ಅಂಬಿಕಾದಲ್ಲಿ ರಕ್ಷಾಬಂಧನ ಕಾರ್ಯಕ್ರಮ | ಕ್ಷಾತ್ರಧರ್ಮವನ್ನು ಪರಿಪಾಲಿಸದಿದ್ದರೆ ಸಂಸ್ಕೃತಿ ನಷ್ಟವಾಗುವ ಆತಂಕ – ಬಂಗಾರಡ್ಕ ವಿಶ್ವೇಶ್ವರ ಭಟ್‌ |

August 12, 2022
2:56 PM

ಸಾಮಾಜಿಕ ಚಿಂತನೆಯ ಮೂಲಕ ಸಾಂಸ್ಕೃತಿಕ ಏಕತೆಯನ್ನು ಸಾಧಿಸಿ ಸದೃಢ ಭಾರತವನ್ನು ನಿರ್ಮಿಸುವುದು ವಿದ್ಯಾರ್ಥಿಗಳ ಜೀವನದ ಗುರಿಯಾಗಬೇಕು. ಧಾರ್ಮಿಕತೆಯ ಲೇಪದೊಂದಿಗೆ ಕ್ಷಾತ್ರಧರ್ಮವನ್ನು ಪರಿಪಾಲಿಸದಿದ್ದರೆ ಸಂಸ್ಕೃತಿ ನಷ್ಟವಾಗುವ ಆತಂಕವಿದೆ. ಬಾಹ್ಯಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಶಕ್ತಿಶಾಲಿ ದೇಶವನ್ನು ಕಟ್ಟುವ ಮೂಲಕ ವಿದ್ಯಾರ್ಥಿಗಳ ಬದುಕು ರಾಷ್ಟ್ರಕ್ಕೆ ಪ್ರೇರಣೆಯಾಗಬೇಕು ಎಂದು ಹಿರಿಯ ಲೇಖಕ, ಸಾಮಾಜಿಕ ಮುಂದಾಳು ವಿಶ್ವೇಶ್ವರ ಭಟ್ ಬಂಗಾರಡ್ಕ ಹೇಳಿದರು.

ಅವರು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಹಾಗೂ ಸಂಸ್ಕೃತೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗುರುವಾರ ಮಾತನಾಡಿದರು.

ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಮುಖ್ಯ ಅತಿಥಿಯಾಗಿದ್ದ ಯುವವಾಗ್ಮಿ ಗಣಿತ ಹಾಗೂ ಸಂಸ್ಕೃತ ಉಪನ್ಯಾಸಕ ಆದರ್ಶ ಗೋಖಲೆ ಮಾತನಾಡಿ ಪ್ರತಿಯೊಂದು ಹಬ್ಬವೂ ಪ್ರೇರಣೆ, ಆತ್ಮವಿಶ್ವಾಸವನ್ನು ತುಂಬುತ್ತದೆ. ಸೋದರ ಭಾವ ಜಾಗೃತಗೊಳಿಸಿ ಹೊಸ ಚೈತನ್ಯ ಮೂಡಿಸುವ ಶಕ್ತಿ ರಕ್ಷಾ ಬಂಧನಕ್ಕೆ ಇದೆ. ಜಗತ್ತನ್ನು ಗೆಲ್ಲುವುದಾದರೆ ಅದು ಪ್ರೀತಿಯಿಂದ ಸಾಧ್ಯ. ಪ್ರಪಂಚದಾದ್ಯಂತ ಅಣ್ಣ ತಂಗಿ ಎಂಬ ಸಂಬಂಧವನ್ನು ಬೆಸೆಯುವ ಭಾವನೆ, ಹಾಗೂ ಅವಿನಾಭಾವ ಸಂಬಂಧವನ್ನು ರಕ್ಷೆ ಎಲ್ಲರಲ್ಲೂ ತುಂಬುತ್ತದೆ. ದೇಶದ ರಕ್ಷೆ, ಸಸ್ಯ ಸಂರಕ್ಷಣೆಯನ್ನು ಸಾರುವ ಈ ರಕ್ಷಾಬಂಧನ ಸ್ವಾಭಿಮಾನ, ಪರಂಪರೆಯನ್ನು ಅಂಬಿಕಾದಲ್ಲಿ ಜಾಗೃತಗೊಳಿಸುವಲ್ಲಿ ಸಹಕಾರಿಯಾಗಲಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ಮಹಾಭಾರತ ಕಾಲದಿಂದಲೂ ಪ್ರಚಲಿತದಲ್ಲಿರುವ ರಕ್ಷಾಬಂಧನದ ಪಾವಿತ್ರ್ಯತೆಯನ್ನು ಅರ್ಥೈಸಿ, ನುಡಿದುದನ್ನು ನಡೆಯಲ್ಲಿ ತೋರುವ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು. ರಕ್ಷಾಬಂಧನದ ಮಹತ್ವವನ್ನು ಅರಿತು ಅದರಂತೆ ಜೀವನದಲ್ಲಿ ಮುನ್ನಡೆಯಬೇಕು ಎಂದರು.

ಶ್ರಾವಣ ಸಂಸ್ಕೃತೋತ್ಸವದ ಮಹತ್ವದ ಕುರಿತು ವಿದ್ಯಾರ್ಥಿನಿ ಹಿತಾ ಕಜೆ ಮಾತನಾಡಿದರೆ, ಶ್ರೀರಾಮಸ್ತುತಿ ಕಾರ್ಯಕ್ರಮವನ್ನು ವಿದ್ಯಾರ್ಥಿನಿ ವರಲಕ್ಷ್ಮಿ ನಡೆಸಿಕೊಟ್ಟರು. ಖಜಾಂಚಿ ರಾಜಶ್ರೀ ನಟ್ಟೋಜ, ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ, ಬಪ್ಪಳಿಗೆ ಸಂಸ್ಥೆಯ ಪ್ರಾಚಾರ್ಯೆ  ಸುಚಿತ್ರಾ ಪ್ರಭು, ಉಪಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ ಎಸ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಆಶಿತಾ, ಅರ್ಪಿತಾ, ಅಪೇಕ್ಷಾ, ಪಾವನಾ, ಶ್ರಾವ್ಯಾ, ಶಾನ್ವಿ ಪ್ರಾರ್ಥಿಸಿ, ವಿದ್ಯಾರ್ಥಿ ಅಭಿರಾಮ ಭಟ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಉತ್ಸವಿ ರೈ ನಿರೂಪಿಸಿ, ಉಪನ್ಯಾಸಕಿ ಗೀತಾ ಸಿ ಕೆ ಹಾಗೂ ಸುಮನಾ ವಂದಿಸಿದರು. ಉಪನ್ಯಾಸಕ ಸತೀಶ್ ಕೆ ಕಾರ್ಯಕ್ರಮ ನಿರೂಪಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror