Advertisement
ಸುದ್ದಿಗಳು

ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ಮೇ.2 ರಿಂದ ಸೇತುಬಂಧ ತರಗತಿ ಆರಂಭ | ಕೊರೋನಾದಿಂದ ಪ್ರೌಢಶಾಲೆಯಲ್ಲಿ ಕಳೆದುಕೊಂಡ ಪಾಠಗಳೂ ಸೇರಿದಂತೆ ಪಿಯು ತರಬೇತಿ

Share

ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಮೇ.2ರಿಂದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸೇತುಬಂಧ ತರಗತಿಗಳು ಆರಂಭಗೊಳ್ಳಲಿವೆ. ಸೇತು ಬಂಧ ತರಗತಿಗಳು ಹತ್ತನೆಯ ತರಗತಿಯಿಂದ ಪ್ರಥಮ ಪಿಯು ತರಗತಿಗೆ ಸೇರಿಕೊಂಡಿರುವ ಅಥವ ಸೇರಿಕೊಳ್ಳಬಯಸುವ ಯಾವುದೇ ವಿದ್ಯಾರ್ಥಿಗೆ ಉಚಿತವಾಗಿ ದೊರಕಲಿವೆ.

Advertisement
ಪಿಯುಸಿ ತರುವಾಯ ಜೆಇಇ, ನೀಟ್, ಸಿಇಟಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಬಯಸುವ ವಿದ್ಯಾರ್ಥಿಗಳು ಪ್ರೌಢಶಾಲಾ ಮಟ್ಟದಿಂದಲೇ ಪಠ್ಯ ವಿಷಯಗಳನ್ನು ಸಮರ್ಪಕವಾಗಿ ಅಧ್ಯಯನ ಮಾಡಿಕೊಂಡೇ ಪಿಯು ಶಿಕ್ಷಣ ಪಡೆಯಬೇಕಾದ ಅಗತ್ಯವಿದೆ. ಆದರೆ ಕಳೆದ ಎರಡು – ಮೂರು ವರ್ಷಗಳಿಂದ ಕೊರೋನಾ ಕಾರಣಕ್ಕಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅನೇಕ ಪಾಠ ಪ್ರವಚನಗಳು ಕೈತಪ್ಪಿವೆ. ಜತೆಗೆ ಪಠ್ಯ ವಿಷಯಗಳೂ ಕಡಿತಗೊಂಡಿವೆ. ಇದು ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಂದರ್ಭದಲ್ಲಿ ಸಮಸ್ಯೆಯಾಗಿ ಪರಿಣಮಿಸಲಿದೆ. ಹಾಗಾಗಿಯೇ ಈ ಸೇತುಬಂಧ ತರಗತಿಗಳನ್ನು ಉಚಿತವಾಗಿ ಹಮ್ಮಿಕೊಳ್ಳಲಾಗಿದೆ.
ಸೇತುಬಂಧ ತರಗತಿಗಳಲ್ಲಿ ನುರಿತ ಹಾಗೂ ವಿಷಯ ತಜ್ಞ, ಅನುಭವಿ ಉಪನ್ಯಾಸಕರು ತರಗತಿ ನಡೆಸಿಕೊಡಲಿದ್ದಾರೆ. ಪ್ರಥಮ ಪಿಯುಸಿ ಪಠ್ಯದ ಬಗೆಗಿನ ಉಪನ್ಯಾಸ, ಮಾಹಿತಿ, ತರಬೇತಿಗಳಲ್ಲದೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಕೊರೋನಾ ಕಾರಣಕ್ಕಾಗಿ ಕಳೆದುಕೊಂಡ ಗಣಿತ, ವಿಜ್ಞಾನ ಪಠ್ಯಗಳನ್ನೂ ಬೋಧಿಸಿ, ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅವರನ್ನು ತಯಾರು ಮಾಡಲಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯನ್ನೂ ವೈಯಕ್ತಿಕವಾಗಿ ಗಮನಿಸಿ, ವಿಷಯಗಳನ್ನು ಮನದಟ್ಟು ಮಾಡಿಕೊಡುವುದಲ್ಲದೆ, ಆತನನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮರ್ಪಕವಾಗಿ ತಯಾರು ಮಾಡುವ ಗುರಿಯನ್ನು ಈ ಸೇತುಬಂಧ ತರಗತಿಗಳು ಒಳಗೊಂಡಿವೆ.
ಈಗಾಗಲೇ ಅನೇಕ ಮಂದಿ ವಿದ್ಯಾರ್ಥಿಗಳು ಈ ತರಗತಿಗಳಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇನ್ನು ಕೂಡ ಆಸಕ್ತರಿಗೆ ಅವಕಾಶವನ್ನು ಮುಕ್ತವಾಗಿಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ : 9448835488
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

3 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

7 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

7 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

7 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

19 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago