ಸುದ್ದಿಗಳು

ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ಮೇ.2 ರಿಂದ ಸೇತುಬಂಧ ತರಗತಿ ಆರಂಭ | ಕೊರೋನಾದಿಂದ ಪ್ರೌಢಶಾಲೆಯಲ್ಲಿ ಕಳೆದುಕೊಂಡ ಪಾಠಗಳೂ ಸೇರಿದಂತೆ ಪಿಯು ತರಬೇತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಮೇ.2ರಿಂದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸೇತುಬಂಧ ತರಗತಿಗಳು ಆರಂಭಗೊಳ್ಳಲಿವೆ. ಸೇತು ಬಂಧ ತರಗತಿಗಳು ಹತ್ತನೆಯ ತರಗತಿಯಿಂದ ಪ್ರಥಮ ಪಿಯು ತರಗತಿಗೆ ಸೇರಿಕೊಂಡಿರುವ ಅಥವ ಸೇರಿಕೊಳ್ಳಬಯಸುವ ಯಾವುದೇ ವಿದ್ಯಾರ್ಥಿಗೆ ಉಚಿತವಾಗಿ ದೊರಕಲಿವೆ.

Advertisement
ಪಿಯುಸಿ ತರುವಾಯ ಜೆಇಇ, ನೀಟ್, ಸಿಇಟಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಬಯಸುವ ವಿದ್ಯಾರ್ಥಿಗಳು ಪ್ರೌಢಶಾಲಾ ಮಟ್ಟದಿಂದಲೇ ಪಠ್ಯ ವಿಷಯಗಳನ್ನು ಸಮರ್ಪಕವಾಗಿ ಅಧ್ಯಯನ ಮಾಡಿಕೊಂಡೇ ಪಿಯು ಶಿಕ್ಷಣ ಪಡೆಯಬೇಕಾದ ಅಗತ್ಯವಿದೆ. ಆದರೆ ಕಳೆದ ಎರಡು – ಮೂರು ವರ್ಷಗಳಿಂದ ಕೊರೋನಾ ಕಾರಣಕ್ಕಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅನೇಕ ಪಾಠ ಪ್ರವಚನಗಳು ಕೈತಪ್ಪಿವೆ. ಜತೆಗೆ ಪಠ್ಯ ವಿಷಯಗಳೂ ಕಡಿತಗೊಂಡಿವೆ. ಇದು ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಂದರ್ಭದಲ್ಲಿ ಸಮಸ್ಯೆಯಾಗಿ ಪರಿಣಮಿಸಲಿದೆ. ಹಾಗಾಗಿಯೇ ಈ ಸೇತುಬಂಧ ತರಗತಿಗಳನ್ನು ಉಚಿತವಾಗಿ ಹಮ್ಮಿಕೊಳ್ಳಲಾಗಿದೆ.
ಸೇತುಬಂಧ ತರಗತಿಗಳಲ್ಲಿ ನುರಿತ ಹಾಗೂ ವಿಷಯ ತಜ್ಞ, ಅನುಭವಿ ಉಪನ್ಯಾಸಕರು ತರಗತಿ ನಡೆಸಿಕೊಡಲಿದ್ದಾರೆ. ಪ್ರಥಮ ಪಿಯುಸಿ ಪಠ್ಯದ ಬಗೆಗಿನ ಉಪನ್ಯಾಸ, ಮಾಹಿತಿ, ತರಬೇತಿಗಳಲ್ಲದೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಕೊರೋನಾ ಕಾರಣಕ್ಕಾಗಿ ಕಳೆದುಕೊಂಡ ಗಣಿತ, ವಿಜ್ಞಾನ ಪಠ್ಯಗಳನ್ನೂ ಬೋಧಿಸಿ, ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅವರನ್ನು ತಯಾರು ಮಾಡಲಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯನ್ನೂ ವೈಯಕ್ತಿಕವಾಗಿ ಗಮನಿಸಿ, ವಿಷಯಗಳನ್ನು ಮನದಟ್ಟು ಮಾಡಿಕೊಡುವುದಲ್ಲದೆ, ಆತನನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮರ್ಪಕವಾಗಿ ತಯಾರು ಮಾಡುವ ಗುರಿಯನ್ನು ಈ ಸೇತುಬಂಧ ತರಗತಿಗಳು ಒಳಗೊಂಡಿವೆ.
ಈಗಾಗಲೇ ಅನೇಕ ಮಂದಿ ವಿದ್ಯಾರ್ಥಿಗಳು ಈ ತರಗತಿಗಳಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇನ್ನು ಕೂಡ ಆಸಕ್ತರಿಗೆ ಅವಕಾಶವನ್ನು ಮುಕ್ತವಾಗಿಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ : 9448835488
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

1 hour ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

2 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago