಲೂ ನೈತಿಕ ಭ್ರಷ್ಟಾಚಾರ ಶೈಕ್ಷಣಿಕ ವಲಯವನ್ನು ತನ್ನ ಕಬಂಧಬಾಹುಗಳೊಳಗೆ ಸೆರೆಹಿಡಿಯಲಾರಂಭಿಸಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ತೋರಬಹುದಾದ ಮಾದರಿ ಶಿಕ್ಷಕರು ಕಡಿಮೆಯಾಗುತ್ತಿದ್ದಾರೆ ಎಂಬುದು ಬೇಸರದ ವಿಚಾರ. ಆದರೆ ಈಗ ಇರುವ ಬೆರಳೆಣಿಕೆಯ ನೈತಿಕ ಮೌಲ್ಯದ ಶಿಕ್ಷಕರು ಸಮಾಜಕ್ಕೆ, ವಿದ್ಯಾರ್ಥಿಗಳಿಗೆ ಬೆಳಕಾಗಬೇಕಿದೆ. ಅಂತಹ ಸಾಲಿನಲ್ಲಿ ರಾಮಚಂದ್ರ ಭಟ್ ಒಬ್ಬ ಆದರ್ಶ ಶಿಕ್ಷಕರೆನ್ನುವುದು ಹೆಮ್ಮೆಯ ಸಂಗತಿ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ರಾಮಚಂದ್ರ ಭಟ್ ಕೆ ಅವರನ್ನು ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳ ಪರವಾಗಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ. ಮಾತನಾಡಿ ರಾಮಚಂದ್ರ ಭಟ್ಟರು ತುಂಬಾ ಸಮಯಪ್ರಜ್ಞೆ ಹೊಂದಿರುವಂತಂಹ ವ್ಯಕ್ತಿ. ನಾಲ್ಕು ದಶಕಗಳಿಗೂ ಮೀರಿದ ಉಪನ್ಯಾಸದ ಅನುಭವ ಹೊಂದಿದ್ದರೂ ಪ್ರತಿನಿತ್ಯ ಸಿದ್ಧತೆ ಮಾಡಿಕೊಂಡೇ ತರಗತಿಗೆ ತೆರಳುತ್ತಿದ್ದಂತಹವರು. ಸ್ವತಃ ಅನುಭವದ ಗಣಿಯಾಗಿದ್ದರೂ ಕಲಿಕೆಯ ಹಂಬಲ ಇರುವಂತಹವರು ಎಂದು ನುಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಮಚಂದ್ರ ಭಟ್ ವಿದ್ಯಾರ್ಥಿಗಳು ಸಂಸ್ಥೆಯ ನಿಜವಾದ ರಾಯಭಾರಿಗಳು. ಈಗಾಗಲೇ ಪ್ರಸಿದ್ಧಿ ಪಡೆದಿರುವ ಅಂಬಿಕಾ ಸಂಸ್ಥೆಯ ಹೆಸರನ್ನು ಮತ್ತಷ್ಟು ಪಸರಿಸುವ ಕಾರ್ಯವನ್ನು ವಿದ್ಯಾರ್ಥಿಗಳು, ಶಿಕ್ಷಕರು ನಡೆಸಬೇಕಿದೆ. ರಾಜ್ಯದ ಮೂಲೆಮೂಲೆಯಲ್ಲೂ ಅಂಬಿಕಾ ಸಂಸ್ಥೆಯ ಹೆಸರು ಅನುರಣಿಸುವಂತಾಗಬೇಕು. ತನ್ನ ಕರ್ತವ್ಯದ ದಿನದಲ್ಲಿ ಎಲ್ಲರನ್ನೂ ಒಳಗೊಂಡು ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ಹಾಗೂ ಬಪ್ಪಳಿಗೆ ಸಂಸ್ಥೆಯ ನೂತನ ಪ್ರಾಂಶುಪಾಲೆ ರಾಜಶ್ರೀ ಎಸ್ ನಟ್ಟೋಜ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಕ್ಯಾಂಪಸ್ ನಿದೇಶಕ ಭಾಸ್ಕರ ಶೆಟ್ಟಿ, ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಂಸ್ಥೆಯ ಉಪಪ್ರಾಚಾರ್ಯ ಗಣೇಶ್ ಪ್ರಸಾದ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…