ಸುದ್ದಿಗಳು

#ಅಂಬಿಕಾವಿದ್ಯಾಲಯ | ದೇಶದ ಬಗೆಗಿನ ಜ್ಞಾನ ಹಾಗೂ ಹೆಮ್ಮೆ ವಿದ್ಯಾರ್ಥಿಗಳಲ್ಲಿರಬೇಕು | ಸುಬ್ರಹ್ಮಣ್ಯ ನಟ್ಟೋಜ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ನಮ್ಮ ದೇಶದ ಬಗೆಗೆ ಅರಿವು, ಸಂಸ್ಕೃತಿಯ ಬಗೆಗೆ ಜ್ಞಾನ ಹಾಗೂ ತಮ್ಮ ತನಗಳ ಬಗೆಗೆ ಹೆಮ್ಮೆ ಹೊಂದಿರುವ ವಿದ್ಯಾರ್ಥಿಗಳನ್ನು ತಯಾರು ಮಾಡುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ. ದೇಶದ ಬಗೆಗೆ ಅಪಾರ ಭಕ್ತಿ ಇರುವ ಯುವಸಮುದಾಯವನ್ನು ಸೃಷ್ಟಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಿಂದ ಆಗಬೇಕಿದೆ. ರಾಷ್ಟ್ರದ ಮುಂದೆ ಉಳಿದೆಲ್ಲವೂ ಗೌಣ ಎಂಬ ಭಾವನೆಯನ್ನು ಮಕ್ಕಳಲ್ಲಿ ಮೂಡಿಸಬೇಕಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

Advertisement
ಅವರು ಪುತ್ತೂರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ನೂತನವಾಗಿ ಪದವಿ ತರಗತಿಗಳಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ  ಮಾತನಾಡಿದರು. ದೇಶದ ರಕ್ಷಣೆ ಮುಂದಿನ ಪೀಳಿಗೆಯ ಕೈಯಲ್ಲಿದೆ. ಯುವಸಮುದಾಯವನ್ನು ಸರಿಯಾದ ಹಾದಿಯಲ್ಲಿ ಕರೆದೊಯ್ದರೆ ಮಾತ್ರ ದೇಶವು ಬದಲಾವಣೆ ಹೊಂದುವುದಕ್ಕೆ ಸಾಧ್ಯ. ಪ್ರತಿಯೊಂದು ಶಾಲಾ ಕಾಲೇಜುಗಳಲ್ಲೂ ದೇಶದ ಬಗೆಗಿನ ಚಿಂತನೆಯನ್ನು ವಿದ್ಯಾರ್ಥಿಗಳಲ್ಲಿ ಒಡಮೂಡಿಸುವ ಕಾರ್ಯ ಆಗಬೇಕಿದೆ. ಹಾಗಾದಾಗ ಮಾತ್ರ ದೇಶದ ಭವಿಷ್ಯ ಮತ್ತಷ್ಟು ಸುಂದರವಾಗಿರಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ, ಯಾವುದು ನಮಗೆ ತಿಳಿದಿರುವುದಿಲ್ಲವೋ ಅದನ್ನು ತಿಳಿಯುವುದೇ ಶಿಕ್ಷಣ. ನಮ್ಮನ್ನು ನಾವು ಅರ್ಥ ಮಾಡಿಕೊಳ್ಳುವುದಕ್ಕೂ ಶಿಕ್ಷಣದ ಅಗತ್ಯವಿದೆ. ನಮ್ಮ ತಪ್ಪುಗಳನ್ನು ನಾವು ತಿದ್ದಿಕೊಂಡಾಗ ಪಡೆದ ಶಿಕ್ಷಣಕ್ಕೆ ಅರ್ಥ ದೊರಕುವುದಕ್ಕೆ ಸಾಧ್ಯ ಎಂದರು.
ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಸ್ವಾಗತಿಸಿ, ಪ್ರಸ್ತಾವನೆಗೈದರು. ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ ವಂದಿಸಿ, ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಮಖರ ಸೋಮಯಾಜಿ ಕಾರ್ಯಕ್ರಮ ನಿರ್ವಹಿಸಿದರು.
ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ತಿಲಕವನ್ನಿತ್ತು ಆಡಳಿತ ಮಂಡಳಿ ಹಾಗೂ ಗುರುವೃಂದದವರು ಸ್ವಾಗತಕೋರಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

10 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

10 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

10 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

10 hours ago

ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

10 hours ago

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…

10 hours ago