ಅಂಬಿಕಾ ಕಾಲೇಜು | ಯುವಸಮೂಹದ ಕಣ್ಣ ಮುಂದೆ ತುಳುನಾಡ ಸಂಸ್ಕೃತಿಯ ಅನಾವರಣ

October 1, 2022
2:29 PM

ಕಾಲೇಜು ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಗೆ ಒಮ್ಮಿಂದೊಮ್ಮೆಗೆ ಆಶ್ಚರ್ಯ…! ಇದೇನು?.  ಅಂತ ಅತ್ತಿತ್ತ ನೋಡುತ್ತಿರುವಾಗಲೇ ಸಾಲು ಸಾಲು ಹುಲಿಗಳು ವೇದಿಕೆಯನ್ನೇರಿ ಕುಣಿಯಲಾರಂಭಿಸಿದ್ದವು. ವೇದಿಕೆಯೊಂದರಲ್ಲೇ ಮೂವತ್ತಕ್ಕಿಂತಲೂ ಅಧಿಕ ಹುಲಿಗಳು ನರ್ತಿಸುವ ಅಪೂರ್ವ ಅವಕಾಶವನ್ನು ನೆರೆದ ಸಾವಿರಾರು ಮಂದಿ ತಮ್ಮದಾಗಿಸಿಕೊಂಡರು.

Advertisement
Advertisement
Advertisement
Advertisement
Advertisement

ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ವಾರ್ಷಿಕೋತ್ಸವ – ಮಾನಸೋಲ್ಲಾಸ 2022-23 ನಡೆಯುತ್ತಿದ್ದ ಮಧ್ಯೆಯಲ್ಲಿ ಈ ಹುಲಿಗಳ ಆಗಮನವಾಯಿತು. ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡ ಪ್ರಸ್ತುತಿಯಲ್ಲಿ ಅನೇಕ ಮಂದಿ ಹುಲಿವೇಷಧಾರಿಗಳಾಗಿ ಪುತ್ತೂರಿಗರ ಮನರಂಜಿಸುತ್ತಿದ್ದಾರೆ. ಅದರ ಭಾಗವಾಗಿ ಆ ತಂಡದಿಂದ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸುಮಾರು ಅರ್ಧ ಗಂಟೆಯ ಹುಲಿನರ್ತನ ನಡೆಯಿತು. ಈ ‘ಪಿಲಿ ನಲಿಕೆ’ ಯುವಮನಸ್ಸುಗಳಲ್ಲಿ ತುಳುನಾಡಿನ ಸಂಸ್ಕೃತಿಯ ಭಾಗವನ್ನು ಅನಾವರಣಗೊಳಿಸಿತು.

Advertisement
ಕಪ್ಪು ಹುಲಿಗಳು, ಪಟ್ಟೆ ಹುಲಿಗಳು, ಚಿರತೆ ಬಣ್ಣದ ಹುಲಿಗಳು, ಅವುಗಳ ಜತೆಗೆ ಪುಟಾಣಿ ಹುಲಿಗಳು ಹಿಮ್ಮೇಳದ ಸದ್ದಿನ ಜತೆಗೆ ವೈಭವದ ಹೆಜ್ಜೆಯನ್ನಿರಿಸಿದವು. ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಪಿಲಿ ನಲಿಕೆಯ ನಾನಾ ವೈವಿಧ್ಯಗಳು ತೆರೆದುಕೊಂಡು ವಿಶಿಷ್ಟ ಕ್ಷಣಕ್ಕೆ ಸಾಕ್ಷಿಯಾಯಿತು.

ಯುವ ಸಮೂಹವನ್ನು ‘ಪಿಲಿ ನಲಿಕೆ’ ಮೂಲಕ ರಂಜಿಸಿದ ಕಲ್ಲೇಗ ಟೈಗರ್ಸ್ ಅವರನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಗೌರವಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror