Advertisement
ಸುದ್ದಿಗಳು

ದೇಶವನ್ನು ಹೀಯಾಳಿಸುವುದು ನೈತಿಕ ಅಧಃಪತನದ ಸಂಕೇತ : ಆದರ್ಶ ಗೋಖಲೆ

Share

ವಿದ್ಯೆ ವಿನಯವಂತಿಕೆಯನ್ನು ಕೊಡಬೇಕು. ವಿನಯವಂತಿಕೆ ಇಲ್ಲದ ವಿದ್ಯೆಗೆ ಮೌಲ್ಯವಿಲ್ಲ. ನಮ್ಮ ದೇಶದಲ್ಲಿ ಜನಿಸಿ, ಇಲ್ಲಿನ ಋಣದೊಂದಿಗೆ ಬೆಳೆದು, ಬೇರೆ ಬೇರೆ ಕಾರಣಗಳಿಗೆ ವಿದೇಶಕ್ಕೆ ತೆರಳಿದ ನಂತರ ನಮ್ಮ ದೇಶವನ್ನೇ ಹೀಯಾಳಿಸುವುದು ನೈತಿಕ ಅಧಃಪತನವನ್ನು ತೋರಿಸುತ್ತದೆ. ದೇಶದ ಹಿರಿಮೆಯನ್ನು ಅರ್ಥ ಮಾಡಿಕೊಂಡು, ದೇಶದ ಘನತೆ ಹೆಚ್ಚಿಸುವಂತಹ ನಡೆನುಡಿಗಳೊಂದಿಗೆ ಬದುಕಿ ತೋರಿಸಬೇಕು ಎಂದು ವಾಗ್ಮಿ ಆದರ್ಶ ಗೋಖಲೆ ಹೇಳಿದರು.

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳ ದಿನಾಚರಣೆಯಂದು ಮುಖ್ಯ ಅತಿಥಿಯಾಗಿ ಭಾಗವಹಿಸಿ  ಮಾತನಾಡಿದರು.

ಯಶಸ್ಸು ಅನ್ನುವುದು ಆಮದು ಮಾಡಿಕೊಳ್ಳುವ ವಸ್ತುವಲ್ಲ. ನಮ್ಮೊಳಗೆ ಪೂರ್ವಸಿದ್ಧತೆ ಮಾಡಿಕೊಂಡು ಅಚಲವಾದ ನಂಬಿಕೆಯೊಂದಿಗೆ ಮುಂದುವರೆದಾಗ ಮಾತ್ರ ಯಶಸ್ಸು ನಮ್ಮದಾಗುವುದಕ್ಕೆ ಸಾಧ್ಯ. ಮನಸಿನ ಆವರಣದೊಳಗೆ ಸಾಧಿಸಬೇಕಾದದ್ದನ್ನು ಕಲ್ಪಿಸಿಕೊಂಡು ಅದರ ಸಾಕಾರಕ್ಕೆ ಬೇಕಾದ ಪೂರ್ವಭಾವಿ ಯೋಜನೆಗಳನ್ನು ಹಮ್ಮಿಕೊಳ್ಳಬೇಕು. ಆಗ ಎಲ್ಲವೂ ಸುಲಭ ಸಾಧ್ಯವೆನಿಸುತ್ತದೆ. ಅಂಕ,  ಶ್ರೇಣಿಗಳೆಲ್ಲ ಕೆಲವು ದಿನಗಳವರೆಗೆ ಮಾತ್ರ ಮುಖ್ಯವೆನಿಸುತ್ತದೆ. ಆದರೆ ಸಂಸ್ಕಾರ, ದೇಶಪ್ರೇಮಗಳು ಶಾಶ್ವತವಾಗಿ ಬೇಕಾಗುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಇಂದು ವಿದೇಶೀಯರು ನಮ್ಮ ದೇಸೀಯ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದಾರೆ. ನಮ್ಮ ದೇಶದಲ್ಲಿ, ನಮ್ಮ ಆಚಾರ ವಿಚಾರಗಳಲ್ಲಿ ಅಪಾರ ಮೌಲ್ಯಗಳಿವೆ ಎಂಬುದನ್ನು ಯುವಸಮೂಹ ಅರಿತುಕೊಳ್ಳಬೇಕಿದೆ. ದೇಶವನ್ನು ಪ್ರೀತಿಸುವ, ದೇಶವನ್ನು ಗೌರವಿಸುವ ಯುವ ಸಮುದಾಯವಾಗಿ ನಾವು ಬೆಳೆಯಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಸದಸ್ಯ ಸುರೇಶ್ ಶೆಟ್ಟಿ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಪ್ರಾಂಶುಪಾಲ ಶಂಕರನಾರಾಯಣ ಭಟ್, ಉಪಪ್ರಾಂಶುಪಾಲ ರಾಮಚಂದ್ರ ಭಟ್, ಕ್ಯಾಂಪಸ್ ನಿರ್ದೇಶಕ ಭಾಸ್ಕರ ಶೆಟ್ಟಿ, ವಿದ್ಯಾರ್ಥಿ ನಾಯಕ ಮೋಹಿತ್ ಕೆ.ಎಸ್, ಉಪನ್ಯಾಸಕರು, ಉಪನ್ಯಾಸಕೇತರ ವೃಂದ, ವಸತಿನಿಲಯ ಪಾಲಕರು ಹಾಜರಿದ್ದರು. ವಿದ್ಯಾರ್ಥಿ ನಾಯಕಿ ಪ್ರೀತಲ್ ದಯಾನಂದ್ ಹಾಗೂ ವಿದ್ಯಾರ್ಥಿ ಕೌಶಿಕ್ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿ ಪ್ರಣಮ್ಯ ಬಿ ಪ್ರಾರ್ಥಿಸಿದರು. ಉಪನ್ಯಾಸಕ ತಿಲೋಶ್ ಕುಮಾರ್ ಸಿ ಸ್ವಾಗತಿಸಿದರು. ಉಪನ್ಯಾಸಕಿ ಶ್ವೇತಾ ಕೆ.ವಿ ವಂದಿಸಿದರು. ಉಪನ್ಯಾಸಕಿ ವಿನುತಾ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

6 minutes ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

3 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

9 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

15 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

15 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

24 hours ago