ಸುದ್ದಿಗಳು

ದೇಶವನ್ನು ಹೀಯಾಳಿಸುವುದು ನೈತಿಕ ಅಧಃಪತನದ ಸಂಕೇತ : ಆದರ್ಶ ಗೋಖಲೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿದ್ಯೆ ವಿನಯವಂತಿಕೆಯನ್ನು ಕೊಡಬೇಕು. ವಿನಯವಂತಿಕೆ ಇಲ್ಲದ ವಿದ್ಯೆಗೆ ಮೌಲ್ಯವಿಲ್ಲ. ನಮ್ಮ ದೇಶದಲ್ಲಿ ಜನಿಸಿ, ಇಲ್ಲಿನ ಋಣದೊಂದಿಗೆ ಬೆಳೆದು, ಬೇರೆ ಬೇರೆ ಕಾರಣಗಳಿಗೆ ವಿದೇಶಕ್ಕೆ ತೆರಳಿದ ನಂತರ ನಮ್ಮ ದೇಶವನ್ನೇ ಹೀಯಾಳಿಸುವುದು ನೈತಿಕ ಅಧಃಪತನವನ್ನು ತೋರಿಸುತ್ತದೆ. ದೇಶದ ಹಿರಿಮೆಯನ್ನು ಅರ್ಥ ಮಾಡಿಕೊಂಡು, ದೇಶದ ಘನತೆ ಹೆಚ್ಚಿಸುವಂತಹ ನಡೆನುಡಿಗಳೊಂದಿಗೆ ಬದುಕಿ ತೋರಿಸಬೇಕು ಎಂದು ವಾಗ್ಮಿ ಆದರ್ಶ ಗೋಖಲೆ ಹೇಳಿದರು.

Advertisement

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳ ದಿನಾಚರಣೆಯಂದು ಮುಖ್ಯ ಅತಿಥಿಯಾಗಿ ಭಾಗವಹಿಸಿ  ಮಾತನಾಡಿದರು.

ಯಶಸ್ಸು ಅನ್ನುವುದು ಆಮದು ಮಾಡಿಕೊಳ್ಳುವ ವಸ್ತುವಲ್ಲ. ನಮ್ಮೊಳಗೆ ಪೂರ್ವಸಿದ್ಧತೆ ಮಾಡಿಕೊಂಡು ಅಚಲವಾದ ನಂಬಿಕೆಯೊಂದಿಗೆ ಮುಂದುವರೆದಾಗ ಮಾತ್ರ ಯಶಸ್ಸು ನಮ್ಮದಾಗುವುದಕ್ಕೆ ಸಾಧ್ಯ. ಮನಸಿನ ಆವರಣದೊಳಗೆ ಸಾಧಿಸಬೇಕಾದದ್ದನ್ನು ಕಲ್ಪಿಸಿಕೊಂಡು ಅದರ ಸಾಕಾರಕ್ಕೆ ಬೇಕಾದ ಪೂರ್ವಭಾವಿ ಯೋಜನೆಗಳನ್ನು ಹಮ್ಮಿಕೊಳ್ಳಬೇಕು. ಆಗ ಎಲ್ಲವೂ ಸುಲಭ ಸಾಧ್ಯವೆನಿಸುತ್ತದೆ. ಅಂಕ,  ಶ್ರೇಣಿಗಳೆಲ್ಲ ಕೆಲವು ದಿನಗಳವರೆಗೆ ಮಾತ್ರ ಮುಖ್ಯವೆನಿಸುತ್ತದೆ. ಆದರೆ ಸಂಸ್ಕಾರ, ದೇಶಪ್ರೇಮಗಳು ಶಾಶ್ವತವಾಗಿ ಬೇಕಾಗುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಇಂದು ವಿದೇಶೀಯರು ನಮ್ಮ ದೇಸೀಯ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದಾರೆ. ನಮ್ಮ ದೇಶದಲ್ಲಿ, ನಮ್ಮ ಆಚಾರ ವಿಚಾರಗಳಲ್ಲಿ ಅಪಾರ ಮೌಲ್ಯಗಳಿವೆ ಎಂಬುದನ್ನು ಯುವಸಮೂಹ ಅರಿತುಕೊಳ್ಳಬೇಕಿದೆ. ದೇಶವನ್ನು ಪ್ರೀತಿಸುವ, ದೇಶವನ್ನು ಗೌರವಿಸುವ ಯುವ ಸಮುದಾಯವಾಗಿ ನಾವು ಬೆಳೆಯಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಸದಸ್ಯ ಸುರೇಶ್ ಶೆಟ್ಟಿ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಪ್ರಾಂಶುಪಾಲ ಶಂಕರನಾರಾಯಣ ಭಟ್, ಉಪಪ್ರಾಂಶುಪಾಲ ರಾಮಚಂದ್ರ ಭಟ್, ಕ್ಯಾಂಪಸ್ ನಿರ್ದೇಶಕ ಭಾಸ್ಕರ ಶೆಟ್ಟಿ, ವಿದ್ಯಾರ್ಥಿ ನಾಯಕ ಮೋಹಿತ್ ಕೆ.ಎಸ್, ಉಪನ್ಯಾಸಕರು, ಉಪನ್ಯಾಸಕೇತರ ವೃಂದ, ವಸತಿನಿಲಯ ಪಾಲಕರು ಹಾಜರಿದ್ದರು. ವಿದ್ಯಾರ್ಥಿ ನಾಯಕಿ ಪ್ರೀತಲ್ ದಯಾನಂದ್ ಹಾಗೂ ವಿದ್ಯಾರ್ಥಿ ಕೌಶಿಕ್ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿ ಪ್ರಣಮ್ಯ ಬಿ ಪ್ರಾರ್ಥಿಸಿದರು. ಉಪನ್ಯಾಸಕ ತಿಲೋಶ್ ಕುಮಾರ್ ಸಿ ಸ್ವಾಗತಿಸಿದರು. ಉಪನ್ಯಾಸಕಿ ಶ್ವೇತಾ ಕೆ.ವಿ ವಂದಿಸಿದರು. ಉಪನ್ಯಾಸಕಿ ವಿನುತಾ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

17 hours ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

20 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

22 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

23 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

2 days ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

2 days ago