Advertisement
ಸುದ್ದಿಗಳು

ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ಮೇ.2 ರಿಂದ ಸೇತುಬಂಧ ತರಗತಿ ಆರಂಭ | ಕೊರೋನಾದಿಂದ ಪ್ರೌಢಶಾಲೆಯಲ್ಲಿ ಕಳೆದುಕೊಂಡ ಪಾಠಗಳೂ ಸೇರಿದಂತೆ ಪಿಯು ತರಬೇತಿ

Share

ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಮೇ.2ರಿಂದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸೇತುಬಂಧ ತರಗತಿಗಳು ಆರಂಭಗೊಳ್ಳಲಿವೆ. ಸೇತು ಬಂಧ ತರಗತಿಗಳು ಹತ್ತನೆಯ ತರಗತಿಯಿಂದ ಪ್ರಥಮ ಪಿಯು ತರಗತಿಗೆ ಸೇರಿಕೊಂಡಿರುವ ಅಥವ ಸೇರಿಕೊಳ್ಳಬಯಸುವ ಯಾವುದೇ ವಿದ್ಯಾರ್ಥಿಗೆ ಉಚಿತವಾಗಿ ದೊರಕಲಿವೆ.

ಪಿಯುಸಿ ತರುವಾಯ ಜೆಇಇ, ನೀಟ್, ಸಿಇಟಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಬಯಸುವ ವಿದ್ಯಾರ್ಥಿಗಳು ಪ್ರೌಢಶಾಲಾ ಮಟ್ಟದಿಂದಲೇ ಪಠ್ಯ ವಿಷಯಗಳನ್ನು ಸಮರ್ಪಕವಾಗಿ ಅಧ್ಯಯನ ಮಾಡಿಕೊಂಡೇ ಪಿಯು ಶಿಕ್ಷಣ ಪಡೆಯಬೇಕಾದ ಅಗತ್ಯವಿದೆ. ಆದರೆ ಕಳೆದ ಎರಡು – ಮೂರು ವರ್ಷಗಳಿಂದ ಕೊರೋನಾ ಕಾರಣಕ್ಕಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅನೇಕ ಪಾಠ ಪ್ರವಚನಗಳು ಕೈತಪ್ಪಿವೆ. ಜತೆಗೆ ಪಠ್ಯ ವಿಷಯಗಳೂ ಕಡಿತಗೊಂಡಿವೆ. ಇದು ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಂದರ್ಭದಲ್ಲಿ ಸಮಸ್ಯೆಯಾಗಿ ಪರಿಣಮಿಸಲಿದೆ. ಹಾಗಾಗಿಯೇ ಈ ಸೇತುಬಂಧ ತರಗತಿಗಳನ್ನು ಉಚಿತವಾಗಿ ಹಮ್ಮಿಕೊಳ್ಳಲಾಗಿದೆ.
ಸೇತುಬಂಧ ತರಗತಿಗಳಲ್ಲಿ ನುರಿತ ಹಾಗೂ ವಿಷಯ ತಜ್ಞ, ಅನುಭವಿ ಉಪನ್ಯಾಸಕರು ತರಗತಿ ನಡೆಸಿಕೊಡಲಿದ್ದಾರೆ. ಪ್ರಥಮ ಪಿಯುಸಿ ಪಠ್ಯದ ಬಗೆಗಿನ ಉಪನ್ಯಾಸ, ಮಾಹಿತಿ, ತರಬೇತಿಗಳಲ್ಲದೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಕೊರೋನಾ ಕಾರಣಕ್ಕಾಗಿ ಕಳೆದುಕೊಂಡ ಗಣಿತ, ವಿಜ್ಞಾನ ಪಠ್ಯಗಳನ್ನೂ ಬೋಧಿಸಿ, ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅವರನ್ನು ತಯಾರು ಮಾಡಲಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯನ್ನೂ ವೈಯಕ್ತಿಕವಾಗಿ ಗಮನಿಸಿ, ವಿಷಯಗಳನ್ನು ಮನದಟ್ಟು ಮಾಡಿಕೊಡುವುದಲ್ಲದೆ, ಆತನನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮರ್ಪಕವಾಗಿ ತಯಾರು ಮಾಡುವ ಗುರಿಯನ್ನು ಈ ಸೇತುಬಂಧ ತರಗತಿಗಳು ಒಳಗೊಂಡಿವೆ.
ಈಗಾಗಲೇ ಅನೇಕ ಮಂದಿ ವಿದ್ಯಾರ್ಥಿಗಳು ಈ ತರಗತಿಗಳಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇನ್ನು ಕೂಡ ಆಸಕ್ತರಿಗೆ ಅವಕಾಶವನ್ನು ಮುಕ್ತವಾಗಿಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ : 9448835488
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

5 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

15 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

24 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

24 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago